Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...