Homeಮುಖಪುಟವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP...

ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಂದ ಶಿಕ್ಷಣ ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದೊಯ್ಯುವ ಹುನ್ನಾರವಿದು - ಡಾ.ವಿ.ಪಿ ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

“ಎಲ್ಲೆಲ್ಲಿ ಸರ್ಕಾರದ ಹಣವಿದೆಯೊ ಅದನ್ನು ತಮ್ಮನ್ನು ಬೆಂಬಲಿಸುವ ಅಗಸ್ತ್ಯ ಫೌಂಡೇಶನ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಥರಹದ ಸರ್ಕಾರೇತರ ಸಂಘಟನೆಗಳಿಗೆ, ಅದರಲ್ಲಿಯೂ ಬ್ರಾಹ್ಮಣ ಒಡೆತನದ ಸಂಸ್ಥೆಗಳಿಗೆ ಸುರಿಯಲಾಗುತ್ತಿದೆ. ಅದರ ಭಾಗವಾಗಿ ಎ.ವಿ.ಎಂ ಸಂಸ್ಥೆಗೂ ಅನಗತ್ಯವಾಗಿ ಹಣ ವ್ಯಯಿಸಲಾಗುತ್ತಿದೆ” ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಕಿಡಿಕಾರಿದ್ದಾರೆ.

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ಪ್ರಯೋಗಳನ್ನು ಅವರದೇ ಸಂಸ್ಥೆಗಳಿವೆಯಲ್ಲ ಅಲ್ಲಿ ಬೇಕಾದರೆ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಹಣವನ್ನು ಸರ್ಕಾರೇತರ ಸಂಘಟನೆಗಳಿಗೆ ಕೊಡುವುದು ಅಕ್ಷಮ್ಯ ಅಪರಾಧ. ಇವರ ಸಿದ್ಧಾಂತಗಳನ್ನು ಹೇರಲು ಸರ್ಕಾರಿ ಶಾಲೆಗಳನ್ನೆ ಆಯ್ಕೆ ಮಾಡಿಕೊಳ್ಳುವುದು ತಪ್ಪಬೇಕು. ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆ ಕತ್ತರಿಯಾಡಿಸಲಾಯಿತು. ಆದರೆ ಐಸಿಎಸ್‌ಸಿ, ಸಿಬಿಎಸ್‌ಸಿ ಹೆಸರಿನಲ್ಲಿ ಖಾಸಗಿ ಶಾಲೆಗಳ ಮಕ್ಕಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಯೋಗ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ನಿರಂಜನಾರಾಧ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ. ನಮ್ಮಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿಗೆ ಅನುಗುಣವಾಗಿ ಗಣಿತ ಕಲಿಸುವ ಒಂದು ವಿಧಾನವಿದೆ. ಇಂತ ಸಂದರ್ಭದಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿನಲ್ಲಿ ಇಲ್ಲದ ವಿಷಯವನ್ನು ಏಕೆ ಕಲಿಸುತ್ತಿದ್ದಾರೆ? ಇದುವರೆಗೂ ಒಂದು ವಿಧಾನದಲ್ಲಿ ಗಣಿತ ಪಾಠ ಕಲಿತಿದ್ದ ಮಕ್ಕಳಿಗೆ ಏಕಾಏಕಿ ಈ ವಿಧಾನ ಹೇಳಿಕೊಟ್ಟರೆ ಆ ಚಿಕ್ಕ ಮಕ್ಕಳು ಎಷ್ಟರ ಮಟ್ಟಿಗೆ ಗಲಿಬಿಲಿಗೊಳ್ಳುತ್ತಾರೆ ಎಂಬ ಅರಿವು ಸರ್ಕಾರಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ

ಒಂದು ವೇಳೆ ಸರ್ಕಾರ ಯಾವುದೇ ಹೊಸ ಕಲಿಕೆ ಅಥವಾ ಕಾರ್ಯಕ್ರಮವನ್ನು ಆರಂಭಿಸಿದರೆ ಅದನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಪ್ರಾರಂಭಿಸಬೇಕಲ್ಲವೇ? ಏಕೆ ಕೇವಲ ಪರಿಶಿಷ್ಟ ಜಾತಿಯ ಮಕ್ಕಳನ್ನು ಆಯ್ಕೆ ಮಾಡಿ ಕಲಿಸಲಾಗುತ್ತಿದೆ? ಈ ಮಕ್ಕಳು ತೀರಾ ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಕಲಿಯುತ್ತಿದ್ದಾರೆ. ಇದರ ಹಿಂದೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಅಂಬೇಡ್ಕರ್‌ರಂತಹ ಹಲವಾರು ಮಹನೀಯರ ಹೋರಾಟದ ಇತಿಹಾಸವಿದೆ. ಇಂತಹ ಸಂದರ್ಭದಲ್ಲಿ ಆ ಮಕ್ಕಳಿಂದ ಆಧುನಿಕ ಶಿಕ್ಷಣವನ್ನು ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದುಕೊಂಡು ಹೋಗುವು ಹುನ್ನಾರವನ್ನು ಪ್ರಜ್ಞಾವಂತರೆಲ್ಲರೂ ಬಲವಾಗಿ ವಿರೋಧಿಸಬೇಕು ಎಂದರು.

ವೇದಗಣಿತ ವೈಜ್ಞಾನಿಕವಾದುದು, ಉತ್ತಮವಾದುದು ಅಂದರೆ ಇಷ್ಟು ವರ್ಷ ಏಕೆ ಬೋಧಿಸಲಿಲ್ಲ? ನಮ್ಮದೇ ಆದ ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡು 75 ವರ್ಷ ಆದರೂ ಏಕೆ ಅದನ್ನು ಅಳವಡಿಸಲಿಲ್ಲ? ಈ ಹಿಂದಿನ ಶಿಕ್ಷಣ ಸಚಿವರಿಗೆ ಬುದ್ಧಿ ಇರಲಿಲ್ಲವೇ? ಆಗ ಏಕೆ ಕಲಿಸಲಿಲ್ಲವೆಂದರೆ ಅದು ನಿಷ್ಪ್ರಯೋಜಕವಾದುದು ಎಂಬುದು ಅವರಿಗೆ ಗೊತ್ತಿತ್ತು. ಅದನ್ನು ಕಲಿತರೆ ನಾವು ಹಿಂದಕ್ಕೆ ಹೋಗುತ್ತೇವೆ ಎಂಬ ಅರಿವಿತ್ತು. ಹಾಗಾಗಿ ಆಧುನಿಕ ಶಿಕ್ಷಣ ಬೇಕು ಎಂದು ಹೋರಾಟ ನಡೆಸಿದರು. ಅದರ ಮೇಲೆ ಒಂದು ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡಿದ್ದೇವೆ. ಆ ವ್ಯವಸ್ಥೆಯ ಹಳಿ ತಪ್ಪಿಸಿ ಮತ್ತೆ ಸನಾತನಾವಾದದೆಡೆ ಕರೆದುಕೊಂಡು ಹೋಗುವುದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದರು.

ಇಂದು ಹಲವಾರು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿವೆ. ಇಂದು ಸರ್ಕಾರೇತರ ಸಂಸ್ಥೆಗಳಿಗೆ ಸುರಿಯುತ್ತಿರುವ ಅದೇ ಹಣದಲ್ಲಿ ಸಮುದಾಯ ಕಲಿಕಾ ಕೇಂದ್ರಗಳಿಗೆ, ಮಕ್ಕಳಿಗೆ ಕಷ್ಟವಾದ ವಿಷಯಗಳನ್ನು ಕಲಿಸುವುದಕ್ಕೆ, ಹೊಸ ಶಿಕ್ಷಕರ ನೇಮಕಾತಿಗೆ ಬಳಸಬಹುದಿತ್ತಲ್ಲವೇ? ಎಂದು ನಿರಂಜನಾರಾಧ್ಯರು ಪ್ರಶ್ನಿಸಿದರು.

ನಮ್ಮ ಸಂವಿಧಾನದಲ್ಲಿ ವೈಜ್ಞಾನಿಕ ಮನೋಭಾವವನ್ನು ಬಿತ್ತುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ವಿಧಿಸಲಾಗಿದೆ. ಇಂತಹ ಸಂವಿಧಾನವನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ಪಾಠ ಬೋಧಿಸುತ್ತಿರುವ, ಮೌಢ್ಯ ಬಿತ್ತುತ್ತಿರುವ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಬೇಕು. ಅವರಿಗೆ ಸರ್ಕಾರ ನೀಡಿರುವ ಅನುದಾನವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ನಿರಂಜನಾರಾಧ್ಯರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ

  2. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ ವೇದಗಣಿತ ಸೋಮಾರಿತನಕ್ಕೆ ನಾಂದಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...