Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...