Homeಕರ್ನಾಟಕಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ ಎ, (ಪಿಎಚ್‌ಡಿ) ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ

- Advertisement -
- Advertisement -

ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ಭರದಲ್ಲಿ ಸಾಗಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಗಳೂ ಸಹ ದೊಡ್ಡ-ದೊಡ್ಡ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಆದರೆ ಇವುಗಳಲ್ಲಿ ಕೆಲವು ಅಭ್ಯರ್ಥಿಗಳು ಗೆದ್ದರೆ ತಾವು ಮಾಡುವಂತಹ ಕೆಲಸಗಳನ್ನು ಅತ್ಯಂತ ಜಾಣ್ಮೆಯಿಂದ, ವೈಚಾರಿಕವಾಗಿ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ತುಂಬಾ ವಿಶೇಷವಾದ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ.ಎ, (ಪಿಎಚ್‌ಡಿ), ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮ ಪಂಚಾಯಿತಿಯ ಬಸವನದುರ್ಗದ 5 ನೇ ವಾರ್ಡಿನಿಂದ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

“ಪ್ರಜಾಪ್ರಭುತ್ವದಲ್ಲಿ ಗೌರವದ ಬದುಕು ಪ್ರತಿಯೊಬ್ಬ ಮನುಷ್ಯನ ಹಕ್ಕು. ಹಾಗೆಯೇ ಬಸವನದುರ್ಗದ ಗ್ರಾಮದ ಜನತೆ ಶ್ರಮಿಕರು, ರೈತರು, ಮಹಿಳೆಯರು ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನ್ನು ನಾನು ತೀರಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ಆದ ಕಾರಣ ತಮ್ಮ ಈ ಕೆಲಸದಲ್ಲಿರುವ ವಿವಿಧ ಸಮಸ್ಯೆಗಳನ್ನು ಮತ್ತು ತಮ್ಮ ಅವಶ್ಯಕತೆಗಳನ್ನು ಅರಿತು ಗ್ರಾಮದ ಜನತೆಯ ಸೇವೆ ಸಲ್ಲಿಸಲು ಇಚ್ಛಿಸಿ 2020ರ  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ನಿಟ್ಟಿನಲ್ಲಿ ನನ್ನ ಆಯ್ಕೆಯ ಗುರುತಾದ ಟ್ರ್ಯಾಕ್ಟರ್‌ ಚಿಹ್ನೆಗೆ ಮತ ನೀಡಿ, ಗ್ರಾಮದ ತಮ್ಮ ಕೆಲಸದ ಕ್ಷೇತ್ರದಲ್ಲಿ ಸಿಗಬಹುದಾದ ಅನೇಕ ಯೋಜನೆಗಳನ್ನು ತಮಗೆ ಮುಟ್ಟಿಸಲು ಮತ್ತು ಗೌರವಾನ್ವಿತ ಬದುಕಿಗಾಗಿ ತಮ್ಮ ಸೇವೆ ಮಾಡಲು ನನಗೆ ಅವಕಾಶ ಕೊಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಗ್ರಾಮಸ್ಥರಲ್ಲಿ ವಿನಂತಿಸಿದ್ದಾರೆ.

“ಗ್ರಾಮದ ಶಿಕ್ಷಣ, ಆರೋಗ್ಯ, ವಸತಿ, ರಸ್ತೆ, ಚರಂಡಿ, ವಿದ್ಯುತ್, ಉದ್ಯೋಗ ಸೇರಿದಂತೆ ಮೂಲಸೌಕರ್ಯಗಳು ಒದಗಿಸುವ ಮೂಲಕ ಸರ್ವರಿಗೂ ಸಮಬಾಳು- ಸಮಪಾಲು ಎನ್ನುವಂತೆ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸರಕಾರಿ ಯೋಜನೆಗಳ ಪರಿಣಾಮಕಾರಿ ಜಾರಿ ಮಾಡಿ ಸ್ವಚ್ಚ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಟ್ರ್ಯಾಕ್ಟರ್‌ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ಸಮಾಜದ ಪ್ರತಿ ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ:

ಯುವ ಜನತೆಗೆ;

“ಯುವಕರು ಭವಿಷ್ಯದಲ್ಲಿ ಮಾತ್ರವಲ್ಲ ವರ್ತಮಾನದ ಶಕ್ತಿ ಕೂಡ. ಯುವಕರ ಪ್ರಜ್ವಲ ಜೀವನಕ್ಕೆ ಶಿಕ್ಷಣ, ಉದ್ಯೋಗ, ಆರೋಗ್ಯ ಇವು ಬಹುಮುಖ್ಯ ಆದ್ಯತೆ ಎಂದು ಮನಗಂಡು ರಾಜಕೀಯ ಧ್ವನಿಯಾಗಿ ಗ್ರಾಮದ ಯುವಕರ ಅಭಿವೃದ್ಧಿಪರ ನಿಲ್ಲುತ್ತೇನೆ ಎಂದು ಈ ಮೂಲಕ ಪ್ರಮಾಣಿಕರಿಸುತ್ತೇನೆ. ಹಾಗಾಗಿ ಟ್ರಾಕ್ಟರ್ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಬಹುಮತದಿಂದ ಗೆಲ್ಲಿಸಿ”

  1. ಇಲಾಖೆಗಳ ಮೂಲಕ ಕಬಡ್ಡಿ, ಕ್ರಿಕೇಟ್, ಇತರೆ ಕ್ರೀಡೆಗಳ ಪ್ರೋತ್ಸಾಹ.
  2. ಜರ್ಸಿ, ಗ್ಲೌಸ್, ಕ್ರಿಕೆಟ್ ಬ್ಯಾಟ್, ಮುಂತಾದ ಕ್ರೀಡಾ ಸಾಮಗ್ರಿಗಳು ದೊರಕಿಸುವುದು.
  3. ಜಿಮ್ ಪರಿಕರಗಳ ವ್ಯವಸ್ಥೆಗೆ ಪ್ರಯತ್ನ.
  4. ಉದ್ಯೋಗ ಅವಕಾಶಕ್ಕಾಗಿ ಉದ್ಯೋಗ ಮೇಳ.
  5. ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಸಹಾಯಧನ ಶೀಘ್ರ ಬಿಡುಗಡೆ.
  6. ಉಚಿತ ಕಂಪ್ಯೂಟರ್ ತರಬೇತಿ.
  7. ಗ್ರಂಥಾಲಯಕ್ಕೆ ಪ್ರಯತ್ನಿಸುವುದು.

ಇದನ್ನೂ ಓದಿ: ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಮಹಿಳೆಯರಿಗೆ;

ಸಮಾಜದ ಪ್ರಗತಿಯನ್ನು ಮಹಿಳೆಯರನ್ನು ಹೊರತುಪಡಿಸಿ ನೋಡಲು ಸಾಧ್ಯವಿಲ್ಲ. ಅರ್ಧದಷ್ಟು ಜನಸಂಖ್ಯೆಯಲ್ಲಿರುವ ಮಹಿಳೆಯರು ಕೌಟುಂಬಿಕವಾಗಿ ಮಾತ್ರವಲ್ಲ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿಯೂ ಮಹಿಳೆಯರ ಕೊಡುಗೆ ಅಪಾರವಾದುದು. ಹಾಗಾಗಿ ಮಹಿಳೆಯ ಸ್ವಾವಲಂಬನೆ ಮತ್ತು ಆರೋಗ್ಯ ಬಹುಮುಖ್ಯವಾದದ್ದು ಎಂದು ನಂಬಿದ್ದೇನೆ. ಹಾಗೆಯೇ ಮಹಿಳೆಯರು ಅನೇಕ ಸಮಸ್ಯೆಗಳು, ತೊಳಲಾಟಗಳಲ್ಲಿ ಬದುಕುತ್ತಿರುವುದು ಅರ್ಥಮಾಡಿಕೊಳ್ಳದ ವಿಷಯವೇನಲ್ಲ. ಹಾಗಾಗಿ ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಟ್ರಾಕ್ಟರ್ ಚಿಹ್ನೆಗೆ ತಮ್ಮ ಅಮೂಲ್ಯವಾದ ಮತ ನೀಡಿ ನನ್ನನು ಆಯ್ಕೆ ಮಾಡಿ, ನಿಮ್ಮ ಸಹೋದರನಾಗಿ, ಮಗನಾಗಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ಮಾಡಿ ಕೊಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

  1. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
  2. ಸ್ವಯಂ ಉದ್ಯೋಗ ತರಬೇತಿ ಮತ್ತು ಮಾಹಿತಿ.
  3. ಮಹಿಳಾ ಮತ್ತು ಮಕ್ಕಳ ಆರೋಗ್ಯ ಕುರಿತು ಕಾಳಜಿ.

ರೈತರಿಗೆ;

  1. ಆಧುನಿಕ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸುವುದು.
  2. ಉದ್ಯೋಗ ಖಾತರಿ ಯೋಜನೆ ಅಡಿ 200 ಮಾನವ ದಿನ ಸೃಷ್ಟಿಗೆ ಮನವಿ ಸಲ್ಲಿಸುವುದು.
  3. MGNREG ಯೋಜನೆ ಮೂಲಕ ಕಾಲುವೆಗಳ ಸ್ವಚ್ಛತೆ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸುವುದು.
  4. MGNREG ಮೂಲಕ ಕೃಷಿ ಮತ್ತು ಕೃಷಿಯೇತರ ಸ್ವಯಂ ಚಟುವಟಿಕೆಗೆ ಅನುಕೂಲ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಗ್ರಾಮಸ್ಥರು ತಮ್ಮ ಖಾಸಗಿ ಆಸ್ತಿ ನಿರ್ಮಿಸಿಕೊಳ್ಳಲು ಅವಕಾಶ ಮಾಡಿ ಕೊಡುವುದು.

ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಒಟ್ಟು ಗ್ರಾಮಕ್ಕೆ;

  1. ವರ್ಷಕ್ಕೆ 2 ಸಾವಿರ ಗಿಡಗಳಂತೆ ಐದು ವರ್ಷಕ್ಕೆ 10 ಸಾವಿರ ಗಿಡ ನೆಡುವುದು (ಪಂಚಾಯತ್ ವ್ಯಾಪ್ತಿಯಲ್ಲಿ).
  2. ರಸ್ತೆ, ಚರಂಡಿ, ಕುಡಿಯುವ ನೀರು, ವಸತಿಗೆ ಆದ್ಯತೆ.
  3. ಹಕ್ಕು ಪತ್ರ ನೀಡಲು ಒತ್ತಾಯಿಸುವುದು.
  4. ಕಂದಾಯ ಅದಾಲತ್ ಪ್ರತಿ ಆರು ತಿಂಗಳಿಗೊಮ್ಮೆಳಿಗೊಮ್ಮೆ ಸಮಸ್ಯೆ ಬಗೆ ಹರಿಸುವುದು (ವಿಧವಾ, ವೃದ್ಧಾಪ್ಯ,ಅಂಗವಿಕಲ).
  5. ತಿಂಗಳಲ್ಲಿ ಒಂದು ದಿನ ಆಡಳಿತ ವ್ಯವಸ್ಥೆ ಗ್ರಾಮದಲ್ಲಿದ್ದು ಸಮಸ್ಯೆ ಬಗೆಹರಿಸುವುದು.
  6. ಗ್ರಾಮದಲ್ಲಿ ಆಡಳಿತ ಸಂಬಂಧಿ ದೂರುಗಳಿಗಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಅಲ್ಲಲ್ಲಿ ಬರೆಯುವುದು.
  7. ಸಮುದಾಯ ಭವನ ನಿರ್ಮಿಸುವುದು.
  8. ಆಧುನಿಕ ಬಸ್ ನಿಲ್ದಾಣ.
  9. ಗ್ರಾಮದಲ್ಲಿ ಎಟಿಎಂ/ಬ್ಯಾಂಕ್‌ಗಾಗಿ ಪ್ರಯತ್ನಿಸುವುದು.
  10. ನಿಗಮಗಳಲ್ಲಿನ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುವುದು.
  11. ನಿರ್ಗತಿಕರಿಗೆ ಅಂತ್ಯ ಸಂಸ್ಕಾರಕ್ಕೆ ಪಂಚಾಯಿತಿಯಿಂದ ಸಹಾಯ ಒದಗಿಸುವುದು.
  12. ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಮೂಲಕ ಬಡತನ, ನಿರುದ್ಯೋಗ, ವಲಸೆಯನ್ನು ತಡೆಯುವುದು.
  13. ಗ್ರಾಮದ ಭೋವಿ ಸಮುದಾಯಕ್ಕೆ ಕಲ್ಲು ಕೆಲಸಕ್ಕೆ ಪ್ರತ್ಯೇಕ ಪರವಾನಗಿಗಾಗಿ ಒತ್ತಾಯಿಸುವುದು.
  14. ಗ್ರಾಮದ ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರದ ಇನ್ನೂರೆನ್ಸ್ ಬಗ್ಗೆ ಮಾಹಿತಿ ಒದಗಿಸುವುದು.
  15. ಜಾಗ ಇಲ್ಲದವರಿಗೆ ನಿವೇಶನ ಒದಗಿಸಲು ಪ್ರಯತ್ನಿಸುವುದು.

ಹೀಗೆ ಗ್ರಾಮದ ಪ್ರತಿ ವರ್ಗವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯಲು ತಮ್ಮ ಯೋಚನೆಗಳನ್ನು ಪ್ರಣಾಳಿಕೆಯ ಮೂಲಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...