Homeಕರ್ನಾಟಕಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ.

- Advertisement -
- Advertisement -

ಗ್ರಾಮ ಪಂಚಾಯತ್‌ ಚುನಾವಣೆ ಪ್ರಾರಂಭವಾಗಲು ಇನ್ನೇನು ಎರಡೇ ದಿನವಿದೆ. ರಾಜ್ಯದಾದ್ಯಂತ ಗ್ರಾಮಗಳಲ್ಲಿ ರಾಜಕೀಯ ಚಟುವಟಿಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳು ಸ್ಥಳೀಯ ವಿಷಯಗಳ ಬಗ್ಗೆ ಮಾತನಾಡುತ್ತಿದೆ. ಜೊತೆಗೆ ಆಶ್ವಾಸನೆ, ಭರವಸೆ, ತಂತ್ರ, ಕುತಂತ್ರಗಳು ಗ್ರಾಮ ಮಟ್ಟದಲ್ಲೇ ನಡೆಯುತ್ತಿದೆ. ಆದರೆ ಹೆಬ್ಬೂರು ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸ್ಪರ್ಧಿಯೊಬ್ಬರ ಪ್ರಣಾಳಿಕೆ ಪತ್ರವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣೆಯ ಮೊದಲ ಹಂತವಾದ ಡಿಸೆಂಬರ್‌ 22 ನಡೆಯಲಿರುವ ಚುನಾವಣೆಯಲ್ಲಿ ಹೆಬ್ಬೂರು ಗ್ರಾಮ ಪಂಚಾಯತ್‌‌ನ 7 ನೇ ಕಲ್ಕೆರೆ ಕ್ಷೇತ್ರದಿಂದ ಸ್ಫರ್ಧಿಸಿರುವ ಗಂಗಮ್ಮ ಹೆಚ್‌ ತಮ್ಮ ಚುನಾವಣಾ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಮಾತ್ರ ಏನು ಮಾಡುತ್ತೇನೆ ಎಂದು ಮಾತ್ರವಲ್ಲದೆ, ಸೋತರೆ ಏನು ಮಾಡುತ್ತೇನೆ ಎಂದು ಕೂಡಾ ಘೋಷಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ. ತಾನು ಸೋತರೆ “‌ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡಿಸುವುದು, ಸರ್ಕಾರಕ್ಕೆ ಸುಳ್ಳು ಮಾಹಿತಿ ಕೊಟ್ಟು ಹಣ ಪಡೆಯುತ್ತಿರುವ ಮೈತ್ರಿ, ಮನಸ್ವಿನಿ, ವಿಧವಾ ವೇತನ ಹಣವನ್ನು ನಿಲ್ಲಿಸುವುದು, ಸರ್ವೇ ನಂ. 86 ರಲ್ಲಿ ಹಳೇ ದಾಖಲೆಯಂತೆ ಸ್ವಶಾನ ಮಾಡಿಸುವುದು, ಕಲ್ಕೆರೆ ಗ್ರಾಮದ ಜಾಗವನ್ನು ಯಾವುದೆ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಹೋರಾಟ ಮಾಡವುದು” ಎಂದಿದ್ದಾರೆ.

ಜೊತೆಗೆ ತನ್ನ ಆಶ್ವಾಸನೆಗೆ ಅವರು ಸಾಕ್ಷಿಯಾಗಿ, ಅಕ್ರಮವಾಗಿ ಕಾನೂನಿಗೆ ವಿರುದ್ದವಾಗಿದ್ದ 6 ಮನೆಗಳ ಬಿಲ್ ನಿಲ್ಲಿಸಿರುವುದನ್ನು ಉಲ್ಲೇಖಿಸಿದ್ದಾರೆ. ಪ್ರಣಾಳಿಕೆಯ ಕರಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಇವರು ಗೆಲ್ಲುವುದಕ್ಕಿಂತ ಸೋಲುವುದೇ ಒಳ್ಳೆಯದು. ಇವರ ವಿರುದ್ದ ಗೆದ್ದವರಿಂದ ಇತರ ಕೆಲಸವನ್ನು ಮಾಡಿಸಬಹುದು ಮತ್ತು ಇವರಿಂದ, ಸೋತರೆ ಮಾಡುವ ಕೆಲಸವನ್ನು ಮಾಡಿಸಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ:  ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...