Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...