Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...