Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...