Homeಕರ್ನಾಟಕಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ ಎ, (ಪಿಎಚ್‌ಡಿ) ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ

- Advertisement -
- Advertisement -

ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ಭರದಲ್ಲಿ ಸಾಗಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಗಳೂ ಸಹ ದೊಡ್ಡ-ದೊಡ್ಡ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಆದರೆ ಇವುಗಳಲ್ಲಿ ಕೆಲವು ಅಭ್ಯರ್ಥಿಗಳು ಗೆದ್ದರೆ ತಾವು ಮಾಡುವಂತಹ ಕೆಲಸಗಳನ್ನು ಅತ್ಯಂತ ಜಾಣ್ಮೆಯಿಂದ, ವೈಚಾರಿಕವಾಗಿ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ತುಂಬಾ ವಿಶೇಷವಾದ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ.ಎ, (ಪಿಎಚ್‌ಡಿ), ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮ ಪಂಚಾಯಿತಿಯ ಬಸವನದುರ್ಗದ 5 ನೇ ವಾರ್ಡಿನಿಂದ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

“ಪ್ರಜಾಪ್ರಭುತ್ವದಲ್ಲಿ ಗೌರವದ ಬದುಕು ಪ್ರತಿಯೊಬ್ಬ ಮನುಷ್ಯನ ಹಕ್ಕು. ಹಾಗೆಯೇ ಬಸವನದುರ್ಗದ ಗ್ರಾಮದ ಜನತೆ ಶ್ರಮಿಕರು, ರೈತರು, ಮಹಿಳೆಯರು ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನ್ನು ನಾನು ತೀರಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ಆದ ಕಾರಣ ತಮ್ಮ ಈ ಕೆಲಸದಲ್ಲಿರುವ ವಿವಿಧ ಸಮಸ್ಯೆಗಳನ್ನು ಮತ್ತು ತಮ್ಮ ಅವಶ್ಯಕತೆಗಳನ್ನು ಅರಿತು ಗ್ರಾಮದ ಜನತೆಯ ಸೇವೆ ಸಲ್ಲಿಸಲು ಇಚ್ಛಿಸಿ 2020ರ  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ನಿಟ್ಟಿನಲ್ಲಿ ನನ್ನ ಆಯ್ಕೆಯ ಗುರುತಾದ ಟ್ರ್ಯಾಕ್ಟರ್‌ ಚಿಹ್ನೆಗೆ ಮತ ನೀಡಿ, ಗ್ರಾಮದ ತಮ್ಮ ಕೆಲಸದ ಕ್ಷೇತ್ರದಲ್ಲಿ ಸಿಗಬಹುದಾದ ಅನೇಕ ಯೋಜನೆಗಳನ್ನು ತಮಗೆ ಮುಟ್ಟಿಸಲು ಮತ್ತು ಗೌರವಾನ್ವಿತ ಬದುಕಿಗಾಗಿ ತಮ್ಮ ಸೇವೆ ಮಾಡಲು ನನಗೆ ಅವಕಾಶ ಕೊಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಗ್ರಾಮಸ್ಥರಲ್ಲಿ ವಿನಂತಿಸಿದ್ದಾರೆ.

“ಗ್ರಾಮದ ಶಿಕ್ಷಣ, ಆರೋಗ್ಯ, ವಸತಿ, ರಸ್ತೆ, ಚರಂಡಿ, ವಿದ್ಯುತ್, ಉದ್ಯೋಗ ಸೇರಿದಂತೆ ಮೂಲಸೌಕರ್ಯಗಳು ಒದಗಿಸುವ ಮೂಲಕ ಸರ್ವರಿಗೂ ಸಮಬಾಳು- ಸಮಪಾಲು ಎನ್ನುವಂತೆ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸರಕಾರಿ ಯೋಜನೆಗಳ ಪರಿಣಾಮಕಾರಿ ಜಾರಿ ಮಾಡಿ ಸ್ವಚ್ಚ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಟ್ರ್ಯಾಕ್ಟರ್‌ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ಸಮಾಜದ ಪ್ರತಿ ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ:

ಯುವ ಜನತೆಗೆ;

“ಯುವಕರು ಭವಿಷ್ಯದಲ್ಲಿ ಮಾತ್ರವಲ್ಲ ವರ್ತಮಾನದ ಶಕ್ತಿ ಕೂಡ. ಯುವಕರ ಪ್ರಜ್ವಲ ಜೀವನಕ್ಕೆ ಶಿಕ್ಷಣ, ಉದ್ಯೋಗ, ಆರೋಗ್ಯ ಇವು ಬಹುಮುಖ್ಯ ಆದ್ಯತೆ ಎಂದು ಮನಗಂಡು ರಾಜಕೀಯ ಧ್ವನಿಯಾಗಿ ಗ್ರಾಮದ ಯುವಕರ ಅಭಿವೃದ್ಧಿಪರ ನಿಲ್ಲುತ್ತೇನೆ ಎಂದು ಈ ಮೂಲಕ ಪ್ರಮಾಣಿಕರಿಸುತ್ತೇನೆ. ಹಾಗಾಗಿ ಟ್ರಾಕ್ಟರ್ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಬಹುಮತದಿಂದ ಗೆಲ್ಲಿಸಿ”

  1. ಇಲಾಖೆಗಳ ಮೂಲಕ ಕಬಡ್ಡಿ, ಕ್ರಿಕೇಟ್, ಇತರೆ ಕ್ರೀಡೆಗಳ ಪ್ರೋತ್ಸಾಹ.
  2. ಜರ್ಸಿ, ಗ್ಲೌಸ್, ಕ್ರಿಕೆಟ್ ಬ್ಯಾಟ್, ಮುಂತಾದ ಕ್ರೀಡಾ ಸಾಮಗ್ರಿಗಳು ದೊರಕಿಸುವುದು.
  3. ಜಿಮ್ ಪರಿಕರಗಳ ವ್ಯವಸ್ಥೆಗೆ ಪ್ರಯತ್ನ.
  4. ಉದ್ಯೋಗ ಅವಕಾಶಕ್ಕಾಗಿ ಉದ್ಯೋಗ ಮೇಳ.
  5. ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಸಹಾಯಧನ ಶೀಘ್ರ ಬಿಡುಗಡೆ.
  6. ಉಚಿತ ಕಂಪ್ಯೂಟರ್ ತರಬೇತಿ.
  7. ಗ್ರಂಥಾಲಯಕ್ಕೆ ಪ್ರಯತ್ನಿಸುವುದು.

ಇದನ್ನೂ ಓದಿ: ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಮಹಿಳೆಯರಿಗೆ;

ಸಮಾಜದ ಪ್ರಗತಿಯನ್ನು ಮಹಿಳೆಯರನ್ನು ಹೊರತುಪಡಿಸಿ ನೋಡಲು ಸಾಧ್ಯವಿಲ್ಲ. ಅರ್ಧದಷ್ಟು ಜನಸಂಖ್ಯೆಯಲ್ಲಿರುವ ಮಹಿಳೆಯರು ಕೌಟುಂಬಿಕವಾಗಿ ಮಾತ್ರವಲ್ಲ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿಯೂ ಮಹಿಳೆಯರ ಕೊಡುಗೆ ಅಪಾರವಾದುದು. ಹಾಗಾಗಿ ಮಹಿಳೆಯ ಸ್ವಾವಲಂಬನೆ ಮತ್ತು ಆರೋಗ್ಯ ಬಹುಮುಖ್ಯವಾದದ್ದು ಎಂದು ನಂಬಿದ್ದೇನೆ. ಹಾಗೆಯೇ ಮಹಿಳೆಯರು ಅನೇಕ ಸಮಸ್ಯೆಗಳು, ತೊಳಲಾಟಗಳಲ್ಲಿ ಬದುಕುತ್ತಿರುವುದು ಅರ್ಥಮಾಡಿಕೊಳ್ಳದ ವಿಷಯವೇನಲ್ಲ. ಹಾಗಾಗಿ ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಟ್ರಾಕ್ಟರ್ ಚಿಹ್ನೆಗೆ ತಮ್ಮ ಅಮೂಲ್ಯವಾದ ಮತ ನೀಡಿ ನನ್ನನು ಆಯ್ಕೆ ಮಾಡಿ, ನಿಮ್ಮ ಸಹೋದರನಾಗಿ, ಮಗನಾಗಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ಮಾಡಿ ಕೊಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

  1. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
  2. ಸ್ವಯಂ ಉದ್ಯೋಗ ತರಬೇತಿ ಮತ್ತು ಮಾಹಿತಿ.
  3. ಮಹಿಳಾ ಮತ್ತು ಮಕ್ಕಳ ಆರೋಗ್ಯ ಕುರಿತು ಕಾಳಜಿ.

ರೈತರಿಗೆ;

  1. ಆಧುನಿಕ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸುವುದು.
  2. ಉದ್ಯೋಗ ಖಾತರಿ ಯೋಜನೆ ಅಡಿ 200 ಮಾನವ ದಿನ ಸೃಷ್ಟಿಗೆ ಮನವಿ ಸಲ್ಲಿಸುವುದು.
  3. MGNREG ಯೋಜನೆ ಮೂಲಕ ಕಾಲುವೆಗಳ ಸ್ವಚ್ಛತೆ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸುವುದು.
  4. MGNREG ಮೂಲಕ ಕೃಷಿ ಮತ್ತು ಕೃಷಿಯೇತರ ಸ್ವಯಂ ಚಟುವಟಿಕೆಗೆ ಅನುಕೂಲ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಗ್ರಾಮಸ್ಥರು ತಮ್ಮ ಖಾಸಗಿ ಆಸ್ತಿ ನಿರ್ಮಿಸಿಕೊಳ್ಳಲು ಅವಕಾಶ ಮಾಡಿ ಕೊಡುವುದು.

ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಒಟ್ಟು ಗ್ರಾಮಕ್ಕೆ;

  1. ವರ್ಷಕ್ಕೆ 2 ಸಾವಿರ ಗಿಡಗಳಂತೆ ಐದು ವರ್ಷಕ್ಕೆ 10 ಸಾವಿರ ಗಿಡ ನೆಡುವುದು (ಪಂಚಾಯತ್ ವ್ಯಾಪ್ತಿಯಲ್ಲಿ).
  2. ರಸ್ತೆ, ಚರಂಡಿ, ಕುಡಿಯುವ ನೀರು, ವಸತಿಗೆ ಆದ್ಯತೆ.
  3. ಹಕ್ಕು ಪತ್ರ ನೀಡಲು ಒತ್ತಾಯಿಸುವುದು.
  4. ಕಂದಾಯ ಅದಾಲತ್ ಪ್ರತಿ ಆರು ತಿಂಗಳಿಗೊಮ್ಮೆಳಿಗೊಮ್ಮೆ ಸಮಸ್ಯೆ ಬಗೆ ಹರಿಸುವುದು (ವಿಧವಾ, ವೃದ್ಧಾಪ್ಯ,ಅಂಗವಿಕಲ).
  5. ತಿಂಗಳಲ್ಲಿ ಒಂದು ದಿನ ಆಡಳಿತ ವ್ಯವಸ್ಥೆ ಗ್ರಾಮದಲ್ಲಿದ್ದು ಸಮಸ್ಯೆ ಬಗೆಹರಿಸುವುದು.
  6. ಗ್ರಾಮದಲ್ಲಿ ಆಡಳಿತ ಸಂಬಂಧಿ ದೂರುಗಳಿಗಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಅಲ್ಲಲ್ಲಿ ಬರೆಯುವುದು.
  7. ಸಮುದಾಯ ಭವನ ನಿರ್ಮಿಸುವುದು.
  8. ಆಧುನಿಕ ಬಸ್ ನಿಲ್ದಾಣ.
  9. ಗ್ರಾಮದಲ್ಲಿ ಎಟಿಎಂ/ಬ್ಯಾಂಕ್‌ಗಾಗಿ ಪ್ರಯತ್ನಿಸುವುದು.
  10. ನಿಗಮಗಳಲ್ಲಿನ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುವುದು.
  11. ನಿರ್ಗತಿಕರಿಗೆ ಅಂತ್ಯ ಸಂಸ್ಕಾರಕ್ಕೆ ಪಂಚಾಯಿತಿಯಿಂದ ಸಹಾಯ ಒದಗಿಸುವುದು.
  12. ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಮೂಲಕ ಬಡತನ, ನಿರುದ್ಯೋಗ, ವಲಸೆಯನ್ನು ತಡೆಯುವುದು.
  13. ಗ್ರಾಮದ ಭೋವಿ ಸಮುದಾಯಕ್ಕೆ ಕಲ್ಲು ಕೆಲಸಕ್ಕೆ ಪ್ರತ್ಯೇಕ ಪರವಾನಗಿಗಾಗಿ ಒತ್ತಾಯಿಸುವುದು.
  14. ಗ್ರಾಮದ ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರದ ಇನ್ನೂರೆನ್ಸ್ ಬಗ್ಗೆ ಮಾಹಿತಿ ಒದಗಿಸುವುದು.
  15. ಜಾಗ ಇಲ್ಲದವರಿಗೆ ನಿವೇಶನ ಒದಗಿಸಲು ಪ್ರಯತ್ನಿಸುವುದು.

ಹೀಗೆ ಗ್ರಾಮದ ಪ್ರತಿ ವರ್ಗವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯಲು ತಮ್ಮ ಯೋಚನೆಗಳನ್ನು ಪ್ರಣಾಳಿಕೆಯ ಮೂಲಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...