Homeಮುಖಪುಟವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP...

ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಂದ ಶಿಕ್ಷಣ ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದೊಯ್ಯುವ ಹುನ್ನಾರವಿದು - ಡಾ.ವಿ.ಪಿ ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

“ಎಲ್ಲೆಲ್ಲಿ ಸರ್ಕಾರದ ಹಣವಿದೆಯೊ ಅದನ್ನು ತಮ್ಮನ್ನು ಬೆಂಬಲಿಸುವ ಅಗಸ್ತ್ಯ ಫೌಂಡೇಶನ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಥರಹದ ಸರ್ಕಾರೇತರ ಸಂಘಟನೆಗಳಿಗೆ, ಅದರಲ್ಲಿಯೂ ಬ್ರಾಹ್ಮಣ ಒಡೆತನದ ಸಂಸ್ಥೆಗಳಿಗೆ ಸುರಿಯಲಾಗುತ್ತಿದೆ. ಅದರ ಭಾಗವಾಗಿ ಎ.ವಿ.ಎಂ ಸಂಸ್ಥೆಗೂ ಅನಗತ್ಯವಾಗಿ ಹಣ ವ್ಯಯಿಸಲಾಗುತ್ತಿದೆ” ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಕಿಡಿಕಾರಿದ್ದಾರೆ.

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ಪ್ರಯೋಗಳನ್ನು ಅವರದೇ ಸಂಸ್ಥೆಗಳಿವೆಯಲ್ಲ ಅಲ್ಲಿ ಬೇಕಾದರೆ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಹಣವನ್ನು ಸರ್ಕಾರೇತರ ಸಂಘಟನೆಗಳಿಗೆ ಕೊಡುವುದು ಅಕ್ಷಮ್ಯ ಅಪರಾಧ. ಇವರ ಸಿದ್ಧಾಂತಗಳನ್ನು ಹೇರಲು ಸರ್ಕಾರಿ ಶಾಲೆಗಳನ್ನೆ ಆಯ್ಕೆ ಮಾಡಿಕೊಳ್ಳುವುದು ತಪ್ಪಬೇಕು. ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆ ಕತ್ತರಿಯಾಡಿಸಲಾಯಿತು. ಆದರೆ ಐಸಿಎಸ್‌ಸಿ, ಸಿಬಿಎಸ್‌ಸಿ ಹೆಸರಿನಲ್ಲಿ ಖಾಸಗಿ ಶಾಲೆಗಳ ಮಕ್ಕಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಯೋಗ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ನಿರಂಜನಾರಾಧ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ. ನಮ್ಮಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿಗೆ ಅನುಗುಣವಾಗಿ ಗಣಿತ ಕಲಿಸುವ ಒಂದು ವಿಧಾನವಿದೆ. ಇಂತ ಸಂದರ್ಭದಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿನಲ್ಲಿ ಇಲ್ಲದ ವಿಷಯವನ್ನು ಏಕೆ ಕಲಿಸುತ್ತಿದ್ದಾರೆ? ಇದುವರೆಗೂ ಒಂದು ವಿಧಾನದಲ್ಲಿ ಗಣಿತ ಪಾಠ ಕಲಿತಿದ್ದ ಮಕ್ಕಳಿಗೆ ಏಕಾಏಕಿ ಈ ವಿಧಾನ ಹೇಳಿಕೊಟ್ಟರೆ ಆ ಚಿಕ್ಕ ಮಕ್ಕಳು ಎಷ್ಟರ ಮಟ್ಟಿಗೆ ಗಲಿಬಿಲಿಗೊಳ್ಳುತ್ತಾರೆ ಎಂಬ ಅರಿವು ಸರ್ಕಾರಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ

ಒಂದು ವೇಳೆ ಸರ್ಕಾರ ಯಾವುದೇ ಹೊಸ ಕಲಿಕೆ ಅಥವಾ ಕಾರ್ಯಕ್ರಮವನ್ನು ಆರಂಭಿಸಿದರೆ ಅದನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಪ್ರಾರಂಭಿಸಬೇಕಲ್ಲವೇ? ಏಕೆ ಕೇವಲ ಪರಿಶಿಷ್ಟ ಜಾತಿಯ ಮಕ್ಕಳನ್ನು ಆಯ್ಕೆ ಮಾಡಿ ಕಲಿಸಲಾಗುತ್ತಿದೆ? ಈ ಮಕ್ಕಳು ತೀರಾ ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಕಲಿಯುತ್ತಿದ್ದಾರೆ. ಇದರ ಹಿಂದೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಅಂಬೇಡ್ಕರ್‌ರಂತಹ ಹಲವಾರು ಮಹನೀಯರ ಹೋರಾಟದ ಇತಿಹಾಸವಿದೆ. ಇಂತಹ ಸಂದರ್ಭದಲ್ಲಿ ಆ ಮಕ್ಕಳಿಂದ ಆಧುನಿಕ ಶಿಕ್ಷಣವನ್ನು ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದುಕೊಂಡು ಹೋಗುವು ಹುನ್ನಾರವನ್ನು ಪ್ರಜ್ಞಾವಂತರೆಲ್ಲರೂ ಬಲವಾಗಿ ವಿರೋಧಿಸಬೇಕು ಎಂದರು.

ವೇದಗಣಿತ ವೈಜ್ಞಾನಿಕವಾದುದು, ಉತ್ತಮವಾದುದು ಅಂದರೆ ಇಷ್ಟು ವರ್ಷ ಏಕೆ ಬೋಧಿಸಲಿಲ್ಲ? ನಮ್ಮದೇ ಆದ ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡು 75 ವರ್ಷ ಆದರೂ ಏಕೆ ಅದನ್ನು ಅಳವಡಿಸಲಿಲ್ಲ? ಈ ಹಿಂದಿನ ಶಿಕ್ಷಣ ಸಚಿವರಿಗೆ ಬುದ್ಧಿ ಇರಲಿಲ್ಲವೇ? ಆಗ ಏಕೆ ಕಲಿಸಲಿಲ್ಲವೆಂದರೆ ಅದು ನಿಷ್ಪ್ರಯೋಜಕವಾದುದು ಎಂಬುದು ಅವರಿಗೆ ಗೊತ್ತಿತ್ತು. ಅದನ್ನು ಕಲಿತರೆ ನಾವು ಹಿಂದಕ್ಕೆ ಹೋಗುತ್ತೇವೆ ಎಂಬ ಅರಿವಿತ್ತು. ಹಾಗಾಗಿ ಆಧುನಿಕ ಶಿಕ್ಷಣ ಬೇಕು ಎಂದು ಹೋರಾಟ ನಡೆಸಿದರು. ಅದರ ಮೇಲೆ ಒಂದು ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡಿದ್ದೇವೆ. ಆ ವ್ಯವಸ್ಥೆಯ ಹಳಿ ತಪ್ಪಿಸಿ ಮತ್ತೆ ಸನಾತನಾವಾದದೆಡೆ ಕರೆದುಕೊಂಡು ಹೋಗುವುದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದರು.

ಇಂದು ಹಲವಾರು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿವೆ. ಇಂದು ಸರ್ಕಾರೇತರ ಸಂಸ್ಥೆಗಳಿಗೆ ಸುರಿಯುತ್ತಿರುವ ಅದೇ ಹಣದಲ್ಲಿ ಸಮುದಾಯ ಕಲಿಕಾ ಕೇಂದ್ರಗಳಿಗೆ, ಮಕ್ಕಳಿಗೆ ಕಷ್ಟವಾದ ವಿಷಯಗಳನ್ನು ಕಲಿಸುವುದಕ್ಕೆ, ಹೊಸ ಶಿಕ್ಷಕರ ನೇಮಕಾತಿಗೆ ಬಳಸಬಹುದಿತ್ತಲ್ಲವೇ? ಎಂದು ನಿರಂಜನಾರಾಧ್ಯರು ಪ್ರಶ್ನಿಸಿದರು.

ನಮ್ಮ ಸಂವಿಧಾನದಲ್ಲಿ ವೈಜ್ಞಾನಿಕ ಮನೋಭಾವವನ್ನು ಬಿತ್ತುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ವಿಧಿಸಲಾಗಿದೆ. ಇಂತಹ ಸಂವಿಧಾನವನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ಪಾಠ ಬೋಧಿಸುತ್ತಿರುವ, ಮೌಢ್ಯ ಬಿತ್ತುತ್ತಿರುವ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಬೇಕು. ಅವರಿಗೆ ಸರ್ಕಾರ ನೀಡಿರುವ ಅನುದಾನವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ನಿರಂಜನಾರಾಧ್ಯರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ

  2. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ ವೇದಗಣಿತ ಸೋಮಾರಿತನಕ್ಕೆ ನಾಂದಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...