Homeಕರ್ನಾಟಕಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ ಎ, (ಪಿಎಚ್‌ಡಿ) ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ

- Advertisement -
- Advertisement -

ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ಭರದಲ್ಲಿ ಸಾಗಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಗಳೂ ಸಹ ದೊಡ್ಡ-ದೊಡ್ಡ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಆದರೆ ಇವುಗಳಲ್ಲಿ ಕೆಲವು ಅಭ್ಯರ್ಥಿಗಳು ಗೆದ್ದರೆ ತಾವು ಮಾಡುವಂತಹ ಕೆಲಸಗಳನ್ನು ಅತ್ಯಂತ ಜಾಣ್ಮೆಯಿಂದ, ವೈಚಾರಿಕವಾಗಿ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ತುಂಬಾ ವಿಶೇಷವಾದ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ.ಎ, (ಪಿಎಚ್‌ಡಿ), ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮ ಪಂಚಾಯಿತಿಯ ಬಸವನದುರ್ಗದ 5 ನೇ ವಾರ್ಡಿನಿಂದ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

“ಪ್ರಜಾಪ್ರಭುತ್ವದಲ್ಲಿ ಗೌರವದ ಬದುಕು ಪ್ರತಿಯೊಬ್ಬ ಮನುಷ್ಯನ ಹಕ್ಕು. ಹಾಗೆಯೇ ಬಸವನದುರ್ಗದ ಗ್ರಾಮದ ಜನತೆ ಶ್ರಮಿಕರು, ರೈತರು, ಮಹಿಳೆಯರು ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನ್ನು ನಾನು ತೀರಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ಆದ ಕಾರಣ ತಮ್ಮ ಈ ಕೆಲಸದಲ್ಲಿರುವ ವಿವಿಧ ಸಮಸ್ಯೆಗಳನ್ನು ಮತ್ತು ತಮ್ಮ ಅವಶ್ಯಕತೆಗಳನ್ನು ಅರಿತು ಗ್ರಾಮದ ಜನತೆಯ ಸೇವೆ ಸಲ್ಲಿಸಲು ಇಚ್ಛಿಸಿ 2020ರ  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ನಿಟ್ಟಿನಲ್ಲಿ ನನ್ನ ಆಯ್ಕೆಯ ಗುರುತಾದ ಟ್ರ್ಯಾಕ್ಟರ್‌ ಚಿಹ್ನೆಗೆ ಮತ ನೀಡಿ, ಗ್ರಾಮದ ತಮ್ಮ ಕೆಲಸದ ಕ್ಷೇತ್ರದಲ್ಲಿ ಸಿಗಬಹುದಾದ ಅನೇಕ ಯೋಜನೆಗಳನ್ನು ತಮಗೆ ಮುಟ್ಟಿಸಲು ಮತ್ತು ಗೌರವಾನ್ವಿತ ಬದುಕಿಗಾಗಿ ತಮ್ಮ ಸೇವೆ ಮಾಡಲು ನನಗೆ ಅವಕಾಶ ಕೊಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಗ್ರಾಮಸ್ಥರಲ್ಲಿ ವಿನಂತಿಸಿದ್ದಾರೆ.

“ಗ್ರಾಮದ ಶಿಕ್ಷಣ, ಆರೋಗ್ಯ, ವಸತಿ, ರಸ್ತೆ, ಚರಂಡಿ, ವಿದ್ಯುತ್, ಉದ್ಯೋಗ ಸೇರಿದಂತೆ ಮೂಲಸೌಕರ್ಯಗಳು ಒದಗಿಸುವ ಮೂಲಕ ಸರ್ವರಿಗೂ ಸಮಬಾಳು- ಸಮಪಾಲು ಎನ್ನುವಂತೆ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸರಕಾರಿ ಯೋಜನೆಗಳ ಪರಿಣಾಮಕಾರಿ ಜಾರಿ ಮಾಡಿ ಸ್ವಚ್ಚ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಟ್ರ್ಯಾಕ್ಟರ್‌ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ಸಮಾಜದ ಪ್ರತಿ ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ:

ಯುವ ಜನತೆಗೆ;

“ಯುವಕರು ಭವಿಷ್ಯದಲ್ಲಿ ಮಾತ್ರವಲ್ಲ ವರ್ತಮಾನದ ಶಕ್ತಿ ಕೂಡ. ಯುವಕರ ಪ್ರಜ್ವಲ ಜೀವನಕ್ಕೆ ಶಿಕ್ಷಣ, ಉದ್ಯೋಗ, ಆರೋಗ್ಯ ಇವು ಬಹುಮುಖ್ಯ ಆದ್ಯತೆ ಎಂದು ಮನಗಂಡು ರಾಜಕೀಯ ಧ್ವನಿಯಾಗಿ ಗ್ರಾಮದ ಯುವಕರ ಅಭಿವೃದ್ಧಿಪರ ನಿಲ್ಲುತ್ತೇನೆ ಎಂದು ಈ ಮೂಲಕ ಪ್ರಮಾಣಿಕರಿಸುತ್ತೇನೆ. ಹಾಗಾಗಿ ಟ್ರಾಕ್ಟರ್ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಬಹುಮತದಿಂದ ಗೆಲ್ಲಿಸಿ”

  1. ಇಲಾಖೆಗಳ ಮೂಲಕ ಕಬಡ್ಡಿ, ಕ್ರಿಕೇಟ್, ಇತರೆ ಕ್ರೀಡೆಗಳ ಪ್ರೋತ್ಸಾಹ.
  2. ಜರ್ಸಿ, ಗ್ಲೌಸ್, ಕ್ರಿಕೆಟ್ ಬ್ಯಾಟ್, ಮುಂತಾದ ಕ್ರೀಡಾ ಸಾಮಗ್ರಿಗಳು ದೊರಕಿಸುವುದು.
  3. ಜಿಮ್ ಪರಿಕರಗಳ ವ್ಯವಸ್ಥೆಗೆ ಪ್ರಯತ್ನ.
  4. ಉದ್ಯೋಗ ಅವಕಾಶಕ್ಕಾಗಿ ಉದ್ಯೋಗ ಮೇಳ.
  5. ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಸಹಾಯಧನ ಶೀಘ್ರ ಬಿಡುಗಡೆ.
  6. ಉಚಿತ ಕಂಪ್ಯೂಟರ್ ತರಬೇತಿ.
  7. ಗ್ರಂಥಾಲಯಕ್ಕೆ ಪ್ರಯತ್ನಿಸುವುದು.

ಇದನ್ನೂ ಓದಿ: ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಮಹಿಳೆಯರಿಗೆ;

ಸಮಾಜದ ಪ್ರಗತಿಯನ್ನು ಮಹಿಳೆಯರನ್ನು ಹೊರತುಪಡಿಸಿ ನೋಡಲು ಸಾಧ್ಯವಿಲ್ಲ. ಅರ್ಧದಷ್ಟು ಜನಸಂಖ್ಯೆಯಲ್ಲಿರುವ ಮಹಿಳೆಯರು ಕೌಟುಂಬಿಕವಾಗಿ ಮಾತ್ರವಲ್ಲ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿಯೂ ಮಹಿಳೆಯರ ಕೊಡುಗೆ ಅಪಾರವಾದುದು. ಹಾಗಾಗಿ ಮಹಿಳೆಯ ಸ್ವಾವಲಂಬನೆ ಮತ್ತು ಆರೋಗ್ಯ ಬಹುಮುಖ್ಯವಾದದ್ದು ಎಂದು ನಂಬಿದ್ದೇನೆ. ಹಾಗೆಯೇ ಮಹಿಳೆಯರು ಅನೇಕ ಸಮಸ್ಯೆಗಳು, ತೊಳಲಾಟಗಳಲ್ಲಿ ಬದುಕುತ್ತಿರುವುದು ಅರ್ಥಮಾಡಿಕೊಳ್ಳದ ವಿಷಯವೇನಲ್ಲ. ಹಾಗಾಗಿ ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಟ್ರಾಕ್ಟರ್ ಚಿಹ್ನೆಗೆ ತಮ್ಮ ಅಮೂಲ್ಯವಾದ ಮತ ನೀಡಿ ನನ್ನನು ಆಯ್ಕೆ ಮಾಡಿ, ನಿಮ್ಮ ಸಹೋದರನಾಗಿ, ಮಗನಾಗಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ಮಾಡಿ ಕೊಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

  1. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
  2. ಸ್ವಯಂ ಉದ್ಯೋಗ ತರಬೇತಿ ಮತ್ತು ಮಾಹಿತಿ.
  3. ಮಹಿಳಾ ಮತ್ತು ಮಕ್ಕಳ ಆರೋಗ್ಯ ಕುರಿತು ಕಾಳಜಿ.

ರೈತರಿಗೆ;

  1. ಆಧುನಿಕ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸುವುದು.
  2. ಉದ್ಯೋಗ ಖಾತರಿ ಯೋಜನೆ ಅಡಿ 200 ಮಾನವ ದಿನ ಸೃಷ್ಟಿಗೆ ಮನವಿ ಸಲ್ಲಿಸುವುದು.
  3. MGNREG ಯೋಜನೆ ಮೂಲಕ ಕಾಲುವೆಗಳ ಸ್ವಚ್ಛತೆ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸುವುದು.
  4. MGNREG ಮೂಲಕ ಕೃಷಿ ಮತ್ತು ಕೃಷಿಯೇತರ ಸ್ವಯಂ ಚಟುವಟಿಕೆಗೆ ಅನುಕೂಲ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಗ್ರಾಮಸ್ಥರು ತಮ್ಮ ಖಾಸಗಿ ಆಸ್ತಿ ನಿರ್ಮಿಸಿಕೊಳ್ಳಲು ಅವಕಾಶ ಮಾಡಿ ಕೊಡುವುದು.

ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಒಟ್ಟು ಗ್ರಾಮಕ್ಕೆ;

  1. ವರ್ಷಕ್ಕೆ 2 ಸಾವಿರ ಗಿಡಗಳಂತೆ ಐದು ವರ್ಷಕ್ಕೆ 10 ಸಾವಿರ ಗಿಡ ನೆಡುವುದು (ಪಂಚಾಯತ್ ವ್ಯಾಪ್ತಿಯಲ್ಲಿ).
  2. ರಸ್ತೆ, ಚರಂಡಿ, ಕುಡಿಯುವ ನೀರು, ವಸತಿಗೆ ಆದ್ಯತೆ.
  3. ಹಕ್ಕು ಪತ್ರ ನೀಡಲು ಒತ್ತಾಯಿಸುವುದು.
  4. ಕಂದಾಯ ಅದಾಲತ್ ಪ್ರತಿ ಆರು ತಿಂಗಳಿಗೊಮ್ಮೆಳಿಗೊಮ್ಮೆ ಸಮಸ್ಯೆ ಬಗೆ ಹರಿಸುವುದು (ವಿಧವಾ, ವೃದ್ಧಾಪ್ಯ,ಅಂಗವಿಕಲ).
  5. ತಿಂಗಳಲ್ಲಿ ಒಂದು ದಿನ ಆಡಳಿತ ವ್ಯವಸ್ಥೆ ಗ್ರಾಮದಲ್ಲಿದ್ದು ಸಮಸ್ಯೆ ಬಗೆಹರಿಸುವುದು.
  6. ಗ್ರಾಮದಲ್ಲಿ ಆಡಳಿತ ಸಂಬಂಧಿ ದೂರುಗಳಿಗಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಅಲ್ಲಲ್ಲಿ ಬರೆಯುವುದು.
  7. ಸಮುದಾಯ ಭವನ ನಿರ್ಮಿಸುವುದು.
  8. ಆಧುನಿಕ ಬಸ್ ನಿಲ್ದಾಣ.
  9. ಗ್ರಾಮದಲ್ಲಿ ಎಟಿಎಂ/ಬ್ಯಾಂಕ್‌ಗಾಗಿ ಪ್ರಯತ್ನಿಸುವುದು.
  10. ನಿಗಮಗಳಲ್ಲಿನ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುವುದು.
  11. ನಿರ್ಗತಿಕರಿಗೆ ಅಂತ್ಯ ಸಂಸ್ಕಾರಕ್ಕೆ ಪಂಚಾಯಿತಿಯಿಂದ ಸಹಾಯ ಒದಗಿಸುವುದು.
  12. ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಮೂಲಕ ಬಡತನ, ನಿರುದ್ಯೋಗ, ವಲಸೆಯನ್ನು ತಡೆಯುವುದು.
  13. ಗ್ರಾಮದ ಭೋವಿ ಸಮುದಾಯಕ್ಕೆ ಕಲ್ಲು ಕೆಲಸಕ್ಕೆ ಪ್ರತ್ಯೇಕ ಪರವಾನಗಿಗಾಗಿ ಒತ್ತಾಯಿಸುವುದು.
  14. ಗ್ರಾಮದ ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರದ ಇನ್ನೂರೆನ್ಸ್ ಬಗ್ಗೆ ಮಾಹಿತಿ ಒದಗಿಸುವುದು.
  15. ಜಾಗ ಇಲ್ಲದವರಿಗೆ ನಿವೇಶನ ಒದಗಿಸಲು ಪ್ರಯತ್ನಿಸುವುದು.

ಹೀಗೆ ಗ್ರಾಮದ ಪ್ರತಿ ವರ್ಗವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯಲು ತಮ್ಮ ಯೋಚನೆಗಳನ್ನು ಪ್ರಣಾಳಿಕೆಯ ಮೂಲಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...