Homeಕರ್ನಾಟಕಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದೆ

- Advertisement -
- Advertisement -

ತುಮಕೂರು ಜಿಲ್ಲೆಯ 340 ಗ್ರಾಮ ಪಂಚಾಯತ್‌‌‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಮತ ಎಣಿಕೆ ಅಧಿಕಾರಿಗಳು ಅನೂರ್ಜಿತ ಮತಪತ್ರಗಳನ್ನು ಕೂಡ ಎಣಿಕೆ ಮಾಡಿ ತಮಗೆ ಬೇಕಾದ ಅಭ್ಯರ್ಥಿಗೆ ಸಹಕರಿಸಿದ್ದಾರೆ ಎಂದು ದೂರಲಾಗಿದೆ. ಈ ಸಂಬಂಧ ಒಂದೆರಡು ಮತಗಳಿಂದ ಪರಾಭವಗೊಂಡಿರುವ ಅಭ್ಯರ್ಥಿಗಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ತುಮಕೂರು ತಾಲೂಕು ಕೋರಾ ಗ್ರಾಮದ 1 ನೇ ವಾರ್ಡ್ ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಿಟ್ಟಿತ್ತು. ಡಿಸೆಂಬರ್ 22 ರಂದು ಮೊದಲ ಹಂತದಲ್ಲಿಯೇ ಚುನಾವಣೆ ನಡೆದು ಡಿಸೆಂಬರ್ 30ರಂದು ಮತ ಎಣಿಕೆ ನಡೆದಿದೆ. ಈ ಸಂದರ್ಭದಲ್ಲಿ ಕೆಲ ಅನೂರ್ಜಿತಗೊಂಡಿದ್ದ ಮತಗಳನ್ನು ಅಭ್ಯರ್ಥಿಯೊಬ್ಬರ ಲೆಕ್ಕಕ್ಕೆ ಸೇರಿಸಿರುವ ಆರೋಪ ವ್ಯಾಪಕವಾಗಿದೆ. ಮತ ಎಣಿಕೆ ಅಧಿಕಾರಿಗಳಿಗೆ ಅನೂರ್ಜಿತ ಮತಗಳನ್ನು ಎಣಿಕೆ ಮಾಡದೆ ತಿರಸ್ಕೃತಗೊಳಿಸಬೇಕು ಎಂದು ಮನವಿ ಮಾಡಿದರೂ ಅದಕ್ಕೆ ಅಧಿಕಾರಿಗಳು ಕಿಮ್ಮತ್ತು ಕೊಡದೆ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಲ್ಲ ಎಂದು ದೂರಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಕೋರಾ 1 ನೇ ವಾರ್ಡಿಗೆ ರಾಜಣ್ಣ ಸ್ಪರ್ಧಿಸಿದ್ದರು. ಇವರಿಗೆ ಪ್ರತಿಸ್ಪರ್ಧಿಯಾಗಿ ರಾಜಕುಮಾರ್ ಚುನಾವಣಾ ಕಣದಲ್ಲಿದ್ದರು. ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗೆ ಮೀಸಲಾದ ಈ ಕ್ಷೇತ್ರಕ್ಕೆ ಈಗ ರಾಜಕುಮಾರ್ ಆಯ್ಕೆ ಆಗಿದ್ದಾರೆಂದು ಘೋಷಣೆ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ರಾಜಣ್ಣ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಫಲಿತಾಂಶ ತಡೆಹಿಡಿಯಬೇಕು ಮತ್ತು ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು ಮರು ಎಣಿಕೆ ಮಾಡಬೇಕು. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿ ನಂತರ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ರಾಜಣ್ಣ ಜಿಲ್ಲಾಧಿಕಾರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮತ ಎಣಿಕೆ ಸಮಯದಲ್ಲಿ ನನಗೆ 157 ಮತ ಹಾಗೂ ನನ್ನ ಪ್ರತಿಸ್ಪರ್ಧಿ ರಾಜ್ ಕುಮಾರ್ ಅವರಿಗೆ 159 ಮತಗಳು ಬಂದಿವೆ. ಮತ ಎಣಿಕೆ ನಡೆಯುವ ವೇಳೆ ಹಲವು ಮತಪತ್ರಗಳಲ್ಲಿ ನನಗೂ ಮತ್ತು ಪ್ರತಿಸ್ಪರ್ಧಿ ರಾಜಕುಮಾರ್ ಇಬ್ಬರಿಗೂ ಮತಗಳು ಚಲಾವಣೆಗೊಂಡಿವೆ. ಇಂತಹ ಹಲವು ಅನೂರ್ಜಿತ ಮತಪತ್ರಗಳನ್ನು ತಿರಸ್ಕರಿಸದೆ ರಾಜ್ ಕುಮಾರ್ ಅವರ ಲೆಕ್ಕಕ್ಕೆ ಸೇರಿಸಲಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ: ಗ್ರಾಮ ಪಂಚಾಯತ್‌ಗಳಿಗೆ ಕೇಸರಿ ಬಳಿಯಲು ಬಿಜೆಪಿ ಕರಾಮತ್ತು!

ಅನೂರ್ಜಿತ ಮತಗಳನ್ನು ತಿರಸ್ಕರಿಸುವಂತೆ ಎಣಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೇಳಲಿಲ್ಲ. ಹೀಗಾಗಿ ರಾಜಕುಮಾರ್ ಅವರು ಗೆಲ್ಲವಂತೆ ಆಗಿದೆ. ಅನೂರ್ಜಿತ ಮತಗಳನ್ನು ತಿರಸ್ಕೃತಗೊಳಿಸಿದರೆ ಗೆಲುವು ನನ್ನದೇ ಆಗುತ್ತದೆ. ಹಾಗಾಗಿ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿಯೂ ಆಗಿರುವ ಉಪವಿಭಾಗಧಿಕಾರಿಗಳು ಮರು ಎಣಿಕೆ ನಡೆಸಲು ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಾಜಿತ ಅಭ್ಯರ್ಥಿ ರಾಜಣ್ಣ ಒತ್ತಾಯಿಸಿದ್ದಾರೆ.

ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ರಾಜಣ್ಣ ತಿಳಿಸಿದ್ದಾರೆ. ರಾಜಕುಮಾರ್ ಪರವಾಗಿ ಮತ ಎಣಿಕೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಇದರಿಂದ ನನಗೆ ವಂಚನೆಯಾಗಿದೆ. ಹಾಗಾಗಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...