Homeಕರ್ನಾಟಕಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಗ್ರಾ.ಪಂ ಚುನಾವಣೆ: 778 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 498ರಲ್ಲಿ ಆಯ್ಕೆಯಾಗಿ ದಾಖಲೆ ಸೃಷ್ಟಿಸಿದ ಗ್ರಾಕೂಸ್!

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಗ್ರಾಕೂಸ್‌ ವತಿಯಿಂದ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

- Advertisement -
- Advertisement -

ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಕಸರತ್ತುಗಳು ಆರಂಭವಾಗಿವೆ. ಈ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ದಾಖಲೆಯ 498 ಜನರು ಆಯ್ಕೆಯಾಗುವ ಮೂಲಕ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾಧನೆಗೈದಿದೆ.

ಗ್ರಾಮೀಣ ಕೂಲಿಕಾರರ ಸಂಘಟನೆಯು ರಾಯಚೂರು ಜಿಲ್ಲಾ ಕೇಂದ್ರಿತವಾಗಿ ರಾಜ್ಯದ್ಯಾಂತ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರು, ಮಹಿಳೆಯರನ್ನು ಸಂಘಟಿಸಿ ಅವರ ಸಬಲೀಕರಣಕ್ಕಾಗಿ ಹಲವು ದಶಕಗಳಿಂದ ಹೋರಾಡುತ್ತಿದೆ. ಉದ್ಯೋಗ ಖಾತ್ರಿಯ ಸಮರ್ಪಕ ಅನುಷ್ಠಾನಕ್ಕಾಗಿ, ಮದ್ಯನಿಷೇಧಕ್ಕಾಗಿ ಅದು ಹಲವು ಹೋರಾಟಗಳನ್ನು ಸಂಘಟಿಸಿದೆ. ಅದು 2015ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸುಮಾರು 300 ಜನರು ಆಯ್ಕೆಯಾಗುವುದರೊಂದಿಗೆ ಗಮನ ಸೆಳೆದಿತ್ತು.

ಈ ಬಾರಿ ರಾಯಚೂರಿನೊಂದಿಗೆ ಸುಮಾರು 10 ಜಿಲ್ಲೆಗಳಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆ ಮತ್ತು ಮಹಿಳಾ ಸಂಘಟನೆಗಳು 778 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಅವರಲ್ಲಿ ದಾಖಲೆಯ 498 ಜನರು ಆಯ್ಕೆಯಾಗಿದ್ದಾರೆ. ಅಂದರೆ ಶೇ. 70ರಷ್ಟು ಜನರು ಆಯ್ಕೆಯಾಗಿದ್ದಾರೆ. 4-5 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಕೂಸ್ ಸಂಪೂರ್ಣ‌ ಬಹುಮತ ಹೊಂದಿದೆ. 100ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಲ್ಲಿ ಶೇ.10-50ರವರೆಗೆ ನಮ್ಮ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಗ್ರಾಕೂಸ್‌ನ ಮುಖಂಡರಾದ ಅಭಯ್ ತಿಳಿಸಿದ್ದಾರೆ.

ಬೇರೆಲ್ಲಾ ಪಕ್ಷಗಳ ಬೆಂಬಲಿತರಿಗೆ ಹೋಲಿಸಿದರೆ ಇದು ಅತಿ ಹೆಚ್ಚಿನದಾಗಿದೆ. ಅಂದರೆ ಚುನಾವಣೆ ಎದುರಿಸಿದವರಲ್ಲಿ ಬಹುತೇಕರು ಆಯ್ಕೆಯಾಗಿದ್ದಾರೆ ಅಂದರೆ ಈ ಗ್ರಾಕೂಸ್‌ ಮೇಲಿನ ಜನರ ನಂಬಿಕೆಯನ್ನು ಅದು ತೋರಿಸುತ್ತದೆ.

ಈ ಬಾರಿ ಬಿಜೆಪಿ, ಕಾಂಗ್ರೆಸ್‌ನಂತಹ ದೊಡ್ಡ ರಾಜಕೀಯ ಪಕ್ಷಗಳು ನೇರವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವು. ಮುಖ್ಯವಾಗಿ ಬಿಜೆಪಿಯು ತಮ್ಮ ಶಾಸಕರು, ಜಿ.ಪಂ/ತಾ.ಪಂ ಸಾಕಷ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುವಂತೆ ನಿರ್ದೇಶನ ನೀಡಿತ್ತು. ಆ ಅಭ್ಯರ್ಥಿಗಳು ಒಂದು ವಾರ್ಡ್/ಸ್ಥಾನಕ್ಕೆ ಕನಿಷ್ಠ 3-4 ಲಕ್ಷ ರೂ ಹಣವನ್ನು ಖರ್ಚು ಮಾಡಿದ್ದವು. ಆದರೆ ನಮ್ಮ ಅಭ್ಯರ್ಥಿಗಳು ಕೇವಲ 2000-10000 ರೂ ಮಾತ್ರ ಖರ್ಚು ಮಾಡಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದೇವೆ ಎಂದು ಅಭಯ್ ಹೇಳಿದ್ದಾರೆ.

ಈ ಚುನಾವಣಾ ಖರ್ಚಿಗಾಗಿ ನಮ್ಮ ಸಂಘಟನೆಯ ಪ್ರತಿಯೊಂದು ಕುಟುಂಬವು ತಲಾ 50 ರೂಗಳ ದೇಣಿಗೆ ನೀಡಿವೆ. ಈ ಹಣದಿಂದಲೇ ನಾವು ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಪ್ರಾಮಾಣಿಕವಾಗಿ ಮತ ಕೇಳುವಂತೆ ಮತ್ತು ಗೆದ್ದ ನಂತರ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನಮ್ಮ ಅಭ್ಯರ್ಥಿಗಳಿಗೆ ನಾವು ಷರತ್ತುಗಳನ್ನು ವಿಧಿಸಿದ್ದೆವು. ಈ ಷರತ್ತುಗಳನ್ನು ಪಾಲಿಸಲಾಗದೇ ಸುಮಾರು 150-200 ಜನರು ಚುನಾವಣೆಗೆ ನಿಂತು ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನಮ್ಮವರೆಂದು ನಾವು ಭಾವಿಸಿಲ್ಲ ಮತ್ತು ನಮ್ಮ ಫಲಿತಾಂಶದಲ್ಲಿ ಅವರನ್ನು ಸೇರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳು ಮತ್ತು ಆಯ್ಕೆಯಾಗದ ಅಭ್ಯರ್ಥಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಗ್ರಾಮಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನಮ್ಮ ಗುರು ಎಂದು ಗ್ರಾಕೂಸ್ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯ ನಿಷೇಧ ಆಂದೋಲನದ ಹೋರಾಟಗಾರ್ತಿ ಸ್ವರ್ಣ ಭಟ್ ಮಾತನಾಡಿ “ನಮ್ಮ ಅಭ್ಯರ್ಥಿಗಳಿಗೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಷರತ್ತುಗಳನ್ನು ವಿಧಿಸಿದ್ದೆವು. ಅಲ್ಲದೆ ಬೇರೆ ಪಕ್ಷದ ಉತ್ತಮ ಅಭ್ಯರ್ಥಿಗಳಿಗೂ ಬೆಂಬಲ ನೀಡಿದ್ದೇವೆ. ಆದರೆ ಅದಕ್ಕೂ ಮುನ್ನ ಅವರವರ ಧಾರ್ಮಿಕ ನಂಬಿಕೆಗನುಗುಣವಾಗಿ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಅವರಿಂದ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಎಸಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿಸಿದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...