Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...