Homeಕರ್ನಾಟಕಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದೆ

- Advertisement -
- Advertisement -

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಮತ ಎಣಿಕೆ ಅಧಿಕಾರಿಗಳು ಅನೂರ್ಜಿತ ಮತಪತ್ರಗಳನ್ನು ಕೂಡ ಎಣಿಕೆ ಮಾಡಿ ತಮಗೆ ಬೇಕಾದ ಅಭ್ಯರ್ಥಿಗೆ ಸಹಕರಿಸಿದ್ದಾರೆ ಎಂದು ದೂರಲಾಗಿದೆ. ಈ ಸಂಬಂಧ ಒಂದೆರಡು ಮತಗಳಿಂದ ಪರಾಭವಗೊಂಡಿರುವ ಅಭ್ಯರ್ಥಿಗಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ತುಮಕೂರು ತಾಲೂಕು ಕೋರಾ ಗ್ರಾಮದ 1 ನೇ ವಾರ್ಡ್ ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಿಟ್ಟಿತ್ತು. ಡಿಸೆಂಬರ್ 22 ರಂದು ಮೊದಲ ಹಂತದಲ್ಲಿಯೇ ಚುನಾವಣೆ ನಡೆದು ಡಿಸೆಂಬರ್ 30ರಂದು ಮತ ಎಣಿಕೆ ನಡೆದಿದೆ. ಈ ಸಂದರ್ಭದಲ್ಲಿ ಕೆಲ ಅನೂರ್ಜಿತಗೊಂಡಿದ್ದ ಮತಗಳನ್ನು ಅಭ್ಯರ್ಥಿಯೊಬ್ಬರ ಲೆಕ್ಕಕ್ಕೆ ಸೇರಿಸಿರುವ ಆರೋಪ ವ್ಯಾಪಕವಾಗಿದೆ. ಮತ ಎಣಿಕೆ ಅಧಿಕಾರಿಗಳಿಗೆ ಅನೂರ್ಜಿತ ಮತಗಳನ್ನು ಎಣಿಕೆ ಮಾಡದೆ ತಿರಸ್ಕೃತಗೊಳಿಸಬೇಕು ಎಂದು ಮನವಿ ಮಾಡಿದರೂ ಅದಕ್ಕೆ ಅಧಿಕಾರಿಗಳು ಕಿಮ್ಮತ್ತು ಕೊಡದೆ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಲ್ಲ ಎಂದು ದೂರಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಕೋರಾ 1 ನೇ ವಾರ್ಡಿಗೆ ರಾಜಣ್ಣ ಸ್ಪರ್ಧಿಸಿದ್ದರು. ಇವರಿಗೆ ಪ್ರತಿಸ್ಪರ್ಧಿಯಾಗಿ ರಾಜಕುಮಾರ್ ಚುನಾವಣಾ ಕಣದಲ್ಲಿದ್ದರು. ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಾದ ಈ ಕ್ಷೇತ್ರಕ್ಕೆ ಈಗ ರಾಜಕುಮಾರ್ ಆಯ್ಕೆ ಆಗಿದ್ದಾರೆಂದು ಘೋಷಣೆ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ರಾಜಣ್ಣ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಫಲಿತಾಂಶ ತಡೆಹಿಡಿಯಬೇಕು ಮತ್ತು ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು ಮರು ಎಣಿಕೆ ಮಾಡಬೇಕು. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿ ನಂತರ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ರಾಜಣ್ಣ ಜಿಲ್ಲಾಧಿಕಾರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮತ ಎಣಿಕೆ ಸಮಯದಲ್ಲಿ ನನಗೆ 157 ಮತ ಹಾಗೂ ನನ್ನ ಪ್ರತಿಸ್ಪರ್ಧಿ ರಾಜ್ ಕುಮಾರ್ ಅವರಿಗೆ 159 ಮತಗಳು ಬಂದಿವೆ. ಮತ ಎಣಿಕೆ ನಡೆಯುವ ವೇಳೆ ಹಲವು ಮತಪತ್ರಗಳಲ್ಲಿ ನನಗೂ ಮತ್ತು ಪ್ರತಿಸ್ಪರ್ಧಿ ರಾಜಕುಮಾರ್ ಇಬ್ಬರಿಗೂ ಮತಗಳು ಚಲಾವಣೆಗೊಂಡಿವೆ. ಇಂತಹ ಹಲವು ಅನೂರ್ಜಿತ ಮತಪತ್ರಗಳನ್ನು ತಿರಸ್ಕರಿಸದೆ ರಾಜ್ ಕುಮಾರ್ ಅವರ ಲೆಕ್ಕಕ್ಕೆ ಸೇರಿಸಲಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ: ಗ್ರಾಮ ಪಂಚಾಯತ್‌ಗಳಿಗೆ ಕೇಸರಿ ಬಳಿಯಲು ಬಿಜೆಪಿ ಕರಾಮತ್ತು!

ಅನೂರ್ಜಿತ ಮತಗಳನ್ನು ತಿರಸ್ಕರಿಸುವಂತೆ ಎಣಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೇಳಲಿಲ್ಲ. ಹೀಗಾಗಿ ರಾಜಕುಮಾರ್ ಅವರು ಗೆಲ್ಲವಂತೆ ಆಗಿದೆ. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿದರೆ ಗೆಲುವು ನನ್ನದೇ ಆಗುತ್ತದೆ. ಹಾಗಾಗಿ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿಯೂ ಆಗಿರುವ ಉಪವಿಭಾಗಧಿಕಾರಿಗಳು ಮರು ಎಣಿಕೆ ನಡೆಸಲು ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಾಜಿತ ಅಭ್ಯರ್ಥಿ ರಾಜಣ್ಣ ಒತ್ತಾಯಿಸಿದ್ದಾರೆ.

ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ರಾಜಣ್ಣ ತಿಳಿಸಿದ್ದಾರೆ. ರಾಜಕುಮಾರ್ ಪರವಾಗಿ ಮತ ಎಣಿಕೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಇದರಿಂದ ನನಗೆ ವಂಚನೆಯಾಗಿದೆ. ಹಾಗಾಗಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...