Homeಮುಖಪುಟವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP...

ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಂದ ಶಿಕ್ಷಣ ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದೊಯ್ಯುವ ಹುನ್ನಾರವಿದು - ಡಾ.ವಿ.ಪಿ ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

“ಎಲ್ಲೆಲ್ಲಿ ಸರ್ಕಾರದ ಹಣವಿದೆಯೊ ಅದನ್ನು ತಮ್ಮನ್ನು ಬೆಂಬಲಿಸುವ ಅಗಸ್ತ್ಯ ಫೌಂಡೇಶನ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಥರಹದ ಸರ್ಕಾರೇತರ ಸಂಘಟನೆಗಳಿಗೆ, ಅದರಲ್ಲಿಯೂ ಬ್ರಾಹ್ಮಣ ಒಡೆತನದ ಸಂಸ್ಥೆಗಳಿಗೆ ಸುರಿಯಲಾಗುತ್ತಿದೆ. ಅದರ ಭಾಗವಾಗಿ ಎ.ವಿ.ಎಂ ಸಂಸ್ಥೆಗೂ ಅನಗತ್ಯವಾಗಿ ಹಣ ವ್ಯಯಿಸಲಾಗುತ್ತಿದೆ” ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಕಿಡಿಕಾರಿದ್ದಾರೆ.

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ಪ್ರಯೋಗಳನ್ನು ಅವರದೇ ಸಂಸ್ಥೆಗಳಿವೆಯಲ್ಲ ಅಲ್ಲಿ ಬೇಕಾದರೆ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಹಣವನ್ನು ಸರ್ಕಾರೇತರ ಸಂಘಟನೆಗಳಿಗೆ ಕೊಡುವುದು ಅಕ್ಷಮ್ಯ ಅಪರಾಧ. ಇವರ ಸಿದ್ಧಾಂತಗಳನ್ನು ಹೇರಲು ಸರ್ಕಾರಿ ಶಾಲೆಗಳನ್ನೆ ಆಯ್ಕೆ ಮಾಡಿಕೊಳ್ಳುವುದು ತಪ್ಪಬೇಕು. ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆ ಕತ್ತರಿಯಾಡಿಸಲಾಯಿತು. ಆದರೆ ಐಸಿಎಸ್‌ಸಿ, ಸಿಬಿಎಸ್‌ಸಿ ಹೆಸರಿನಲ್ಲಿ ಖಾಸಗಿ ಶಾಲೆಗಳ ಮಕ್ಕಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಯೋಗ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ನಿರಂಜನಾರಾಧ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ. ನಮ್ಮಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿಗೆ ಅನುಗುಣವಾಗಿ ಗಣಿತ ಕಲಿಸುವ ಒಂದು ವಿಧಾನವಿದೆ. ಇಂತ ಸಂದರ್ಭದಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿನಲ್ಲಿ ಇಲ್ಲದ ವಿಷಯವನ್ನು ಏಕೆ ಕಲಿಸುತ್ತಿದ್ದಾರೆ? ಇದುವರೆಗೂ ಒಂದು ವಿಧಾನದಲ್ಲಿ ಗಣಿತ ಪಾಠ ಕಲಿತಿದ್ದ ಮಕ್ಕಳಿಗೆ ಏಕಾಏಕಿ ಈ ವಿಧಾನ ಹೇಳಿಕೊಟ್ಟರೆ ಆ ಚಿಕ್ಕ ಮಕ್ಕಳು ಎಷ್ಟರ ಮಟ್ಟಿಗೆ ಗಲಿಬಿಲಿಗೊಳ್ಳುತ್ತಾರೆ ಎಂಬ ಅರಿವು ಸರ್ಕಾರಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ

ಒಂದು ವೇಳೆ ಸರ್ಕಾರ ಯಾವುದೇ ಹೊಸ ಕಲಿಕೆ ಅಥವಾ ಕಾರ್ಯಕ್ರಮವನ್ನು ಆರಂಭಿಸಿದರೆ ಅದನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಪ್ರಾರಂಭಿಸಬೇಕಲ್ಲವೇ? ಏಕೆ ಕೇವಲ ಪರಿಶಿಷ್ಟ ಜಾತಿಯ ಮಕ್ಕಳನ್ನು ಆಯ್ಕೆ ಮಾಡಿ ಕಲಿಸಲಾಗುತ್ತಿದೆ? ಈ ಮಕ್ಕಳು ತೀರಾ ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಕಲಿಯುತ್ತಿದ್ದಾರೆ. ಇದರ ಹಿಂದೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಅಂಬೇಡ್ಕರ್‌ರಂತಹ ಹಲವಾರು ಮಹನೀಯರ ಹೋರಾಟದ ಇತಿಹಾಸವಿದೆ. ಇಂತಹ ಸಂದರ್ಭದಲ್ಲಿ ಆ ಮಕ್ಕಳಿಂದ ಆಧುನಿಕ ಶಿಕ್ಷಣವನ್ನು ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದುಕೊಂಡು ಹೋಗುವು ಹುನ್ನಾರವನ್ನು ಪ್ರಜ್ಞಾವಂತರೆಲ್ಲರೂ ಬಲವಾಗಿ ವಿರೋಧಿಸಬೇಕು ಎಂದರು.

ವೇದಗಣಿತ ವೈಜ್ಞಾನಿಕವಾದುದು, ಉತ್ತಮವಾದುದು ಅಂದರೆ ಇಷ್ಟು ವರ್ಷ ಏಕೆ ಬೋಧಿಸಲಿಲ್ಲ? ನಮ್ಮದೇ ಆದ ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡು 75 ವರ್ಷ ಆದರೂ ಏಕೆ ಅದನ್ನು ಅಳವಡಿಸಲಿಲ್ಲ? ಈ ಹಿಂದಿನ ಶಿಕ್ಷಣ ಸಚಿವರಿಗೆ ಬುದ್ಧಿ ಇರಲಿಲ್ಲವೇ? ಆಗ ಏಕೆ ಕಲಿಸಲಿಲ್ಲವೆಂದರೆ ಅದು ನಿಷ್ಪ್ರಯೋಜಕವಾದುದು ಎಂಬುದು ಅವರಿಗೆ ಗೊತ್ತಿತ್ತು. ಅದನ್ನು ಕಲಿತರೆ ನಾವು ಹಿಂದಕ್ಕೆ ಹೋಗುತ್ತೇವೆ ಎಂಬ ಅರಿವಿತ್ತು. ಹಾಗಾಗಿ ಆಧುನಿಕ ಶಿಕ್ಷಣ ಬೇಕು ಎಂದು ಹೋರಾಟ ನಡೆಸಿದರು. ಅದರ ಮೇಲೆ ಒಂದು ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡಿದ್ದೇವೆ. ಆ ವ್ಯವಸ್ಥೆಯ ಹಳಿ ತಪ್ಪಿಸಿ ಮತ್ತೆ ಸನಾತನಾವಾದದೆಡೆ ಕರೆದುಕೊಂಡು ಹೋಗುವುದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದರು.

ಇಂದು ಹಲವಾರು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿವೆ. ಇಂದು ಸರ್ಕಾರೇತರ ಸಂಸ್ಥೆಗಳಿಗೆ ಸುರಿಯುತ್ತಿರುವ ಅದೇ ಹಣದಲ್ಲಿ ಸಮುದಾಯ ಕಲಿಕಾ ಕೇಂದ್ರಗಳಿಗೆ, ಮಕ್ಕಳಿಗೆ ಕಷ್ಟವಾದ ವಿಷಯಗಳನ್ನು ಕಲಿಸುವುದಕ್ಕೆ, ಹೊಸ ಶಿಕ್ಷಕರ ನೇಮಕಾತಿಗೆ ಬಳಸಬಹುದಿತ್ತಲ್ಲವೇ? ಎಂದು ನಿರಂಜನಾರಾಧ್ಯರು ಪ್ರಶ್ನಿಸಿದರು.

ನಮ್ಮ ಸಂವಿಧಾನದಲ್ಲಿ ವೈಜ್ಞಾನಿಕ ಮನೋಭಾವವನ್ನು ಬಿತ್ತುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ವಿಧಿಸಲಾಗಿದೆ. ಇಂತಹ ಸಂವಿಧಾನವನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ಪಾಠ ಬೋಧಿಸುತ್ತಿರುವ, ಮೌಢ್ಯ ಬಿತ್ತುತ್ತಿರುವ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಬೇಕು. ಅವರಿಗೆ ಸರ್ಕಾರ ನೀಡಿರುವ ಅನುದಾನವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ನಿರಂಜನಾರಾಧ್ಯರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ

  2. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ ವೇದಗಣಿತ ಸೋಮಾರಿತನಕ್ಕೆ ನಾಂದಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....