Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....