Homeಕರ್ನಾಟಕಗ್ರಾಮ ಪಂಚಾಯತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಿ - ಸಚಿವ ಪ್ರಿಯಾಂಕ್‌ ಖರ್ಗೆ...

ಗ್ರಾಮ ಪಂಚಾಯತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಿ – ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

- Advertisement -
- Advertisement -

ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Minister Priyank Kharge) ಸೋಮವಾರ ಸೂಚಿಸಿದ್ದಾರೆ. ಗ್ರಾ ಮ ಪಂಚಾಯತಿ ವ್ಯಾಪ್ತಿಯ Gram Panchayat e-property

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ ರಾಜ್‌) ಉಮಾ ಮಹದೇವನ್‌ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಖರ್ಗೆ, ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಅವರು ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಇಂತಹ ಪ್ರಕರಣಗಳನ್ನು ತಡೆಯಬೇಕೆಂದು ಅವರು ನಿರ್ದೇಶನ ನೀಡಿದ್ದಾರೆ.

ಮುಖ್ಯಮಂತ್ರಿ ಇ-ಸ್ವತ್ತು ವಿತರಣೆಗೆ ಸಂಬಂಧಿಸಿದಂತೆ ದಿನಾಂಕ 06.01.2025ರಂದು ನೋಂದಣಿ ಮತ್ತು ಮುದ್ರಾಂಕ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ಇಲಾಖೆಗಳ ಸಭೆ ನಡೆಸಿದ್ದರು. ಈ ವೇಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಮಾರು 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿಯಾನದ ರೂಪದಲ್ಲಿ ನಿಯಮಬದ್ಧವಾದ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವ ಮೂಲಕ ತೆರಿಗೆ ಸಂಗ್ರಹವನ್ನು ಮಾಡುವಂತೆ ಅವರು ಸೂಚಿಸಿದ್ದರು. ಗ್ರಾಮ ಪಂಚಾಯತಿ ವ್ಯಾಪ್ತಿಯ

ಮುಖ್ಯಮಂತ್ರಿಯ ಸೂಚನೆಗಳನ್ನು ಅನುಷ್ಟಾನಗೊಳಿಸುವಂತೆ ಹಾಗೂ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಮತ್ತು ಆಸ್ತಿ ತೆರಿಗೆ ಸಂಗ್ರಹಣೆ ಅಭಿಯಾನ ನಡೆಸಲು ಎಲ್ಲಾ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಿಗೆ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇದನ್ನೂಓದಿ:  ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...