Homeಕರ್ನಾಟಕಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿದ್ದಾರೆ- ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ

- Advertisement -
- Advertisement -

ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಿಡಲಾಗಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ, ನಿಯಮಗಳನ್ನು ಉಲ್ಲಂಘಿಸಿ ಹಿಂದುಳಿದ ‘ಬ’ ವರ್ಗ ಸದಸ್ಯರೊಬ್ಬರನ್ನು ಆಯ್ಕೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಕೆ.ಹೊನ್ನಮಾಚನಹಳ್ಳಿಯಲ್ಲಿ ಜರುಗಿದೆ.

ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾಗಿದ್ದ ಇಬ್ಬರು ಸದಸ್ಯರು ಇದ್ದರೂ ಆ ಸದಸ್ಯರಿಗೆ ಬೆದರಿಕೆ ಹಾಕಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಚುನಾವಣೆ ಅಧಿಕಾರಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಕುಣಿಗಲ್ ತಾಲೂಕು ಕೊರಟಿ ಗ್ರಾಮ ಪಂಚಾಯ್ತಿಗೆ 12 ಸದಸ್ಯರು ಆಯ್ಕೆಯಾಗಿದ್ದರು. ಕೊರಟಿ ವಾರ್ಡ್ ನಿಂದ ಜಯಮ್ಮ ಮತ್ತು ಹಾಲಿಗೆರೆ ವಾರ್ಡ್ ನಿಂದ ರೇಣುಕಮ್ಮ ಹಿಂದುಳಿದ ‘ಎ’ ವರ್ಗ ಮೀಸಲು ಕ್ಷೇತ್ರದಿಂದ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿತ್ತು.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಈ ಸಂದರ್ಭದಲ್ಲಿ ಕುಣಿಗಲ್ ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಹಿಂದುಳಿದ ‘ಎ’ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಫೆಬ್ರವರಿ 6ರಂದು ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾದ ಇಬ್ಬರು ಮಹಿಳಾ ಸದಸ್ಯರು ನಾಮಪತ್ರ ಸಲ್ಲಿಸದಂತೆ ಜೆಡಿಎಸ್ ಮುಖಂಡರೇ ಧಮಕಿ ಹಾಕಿದರು ಎಂದು ದೂರಲಾಗಿದೆ.

ನಿಯಮದಂತೆ ಜಯಮ್ಮ ಮತ್ತು ರೇಣುಕಮ್ಮ ಅವರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದರೂ ಜೆಡಿಎಸ್ ಮುಖಂಡರು ಈ ಇಬ್ಬರು ಮಹಿಳಾ ಸದಸ್ಯರಿಗೆ ಬೆದರಿಕೆ ಹಾಕಿ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಇದರಿಂದ ಆ ಇಬ್ಬರು ಮಹಿಳಾ ಸದಸ್ಯರು ಏನೂ ಮಾಡಲು ತೋಚದೆ ಅಸಹಾಯಕರಾಗಿ ಕುಳಿತರೆಂದು ಹೇಳಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್, ಮಹಿಳಾ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ಮತ್ತು ಅಧ್ಯಕ್ಷರಾಗಿ ಆಯ್ಕೆಯಾಗದಂತೆ ನೋಡಿಕೊಂಡಿದ್ದಾರೆ. ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗದ ಸದಸ್ಯರೊಬ್ಬರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣೆ ಉಸ್ತುವಾರಿ ಹೊತ್ತ ಚುನಾವಣಾಧಿಕಾರಿಯೂ ನಿಯಮಗಳ ಉಲ್ಲಂಘನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ ನಾನುಗೌರಿ.ಕಾಮ್ ಜೊತೆ ಮಾತನಾಡಿ, “ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನವನ್ನು ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಚುನಾವಣೆಯ ನಿಯಮಗಳನ್ನು ಉಲ್ಲಂಘಿಸಿದಂತೆ ಆಗಿದೆ. ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್ ಮುಖಂಡರು ಮಹಿಳೆಯರ ಬಗ್ಗೆ ಮಾತನಾಡುತ್ತಲೇ ಮಹಿಳೆಯರಿಗೆ ದ್ರೋಹ ಬಗೆಯುತ್ತಿದ್ದಾರೆ. ಮೀಸಲಾತಿ ಪರಿಕಲ್ಪನೆಗೆ ಪೆಟ್ಟುಕೊಟ್ಟಂತೆ ಆಗಿದೆ ಎಂದು ದೂರಿದರು.

ಹಣ ಆಮಿಷ ಮತ್ತು ಗುಲಾಮಗಿರಿಗೆ ಒಳಗಾದ ಮಹಿಳಾ ಸದಸ್ಯರು:

ಆ ಇಬ್ಬರು ಮಹಿಳಾ ಸದಸ್ಯರಿಗೆ ಹಣದ ಆಮಿಷವೊಡ್ಡಿದ್ದಾರೆ. ಜೆಡಿಎಸ್ ಮುಖಂಡರು ನೀಡಿದ ಹಣಕ್ಕೆ ಖರೀದಿಯಾಗಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. “ಹಣ ಕೊಟ್ಟು ಗೆಲ್ಲಿಸಿಕೊಂಡು ಬಂದಿದ್ದೇವೆ. ನೀವು ನ್ಯಾಯಾಲಯಕ್ಕೆ ಹೋದರೆ ಸುಮ್ಮನೆ ಬಿಡುವುದಿಲ್ಲ. ಈಗಲೂ ನೀವು ಹಣ ತೆಗೆದುಕೊಂಡಿದ್ದೀರಿ. ನಾವು ಹೇಳಿದಂತೆ ಕೇಳಬೇಕು ಅಷ್ಟೇ” ಎಂದು ಜೆಡಿಎಸ್ ಮುಖಂಡರು ಆ ಮಹಿಳಾ ಸದಸ್ಯರಿಗೆ ಧಮಕಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...