Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...