Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...