Homeಕರ್ನಾಟಕಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ.

- Advertisement -
- Advertisement -

ಗ್ರಾಮ ಪಂಚಾಯತ್‌ ಚುನಾವಣೆ ಪ್ರಾರಂಭವಾಗಲು ಇನ್ನೇನು ಎರಡೇ ದಿನವಿದೆ. ರಾಜ್ಯದಾದ್ಯಂತ ಗ್ರಾಮಗಳಲ್ಲಿ ರಾಜಕೀಯ ಚಟುವಟಿಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳು ಸ್ಥಳೀಯ ವಿಷಯಗಳ ಬಗ್ಗೆ ಮಾತನಾಡುತ್ತಿದೆ. ಜೊತೆಗೆ ಆಶ್ವಾಸನೆ, ಭರವಸೆ, ತಂತ್ರ, ಕುತಂತ್ರಗಳು ಗ್ರಾಮ ಮಟ್ಟದಲ್ಲೇ ನಡೆಯುತ್ತಿದೆ. ಆದರೆ ಹೆಬ್ಬೂರು ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸ್ಪರ್ಧಿಯೊಬ್ಬರ ಪ್ರಣಾಳಿಕೆ ಪತ್ರವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣೆಯ ಮೊದಲ ಹಂತವಾದ ಡಿಸೆಂಬರ್‌ 22 ನಡೆಯಲಿರುವ ಚುನಾವಣೆಯಲ್ಲಿ ಹೆಬ್ಬೂರು ಗ್ರಾಮ ಪಂಚಾಯತ್‌‌ನ 7 ನೇ ಕಲ್ಕೆರೆ ಕ್ಷೇತ್ರದಿಂದ ಸ್ಫರ್ಧಿಸಿರುವ ಗಂಗಮ್ಮ ಹೆಚ್‌ ತಮ್ಮ ಚುನಾವಣಾ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಮಾತ್ರ ಏನು ಮಾಡುತ್ತೇನೆ ಎಂದು ಮಾತ್ರವಲ್ಲದೆ, ಸೋತರೆ ಏನು ಮಾಡುತ್ತೇನೆ ಎಂದು ಕೂಡಾ ಘೋಷಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ. ತಾನು ಸೋತರೆ “‌ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡಿಸುವುದು, ಸರ್ಕಾರಕ್ಕೆ ಸುಳ್ಳು ಮಾಹಿತಿ ಕೊಟ್ಟು ಹಣ ಪಡೆಯುತ್ತಿರುವ ಮೈತ್ರಿ, ಮನಸ್ವಿನಿ, ವಿಧವಾ ವೇತನ ಹಣವನ್ನು ನಿಲ್ಲಿಸುವುದು, ಸರ್ವೇ ನಂ. 86 ರಲ್ಲಿ ಹಳೇ ದಾಖಲೆಯಂತೆ ಸ್ವಶಾನ ಮಾಡಿಸುವುದು, ಕಲ್ಕೆರೆ ಗ್ರಾಮದ ಜಾಗವನ್ನು ಯಾವುದೆ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಹೋರಾಟ ಮಾಡವುದು” ಎಂದಿದ್ದಾರೆ.

ಜೊತೆಗೆ ತನ್ನ ಆಶ್ವಾಸನೆಗೆ ಅವರು ಸಾಕ್ಷಿಯಾಗಿ, ಅಕ್ರಮವಾಗಿ ಕಾನೂನಿಗೆ ವಿರುದ್ದವಾಗಿದ್ದ 6 ಮನೆಗಳ ಬಿಲ್ ನಿಲ್ಲಿಸಿರುವುದನ್ನು ಉಲ್ಲೇಖಿಸಿದ್ದಾರೆ. ಪ್ರಣಾಳಿಕೆಯ ಕರಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಇವರು ಗೆಲ್ಲುವುದಕ್ಕಿಂತ ಸೋಲುವುದೇ ಒಳ್ಳೆಯದು. ಇವರ ವಿರುದ್ದ ಗೆದ್ದವರಿಂದ ಇತರ ಕೆಲಸವನ್ನು ಮಾಡಿಸಬಹುದು ಮತ್ತು ಇವರಿಂದ, ಸೋತರೆ ಮಾಡುವ ಕೆಲಸವನ್ನು ಮಾಡಿಸಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ:  ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...