Homeಕರ್ನಾಟಕಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದೆ

- Advertisement -
- Advertisement -

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಮತ ಎಣಿಕೆ ಅಧಿಕಾರಿಗಳು ಅನೂರ್ಜಿತ ಮತಪತ್ರಗಳನ್ನು ಕೂಡ ಎಣಿಕೆ ಮಾಡಿ ತಮಗೆ ಬೇಕಾದ ಅಭ್ಯರ್ಥಿಗೆ ಸಹಕರಿಸಿದ್ದಾರೆ ಎಂದು ದೂರಲಾಗಿದೆ. ಈ ಸಂಬಂಧ ಒಂದೆರಡು ಮತಗಳಿಂದ ಪರಾಭವಗೊಂಡಿರುವ ಅಭ್ಯರ್ಥಿಗಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ತುಮಕೂರು ತಾಲೂಕು ಕೋರಾ ಗ್ರಾಮದ 1 ನೇ ವಾರ್ಡ್ ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಿಟ್ಟಿತ್ತು. ಡಿಸೆಂಬರ್ 22 ರಂದು ಮೊದಲ ಹಂತದಲ್ಲಿಯೇ ಚುನಾವಣೆ ನಡೆದು ಡಿಸೆಂಬರ್ 30ರಂದು ಮತ ಎಣಿಕೆ ನಡೆದಿದೆ. ಈ ಸಂದರ್ಭದಲ್ಲಿ ಕೆಲ ಅನೂರ್ಜಿತಗೊಂಡಿದ್ದ ಮತಗಳನ್ನು ಅಭ್ಯರ್ಥಿಯೊಬ್ಬರ ಲೆಕ್ಕಕ್ಕೆ ಸೇರಿಸಿರುವ ಆರೋಪ ವ್ಯಾಪಕವಾಗಿದೆ. ಮತ ಎಣಿಕೆ ಅಧಿಕಾರಿಗಳಿಗೆ ಅನೂರ್ಜಿತ ಮತಗಳನ್ನು ಎಣಿಕೆ ಮಾಡದೆ ತಿರಸ್ಕೃತಗೊಳಿಸಬೇಕು ಎಂದು ಮನವಿ ಮಾಡಿದರೂ ಅದಕ್ಕೆ ಅಧಿಕಾರಿಗಳು ಕಿಮ್ಮತ್ತು ಕೊಡದೆ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಲ್ಲ ಎಂದು ದೂರಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಕೋರಾ 1 ನೇ ವಾರ್ಡಿಗೆ ರಾಜಣ್ಣ ಸ್ಪರ್ಧಿಸಿದ್ದರು. ಇವರಿಗೆ ಪ್ರತಿಸ್ಪರ್ಧಿಯಾಗಿ ರಾಜಕುಮಾರ್ ಚುನಾವಣಾ ಕಣದಲ್ಲಿದ್ದರು. ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಾದ ಈ ಕ್ಷೇತ್ರಕ್ಕೆ ಈಗ ರಾಜಕುಮಾರ್ ಆಯ್ಕೆ ಆಗಿದ್ದಾರೆಂದು ಘೋಷಣೆ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ರಾಜಣ್ಣ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಫಲಿತಾಂಶ ತಡೆಹಿಡಿಯಬೇಕು ಮತ್ತು ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು ಮರು ಎಣಿಕೆ ಮಾಡಬೇಕು. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿ ನಂತರ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ರಾಜಣ್ಣ ಜಿಲ್ಲಾಧಿಕಾರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮತ ಎಣಿಕೆ ಸಮಯದಲ್ಲಿ ನನಗೆ 157 ಮತ ಹಾಗೂ ನನ್ನ ಪ್ರತಿಸ್ಪರ್ಧಿ ರಾಜ್ ಕುಮಾರ್ ಅವರಿಗೆ 159 ಮತಗಳು ಬಂದಿವೆ. ಮತ ಎಣಿಕೆ ನಡೆಯುವ ವೇಳೆ ಹಲವು ಮತಪತ್ರಗಳಲ್ಲಿ ನನಗೂ ಮತ್ತು ಪ್ರತಿಸ್ಪರ್ಧಿ ರಾಜಕುಮಾರ್ ಇಬ್ಬರಿಗೂ ಮತಗಳು ಚಲಾವಣೆಗೊಂಡಿವೆ. ಇಂತಹ ಹಲವು ಅನೂರ್ಜಿತ ಮತಪತ್ರಗಳನ್ನು ತಿರಸ್ಕರಿಸದೆ ರಾಜ್ ಕುಮಾರ್ ಅವರ ಲೆಕ್ಕಕ್ಕೆ ಸೇರಿಸಲಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ: ಗ್ರಾಮ ಪಂಚಾಯತ್‌ಗಳಿಗೆ ಕೇಸರಿ ಬಳಿಯಲು ಬಿಜೆಪಿ ಕರಾಮತ್ತು!

ಅನೂರ್ಜಿತ ಮತಗಳನ್ನು ತಿರಸ್ಕರಿಸುವಂತೆ ಎಣಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೇಳಲಿಲ್ಲ. ಹೀಗಾಗಿ ರಾಜಕುಮಾರ್ ಅವರು ಗೆಲ್ಲವಂತೆ ಆಗಿದೆ. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿದರೆ ಗೆಲುವು ನನ್ನದೇ ಆಗುತ್ತದೆ. ಹಾಗಾಗಿ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿಯೂ ಆಗಿರುವ ಉಪವಿಭಾಗಧಿಕಾರಿಗಳು ಮರು ಎಣಿಕೆ ನಡೆಸಲು ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಾಜಿತ ಅಭ್ಯರ್ಥಿ ರಾಜಣ್ಣ ಒತ್ತಾಯಿಸಿದ್ದಾರೆ.

ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ರಾಜಣ್ಣ ತಿಳಿಸಿದ್ದಾರೆ. ರಾಜಕುಮಾರ್ ಪರವಾಗಿ ಮತ ಎಣಿಕೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಇದರಿಂದ ನನಗೆ ವಂಚನೆಯಾಗಿದೆ. ಹಾಗಾಗಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...