Homeಕರ್ನಾಟಕಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!

ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ ಎ, (ಪಿಎಚ್‌ಡಿ) ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ

- Advertisement -
- Advertisement -

ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ಭರದಲ್ಲಿ ಸಾಗಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಗಳೂ ಸಹ ದೊಡ್ಡ-ದೊಡ್ಡ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಆದರೆ ಇವುಗಳಲ್ಲಿ ಕೆಲವು ಅಭ್ಯರ್ಥಿಗಳು ಗೆದ್ದರೆ ತಾವು ಮಾಡುವಂತಹ ಕೆಲಸಗಳನ್ನು ಅತ್ಯಂತ ಜಾಣ್ಮೆಯಿಂದ, ವೈಚಾರಿಕವಾಗಿ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ತುಂಬಾ ವಿಶೇಷವಾದ ಮತ್ತು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಗ್ರಾಮ ಎಂಬ ಪುಟ್ಟ ಸಮಾಜದೊಳಗಿರುವ ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಬಾಬು ಎಂ.ಎ, (ಪಿಎಚ್‌ಡಿ), ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎನ್ನುವಂತೆ ಆಡಳಿತ ನಡೆಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮ ಪಂಚಾಯಿತಿಯ ಬಸವನದುರ್ಗದ 5 ನೇ ವಾರ್ಡಿನಿಂದ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

“ಪ್ರಜಾಪ್ರಭುತ್ವದಲ್ಲಿ ಗೌರವದ ಬದುಕು ಪ್ರತಿಯೊಬ್ಬ ಮನುಷ್ಯನ ಹಕ್ಕು. ಹಾಗೆಯೇ ಬಸವನದುರ್ಗದ ಗ್ರಾಮದ ಜನತೆ ಶ್ರಮಿಕರು, ರೈತರು, ಮಹಿಳೆಯರು ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದನ್ನು ನಾನು ತೀರಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ಆದ ಕಾರಣ ತಮ್ಮ ಈ ಕೆಲಸದಲ್ಲಿರುವ ವಿವಿಧ ಸಮಸ್ಯೆಗಳನ್ನು ಮತ್ತು ತಮ್ಮ ಅವಶ್ಯಕತೆಗಳನ್ನು ಅರಿತು ಗ್ರಾಮದ ಜನತೆಯ ಸೇವೆ ಸಲ್ಲಿಸಲು ಇಚ್ಛಿಸಿ 2020ರ  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ನಿಟ್ಟಿನಲ್ಲಿ ನನ್ನ ಆಯ್ಕೆಯ ಗುರುತಾದ ಟ್ರ್ಯಾಕ್ಟರ್‌ ಚಿಹ್ನೆಗೆ ಮತ ನೀಡಿ, ಗ್ರಾಮದ ತಮ್ಮ ಕೆಲಸದ ಕ್ಷೇತ್ರದಲ್ಲಿ ಸಿಗಬಹುದಾದ ಅನೇಕ ಯೋಜನೆಗಳನ್ನು ತಮಗೆ ಮುಟ್ಟಿಸಲು ಮತ್ತು ಗೌರವಾನ್ವಿತ ಬದುಕಿಗಾಗಿ ತಮ್ಮ ಸೇವೆ ಮಾಡಲು ನನಗೆ ಅವಕಾಶ ಕೊಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಗ್ರಾಮಸ್ಥರಲ್ಲಿ ವಿನಂತಿಸಿದ್ದಾರೆ.

“ಗ್ರಾಮದ ಶಿಕ್ಷಣ, ಆರೋಗ್ಯ, ವಸತಿ, ರಸ್ತೆ, ಚರಂಡಿ, ವಿದ್ಯುತ್, ಉದ್ಯೋಗ ಸೇರಿದಂತೆ ಮೂಲಸೌಕರ್ಯಗಳು ಒದಗಿಸುವ ಮೂಲಕ ಸರ್ವರಿಗೂ ಸಮಬಾಳು- ಸಮಪಾಲು ಎನ್ನುವಂತೆ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸರಕಾರಿ ಯೋಜನೆಗಳ ಪರಿಣಾಮಕಾರಿ ಜಾರಿ ಮಾಡಿ ಸ್ವಚ್ಚ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಟ್ರ್ಯಾಕ್ಟರ್‌ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ಸಮಾಜದ ಪ್ರತಿ ವರ್ಗಕ್ಕೂ ಪ್ರತ್ಯೇಕ ಪ್ರಣಾಳಿಕೆ:

ಯುವ ಜನತೆಗೆ;

“ಯುವಕರು ಭವಿಷ್ಯದಲ್ಲಿ ಮಾತ್ರವಲ್ಲ ವರ್ತಮಾನದ ಶಕ್ತಿ ಕೂಡ. ಯುವಕರ ಪ್ರಜ್ವಲ ಜೀವನಕ್ಕೆ ಶಿಕ್ಷಣ, ಉದ್ಯೋಗ, ಆರೋಗ್ಯ ಇವು ಬಹುಮುಖ್ಯ ಆದ್ಯತೆ ಎಂದು ಮನಗಂಡು ರಾಜಕೀಯ ಧ್ವನಿಯಾಗಿ ಗ್ರಾಮದ ಯುವಕರ ಅಭಿವೃದ್ಧಿಪರ ನಿಲ್ಲುತ್ತೇನೆ ಎಂದು ಈ ಮೂಲಕ ಪ್ರಮಾಣಿಕರಿಸುತ್ತೇನೆ. ಹಾಗಾಗಿ ಟ್ರಾಕ್ಟರ್ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಬಹುಮತದಿಂದ ಗೆಲ್ಲಿಸಿ”

  1. ಇಲಾಖೆಗಳ ಮೂಲಕ ಕಬಡ್ಡಿ, ಕ್ರಿಕೇಟ್, ಇತರೆ ಕ್ರೀಡೆಗಳ ಪ್ರೋತ್ಸಾಹ.
  2. ಜರ್ಸಿ, ಗ್ಲೌಸ್, ಕ್ರಿಕೆಟ್ ಬ್ಯಾಟ್, ಮುಂತಾದ ಕ್ರೀಡಾ ಸಾಮಗ್ರಿಗಳು ದೊರಕಿಸುವುದು.
  3. ಜಿಮ್ ಪರಿಕರಗಳ ವ್ಯವಸ್ಥೆಗೆ ಪ್ರಯತ್ನ.
  4. ಉದ್ಯೋಗ ಅವಕಾಶಕ್ಕಾಗಿ ಉದ್ಯೋಗ ಮೇಳ.
  5. ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ಸಹಾಯಧನ ಶೀಘ್ರ ಬಿಡುಗಡೆ.
  6. ಉಚಿತ ಕಂಪ್ಯೂಟರ್ ತರಬೇತಿ.
  7. ಗ್ರಂಥಾಲಯಕ್ಕೆ ಪ್ರಯತ್ನಿಸುವುದು.

ಇದನ್ನೂ ಓದಿ: ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಮಹಿಳೆಯರಿಗೆ;

ಸಮಾಜದ ಪ್ರಗತಿಯನ್ನು ಮಹಿಳೆಯರನ್ನು ಹೊರತುಪಡಿಸಿ ನೋಡಲು ಸಾಧ್ಯವಿಲ್ಲ. ಅರ್ಧದಷ್ಟು ಜನಸಂಖ್ಯೆಯಲ್ಲಿರುವ ಮಹಿಳೆಯರು ಕೌಟುಂಬಿಕವಾಗಿ ಮಾತ್ರವಲ್ಲ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿಯೂ ಮಹಿಳೆಯರ ಕೊಡುಗೆ ಅಪಾರವಾದುದು. ಹಾಗಾಗಿ ಮಹಿಳೆಯ ಸ್ವಾವಲಂಬನೆ ಮತ್ತು ಆರೋಗ್ಯ ಬಹುಮುಖ್ಯವಾದದ್ದು ಎಂದು ನಂಬಿದ್ದೇನೆ. ಹಾಗೆಯೇ ಮಹಿಳೆಯರು ಅನೇಕ ಸಮಸ್ಯೆಗಳು, ತೊಳಲಾಟಗಳಲ್ಲಿ ಬದುಕುತ್ತಿರುವುದು ಅರ್ಥಮಾಡಿಕೊಳ್ಳದ ವಿಷಯವೇನಲ್ಲ. ಹಾಗಾಗಿ ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಟ್ರಾಕ್ಟರ್ ಚಿಹ್ನೆಗೆ ತಮ್ಮ ಅಮೂಲ್ಯವಾದ ಮತ ನೀಡಿ ನನ್ನನು ಆಯ್ಕೆ ಮಾಡಿ, ನಿಮ್ಮ ಸಹೋದರನಾಗಿ, ಮಗನಾಗಿ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ಮಾಡಿ ಕೊಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

  1. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
  2. ಸ್ವಯಂ ಉದ್ಯೋಗ ತರಬೇತಿ ಮತ್ತು ಮಾಹಿತಿ.
  3. ಮಹಿಳಾ ಮತ್ತು ಮಕ್ಕಳ ಆರೋಗ್ಯ ಕುರಿತು ಕಾಳಜಿ.

ರೈತರಿಗೆ;

  1. ಆಧುನಿಕ ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸುವುದು.
  2. ಉದ್ಯೋಗ ಖಾತರಿ ಯೋಜನೆ ಅಡಿ 200 ಮಾನವ ದಿನ ಸೃಷ್ಟಿಗೆ ಮನವಿ ಸಲ್ಲಿಸುವುದು.
  3. MGNREG ಯೋಜನೆ ಮೂಲಕ ಕಾಲುವೆಗಳ ಸ್ವಚ್ಛತೆ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ಕೆ ಶ್ರಮಿಸುವುದು.
  4. MGNREG ಮೂಲಕ ಕೃಷಿ ಮತ್ತು ಕೃಷಿಯೇತರ ಸ್ವಯಂ ಚಟುವಟಿಕೆಗೆ ಅನುಕೂಲ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಗ್ರಾಮಸ್ಥರು ತಮ್ಮ ಖಾಸಗಿ ಆಸ್ತಿ ನಿರ್ಮಿಸಿಕೊಳ್ಳಲು ಅವಕಾಶ ಮಾಡಿ ಕೊಡುವುದು.

ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ಒಟ್ಟು ಗ್ರಾಮಕ್ಕೆ;

  1. ವರ್ಷಕ್ಕೆ 2 ಸಾವಿರ ಗಿಡಗಳಂತೆ ಐದು ವರ್ಷಕ್ಕೆ 10 ಸಾವಿರ ಗಿಡ ನೆಡುವುದು (ಪಂಚಾಯತ್ ವ್ಯಾಪ್ತಿಯಲ್ಲಿ).
  2. ರಸ್ತೆ, ಚರಂಡಿ, ಕುಡಿಯುವ ನೀರು, ವಸತಿಗೆ ಆದ್ಯತೆ.
  3. ಹಕ್ಕು ಪತ್ರ ನೀಡಲು ಒತ್ತಾಯಿಸುವುದು.
  4. ಕಂದಾಯ ಅದಾಲತ್ ಪ್ರತಿ ಆರು ತಿಂಗಳಿಗೊಮ್ಮೆಳಿಗೊಮ್ಮೆ ಸಮಸ್ಯೆ ಬಗೆ ಹರಿಸುವುದು (ವಿಧವಾ, ವೃದ್ಧಾಪ್ಯ,ಅಂಗವಿಕಲ).
  5. ತಿಂಗಳಲ್ಲಿ ಒಂದು ದಿನ ಆಡಳಿತ ವ್ಯವಸ್ಥೆ ಗ್ರಾಮದಲ್ಲಿದ್ದು ಸಮಸ್ಯೆ ಬಗೆಹರಿಸುವುದು.
  6. ಗ್ರಾಮದಲ್ಲಿ ಆಡಳಿತ ಸಂಬಂಧಿ ದೂರುಗಳಿಗಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಅಲ್ಲಲ್ಲಿ ಬರೆಯುವುದು.
  7. ಸಮುದಾಯ ಭವನ ನಿರ್ಮಿಸುವುದು.
  8. ಆಧುನಿಕ ಬಸ್ ನಿಲ್ದಾಣ.
  9. ಗ್ರಾಮದಲ್ಲಿ ಎಟಿಎಂ/ಬ್ಯಾಂಕ್‌ಗಾಗಿ ಪ್ರಯತ್ನಿಸುವುದು.
  10. ನಿಗಮಗಳಲ್ಲಿನ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುವುದು.
  11. ನಿರ್ಗತಿಕರಿಗೆ ಅಂತ್ಯ ಸಂಸ್ಕಾರಕ್ಕೆ ಪಂಚಾಯಿತಿಯಿಂದ ಸಹಾಯ ಒದಗಿಸುವುದು.
  12. ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಮೂಲಕ ಬಡತನ, ನಿರುದ್ಯೋಗ, ವಲಸೆಯನ್ನು ತಡೆಯುವುದು.
  13. ಗ್ರಾಮದ ಭೋವಿ ಸಮುದಾಯಕ್ಕೆ ಕಲ್ಲು ಕೆಲಸಕ್ಕೆ ಪ್ರತ್ಯೇಕ ಪರವಾನಗಿಗಾಗಿ ಒತ್ತಾಯಿಸುವುದು.
  14. ಗ್ರಾಮದ ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರದ ಇನ್ನೂರೆನ್ಸ್ ಬಗ್ಗೆ ಮಾಹಿತಿ ಒದಗಿಸುವುದು.
  15. ಜಾಗ ಇಲ್ಲದವರಿಗೆ ನಿವೇಶನ ಒದಗಿಸಲು ಪ್ರಯತ್ನಿಸುವುದು.

ಹೀಗೆ ಗ್ರಾಮದ ಪ್ರತಿ ವರ್ಗವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯಲು ತಮ್ಮ ಯೋಚನೆಗಳನ್ನು ಪ್ರಣಾಳಿಕೆಯ ಮೂಲಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...