Homeಕರ್ನಾಟಕಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿದ್ದಾರೆ- ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ

- Advertisement -
- Advertisement -

ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಿಡಲಾಗಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ, ನಿಯಮಗಳನ್ನು ಉಲ್ಲಂಘಿಸಿ ಹಿಂದುಳಿದ ‘ಬ’ ವರ್ಗ ಸದಸ್ಯರೊಬ್ಬರನ್ನು ಆಯ್ಕೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಕೆ.ಹೊನ್ನಮಾಚನಹಳ್ಳಿಯಲ್ಲಿ ಜರುಗಿದೆ.

ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾಗಿದ್ದ ಇಬ್ಬರು ಸದಸ್ಯರು ಇದ್ದರೂ ಆ ಸದಸ್ಯರಿಗೆ ಬೆದರಿಕೆ ಹಾಕಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಚುನಾವಣೆ ಅಧಿಕಾರಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಕುಣಿಗಲ್ ತಾಲೂಕು ಕೊರಟಿ ಗ್ರಾಮ ಪಂಚಾಯ್ತಿಗೆ 12 ಸದಸ್ಯರು ಆಯ್ಕೆಯಾಗಿದ್ದರು. ಕೊರಟಿ ವಾರ್ಡ್ ನಿಂದ ಜಯಮ್ಮ ಮತ್ತು ಹಾಲಿಗೆರೆ ವಾರ್ಡ್ ನಿಂದ ರೇಣುಕಮ್ಮ ಹಿಂದುಳಿದ ‘ಎ’ ವರ್ಗ ಮೀಸಲು ಕ್ಷೇತ್ರದಿಂದ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿತ್ತು.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಈ ಸಂದರ್ಭದಲ್ಲಿ ಕುಣಿಗಲ್ ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಹಿಂದುಳಿದ ‘ಎ’ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಫೆಬ್ರವರಿ 6ರಂದು ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಹಿಂದುಳಿದ ‘ಎ’ ವರ್ಗದಿಂದ ಆಯ್ಕೆಯಾದ ಇಬ್ಬರು ಮಹಿಳಾ ಸದಸ್ಯರು ನಾಮಪತ್ರ ಸಲ್ಲಿಸದಂತೆ ಜೆಡಿಎಸ್ ಮುಖಂಡರೇ ಧಮಕಿ ಹಾಕಿದರು ಎಂದು ದೂರಲಾಗಿದೆ.

ನಿಯಮದಂತೆ ಜಯಮ್ಮ ಮತ್ತು ರೇಣುಕಮ್ಮ ಅವರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದರೂ ಜೆಡಿಎಸ್ ಮುಖಂಡರು ಈ ಇಬ್ಬರು ಮಹಿಳಾ ಸದಸ್ಯರಿಗೆ ಬೆದರಿಕೆ ಹಾಕಿ ನಾಮಪತ್ರ ಸಲ್ಲಿಸದಂತೆ ನೋಡಿಕೊಳ್ಳಲಾಗಿದೆ. ಇದರಿಂದ ಆ ಇಬ್ಬರು ಮಹಿಳಾ ಸದಸ್ಯರು ಏನೂ ಮಾಡಲು ತೋಚದೆ ಅಸಹಾಯಕರಾಗಿ ಕುಳಿತರೆಂದು ಹೇಳಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್, ಮಹಿಳಾ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದಂತೆ ಮತ್ತು ಅಧ್ಯಕ್ಷರಾಗಿ ಆಯ್ಕೆಯಾಗದಂತೆ ನೋಡಿಕೊಂಡಿದ್ದಾರೆ. ಕೊರಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗದ ಸದಸ್ಯರೊಬ್ಬರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣೆ ಉಸ್ತುವಾರಿ ಹೊತ್ತ ಚುನಾವಣಾಧಿಕಾರಿಯೂ ನಿಯಮಗಳ ಉಲ್ಲಂಘನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಜಿ.ಕೆ. ನಾಗಣ್ಣ ನಾನುಗೌರಿ.ಕಾಮ್ ಜೊತೆ ಮಾತನಾಡಿ, “ಹಿಂದುಳಿದ ‘ಎ’ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನವನ್ನು ಚುನಾವಣಾಧಿಕಾರಿ ಮತ್ತು ಜೆಡಿಎಸ್ ಮುಖಂಡರು ದಬ್ಬಾಳಿಕೆ ಮಾಡಿ ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅವರು ನಾಮಪತ್ರ ಸಲ್ಲಿಸದಂತೆ ತಡೆಯೊಡ್ಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಚುನಾವಣೆಯ ನಿಯಮಗಳನ್ನು ಉಲ್ಲಂಘಿಸಿದಂತೆ ಆಗಿದೆ. ತೆನೆಹೊತ್ತ ಮಹಿಳೆಯ ಗುರುತು ಹೊಂದಿರುವ ಜೆಡಿಎಸ್ ಮುಖಂಡರು ಮಹಿಳೆಯರ ಬಗ್ಗೆ ಮಾತನಾಡುತ್ತಲೇ ಮಹಿಳೆಯರಿಗೆ ದ್ರೋಹ ಬಗೆಯುತ್ತಿದ್ದಾರೆ. ಮೀಸಲಾತಿ ಪರಿಕಲ್ಪನೆಗೆ ಪೆಟ್ಟುಕೊಟ್ಟಂತೆ ಆಗಿದೆ ಎಂದು ದೂರಿದರು.

ಹಣ ಆಮಿಷ ಮತ್ತು ಗುಲಾಮಗಿರಿಗೆ ಒಳಗಾದ ಮಹಿಳಾ ಸದಸ್ಯರು:

ಆ ಇಬ್ಬರು ಮಹಿಳಾ ಸದಸ್ಯರಿಗೆ ಹಣದ ಆಮಿಷವೊಡ್ಡಿದ್ದಾರೆ. ಜೆಡಿಎಸ್ ಮುಖಂಡರು ನೀಡಿದ ಹಣಕ್ಕೆ ಖರೀದಿಯಾಗಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. “ಹಣ ಕೊಟ್ಟು ಗೆಲ್ಲಿಸಿಕೊಂಡು ಬಂದಿದ್ದೇವೆ. ನೀವು ನ್ಯಾಯಾಲಯಕ್ಕೆ ಹೋದರೆ ಸುಮ್ಮನೆ ಬಿಡುವುದಿಲ್ಲ. ಈಗಲೂ ನೀವು ಹಣ ತೆಗೆದುಕೊಂಡಿದ್ದೀರಿ. ನಾವು ಹೇಳಿದಂತೆ ಕೇಳಬೇಕು ಅಷ್ಟೇ” ಎಂದು ಜೆಡಿಎಸ್ ಮುಖಂಡರು ಆ ಮಹಿಳಾ ಸದಸ್ಯರಿಗೆ ಧಮಕಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...