Homeಕರ್ನಾಟಕಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ.

- Advertisement -
- Advertisement -

ಗ್ರಾಮ ಪಂಚಾಯತ್‌ ಚುನಾವಣೆ ಪ್ರಾರಂಭವಾಗಲು ಇನ್ನೇನು ಎರಡೇ ದಿನವಿದೆ. ರಾಜ್ಯದಾದ್ಯಂತ ಗ್ರಾಮಗಳಲ್ಲಿ ರಾಜಕೀಯ ಚಟುವಟಿಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳು ಸ್ಥಳೀಯ ವಿಷಯಗಳ ಬಗ್ಗೆ ಮಾತನಾಡುತ್ತಿದೆ. ಜೊತೆಗೆ ಆಶ್ವಾಸನೆ, ಭರವಸೆ, ತಂತ್ರ, ಕುತಂತ್ರಗಳು ಗ್ರಾಮ ಮಟ್ಟದಲ್ಲೇ ನಡೆಯುತ್ತಿದೆ. ಆದರೆ ಹೆಬ್ಬೂರು ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸ್ಪರ್ಧಿಯೊಬ್ಬರ ಪ್ರಣಾಳಿಕೆ ಪತ್ರವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣೆಯ ಮೊದಲ ಹಂತವಾದ ಡಿಸೆಂಬರ್‌ 22 ನಡೆಯಲಿರುವ ಚುನಾವಣೆಯಲ್ಲಿ ಹೆಬ್ಬೂರು ಗ್ರಾಮ ಪಂಚಾಯತ್‌‌ನ 7 ನೇ ಕಲ್ಕೆರೆ ಕ್ಷೇತ್ರದಿಂದ ಸ್ಫರ್ಧಿಸಿರುವ ಗಂಗಮ್ಮ ಹೆಚ್‌ ತಮ್ಮ ಚುನಾವಣಾ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಮಾತ್ರ ಏನು ಮಾಡುತ್ತೇನೆ ಎಂದು ಮಾತ್ರವಲ್ಲದೆ, ಸೋತರೆ ಏನು ಮಾಡುತ್ತೇನೆ ಎಂದು ಕೂಡಾ ಘೋಷಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ. ತಾನು ಸೋತರೆ “‌ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡಿಸುವುದು, ಸರ್ಕಾರಕ್ಕೆ ಸುಳ್ಳು ಮಾಹಿತಿ ಕೊಟ್ಟು ಹಣ ಪಡೆಯುತ್ತಿರುವ ಮೈತ್ರಿ, ಮನಸ್ವಿನಿ, ವಿಧವಾ ವೇತನ ಹಣವನ್ನು ನಿಲ್ಲಿಸುವುದು, ಸರ್ವೇ ನಂ. 86 ರಲ್ಲಿ ಹಳೇ ದಾಖಲೆಯಂತೆ ಸ್ವಶಾನ ಮಾಡಿಸುವುದು, ಕಲ್ಕೆರೆ ಗ್ರಾಮದ ಜಾಗವನ್ನು ಯಾವುದೆ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಹೋರಾಟ ಮಾಡವುದು” ಎಂದಿದ್ದಾರೆ.

ಜೊತೆಗೆ ತನ್ನ ಆಶ್ವಾಸನೆಗೆ ಅವರು ಸಾಕ್ಷಿಯಾಗಿ, ಅಕ್ರಮವಾಗಿ ಕಾನೂನಿಗೆ ವಿರುದ್ದವಾಗಿದ್ದ 6 ಮನೆಗಳ ಬಿಲ್ ನಿಲ್ಲಿಸಿರುವುದನ್ನು ಉಲ್ಲೇಖಿಸಿದ್ದಾರೆ. ಪ್ರಣಾಳಿಕೆಯ ಕರಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಇವರು ಗೆಲ್ಲುವುದಕ್ಕಿಂತ ಸೋಲುವುದೇ ಒಳ್ಳೆಯದು. ಇವರ ವಿರುದ್ದ ಗೆದ್ದವರಿಂದ ಇತರ ಕೆಲಸವನ್ನು ಮಾಡಿಸಬಹುದು ಮತ್ತು ಇವರಿಂದ, ಸೋತರೆ ಮಾಡುವ ಕೆಲಸವನ್ನು ಮಾಡಿಸಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ:  ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...