Homeಕರ್ನಾಟಕಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದೆ

- Advertisement -
- Advertisement -

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಮತ ಎಣಿಕೆ ಅಧಿಕಾರಿಗಳು ಅನೂರ್ಜಿತ ಮತಪತ್ರಗಳನ್ನು ಕೂಡ ಎಣಿಕೆ ಮಾಡಿ ತಮಗೆ ಬೇಕಾದ ಅಭ್ಯರ್ಥಿಗೆ ಸಹಕರಿಸಿದ್ದಾರೆ ಎಂದು ದೂರಲಾಗಿದೆ. ಈ ಸಂಬಂಧ ಒಂದೆರಡು ಮತಗಳಿಂದ ಪರಾಭವಗೊಂಡಿರುವ ಅಭ್ಯರ್ಥಿಗಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ತುಮಕೂರು ತಾಲೂಕು ಕೋರಾ ಗ್ರಾಮದ 1 ನೇ ವಾರ್ಡ್ ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಿಟ್ಟಿತ್ತು. ಡಿಸೆಂಬರ್ 22 ರಂದು ಮೊದಲ ಹಂತದಲ್ಲಿಯೇ ಚುನಾವಣೆ ನಡೆದು ಡಿಸೆಂಬರ್ 30ರಂದು ಮತ ಎಣಿಕೆ ನಡೆದಿದೆ. ಈ ಸಂದರ್ಭದಲ್ಲಿ ಕೆಲ ಅನೂರ್ಜಿತಗೊಂಡಿದ್ದ ಮತಗಳನ್ನು ಅಭ್ಯರ್ಥಿಯೊಬ್ಬರ ಲೆಕ್ಕಕ್ಕೆ ಸೇರಿಸಿರುವ ಆರೋಪ ವ್ಯಾಪಕವಾಗಿದೆ. ಮತ ಎಣಿಕೆ ಅಧಿಕಾರಿಗಳಿಗೆ ಅನೂರ್ಜಿತ ಮತಗಳನ್ನು ಎಣಿಕೆ ಮಾಡದೆ ತಿರಸ್ಕೃತಗೊಳಿಸಬೇಕು ಎಂದು ಮನವಿ ಮಾಡಿದರೂ ಅದಕ್ಕೆ ಅಧಿಕಾರಿಗಳು ಕಿಮ್ಮತ್ತು ಕೊಡದೆ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಲ್ಲ ಎಂದು ದೂರಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಕೋರಾ 1 ನೇ ವಾರ್ಡಿಗೆ ರಾಜಣ್ಣ ಸ್ಪರ್ಧಿಸಿದ್ದರು. ಇವರಿಗೆ ಪ್ರತಿಸ್ಪರ್ಧಿಯಾಗಿ ರಾಜಕುಮಾರ್ ಚುನಾವಣಾ ಕಣದಲ್ಲಿದ್ದರು. ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಾದ ಈ ಕ್ಷೇತ್ರಕ್ಕೆ ಈಗ ರಾಜಕುಮಾರ್ ಆಯ್ಕೆ ಆಗಿದ್ದಾರೆಂದು ಘೋಷಣೆ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ರಾಜಣ್ಣ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಫಲಿತಾಂಶ ತಡೆಹಿಡಿಯಬೇಕು ಮತ್ತು ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು ಮರು ಎಣಿಕೆ ಮಾಡಬೇಕು. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿ ನಂತರ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ರಾಜಣ್ಣ ಜಿಲ್ಲಾಧಿಕಾರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮತ ಎಣಿಕೆ ಸಮಯದಲ್ಲಿ ನನಗೆ 157 ಮತ ಹಾಗೂ ನನ್ನ ಪ್ರತಿಸ್ಪರ್ಧಿ ರಾಜ್ ಕುಮಾರ್ ಅವರಿಗೆ 159 ಮತಗಳು ಬಂದಿವೆ. ಮತ ಎಣಿಕೆ ನಡೆಯುವ ವೇಳೆ ಹಲವು ಮತಪತ್ರಗಳಲ್ಲಿ ನನಗೂ ಮತ್ತು ಪ್ರತಿಸ್ಪರ್ಧಿ ರಾಜಕುಮಾರ್ ಇಬ್ಬರಿಗೂ ಮತಗಳು ಚಲಾವಣೆಗೊಂಡಿವೆ. ಇಂತಹ ಹಲವು ಅನೂರ್ಜಿತ ಮತಪತ್ರಗಳನ್ನು ತಿರಸ್ಕರಿಸದೆ ರಾಜ್ ಕುಮಾರ್ ಅವರ ಲೆಕ್ಕಕ್ಕೆ ಸೇರಿಸಲಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ: ಗ್ರಾಮ ಪಂಚಾಯತ್‌ಗಳಿಗೆ ಕೇಸರಿ ಬಳಿಯಲು ಬಿಜೆಪಿ ಕರಾಮತ್ತು!

ಅನೂರ್ಜಿತ ಮತಗಳನ್ನು ತಿರಸ್ಕರಿಸುವಂತೆ ಎಣಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೇಳಲಿಲ್ಲ. ಹೀಗಾಗಿ ರಾಜಕುಮಾರ್ ಅವರು ಗೆಲ್ಲವಂತೆ ಆಗಿದೆ. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿದರೆ ಗೆಲುವು ನನ್ನದೇ ಆಗುತ್ತದೆ. ಹಾಗಾಗಿ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿಯೂ ಆಗಿರುವ ಉಪವಿಭಾಗಧಿಕಾರಿಗಳು ಮರು ಎಣಿಕೆ ನಡೆಸಲು ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಾಜಿತ ಅಭ್ಯರ್ಥಿ ರಾಜಣ್ಣ ಒತ್ತಾಯಿಸಿದ್ದಾರೆ.

ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ರಾಜಣ್ಣ ತಿಳಿಸಿದ್ದಾರೆ. ರಾಜಕುಮಾರ್ ಪರವಾಗಿ ಮತ ಎಣಿಕೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಇದರಿಂದ ನನಗೆ ವಂಚನೆಯಾಗಿದೆ. ಹಾಗಾಗಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...