Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...