Homeಮುಖಪುಟರೈತ ಸಂಘಟನೆಗಳಿಂದ ಇಂದು 'ಗ್ರಾಮೀಣ ಭಾರತ ಬಂದ್'

ರೈತ ಸಂಘಟನೆಗಳಿಂದ ಇಂದು ‘ಗ್ರಾಮೀಣ ಭಾರತ ಬಂದ್’

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೇರಿದಂತೆ ಹಲವು ರೈತ ಸಂಘಟನೆಗಳು ಇಂದು (ಫೆ.16) ಗ್ರಾಮೀಣ ಭಾರತ ಬಂದ್ ಅಥವಾ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಇಂದಿನ ಬಂದ್‌ಗೆ ಎಲ್ಲಾ ಸಮಾನ ಮನಸ್ಕ ರೈತ ಸಂಘಟನೆಗಳು ಬೆಂಬಲ ನೀಡುವಂತೆ ಎಸ್‌ಕೆಎಂ ಮನವಿ ಮಾಡಿದೆ.

ಈಗಾಗಲೇ ಪಂಜಾಬ್‌ನಿಂದ ದಿಲ್ಲಿ ಚಲೋ ಹಮ್ಮಿಕೊಂಡಿರುವ ರೈತರನ್ನು ದೆಹಲಿಯಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಹರಿಯಾಣದ ಅಂಬಾಲಾ ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. ಈ ನಡುವೆ ದೇಶವ್ಯಾಪಿ ಗ್ರಾಮೀಣ ಪ್ರದೇಶಗಳ ಬಂದ್‌ಗೆ ಕರೆ ನೀಡಲಾಗಿದೆ.

ಬಂದ್‌ ಹಿನ್ನೆಲೆ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ನರೇಗಾ) ಕೆಲಸಗಳು, ಖಾಸಗಿ ಕಚೇರಿಗಳು, ಹಳ್ಳಿಗಳ ಅಂಗಡಿಗಳು ಮತ್ತು ಗ್ರಾಮೀಣ ಕೈಗಾರಿಕಾ ಮತ್ತು ಸೇವಾ ವಲಯದ ಸಂಸ್ಥೆಗಳು ಸ್ಥಗಿತಗೊಳ್ಳಲಿವೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ಆಂಬ್ಯುಲೆನ್ಸ್ ಕಾರ್ಯಾಚರಣೆ, ಪತ್ರಿಕೆ ವಿತರಣೆ, ಮದುವೆ, ಮೆಡಿಕಲ್ ಶಾಪ್‌ಗಳು, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಇತ್ಯಾದಿ ತುರ್ತು ಸೇವೆಗಳ ಮೇಲೆ ಬಂದ್‌ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಕೆಲವು ವರದಿಗಳು ಹೇಳಿವೆ.

ರೈತರ ಬೇಡಿಕೆಗಳೇನು?

ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಅಥವಾ ಎಂಎಸ್‌ಪಿಯನ್ನು ಖಾತರಿಪಡಿಸುವ ಕಾನೂನು ಜಾರಿಗೊಳಿಸಬೇಕು, ನರೇಗಾ ಯೋಜನೆಯನ್ನು ಬಲಪಡಿಸಬೇಕು, ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಯನ್ನು ಮರುಸ್ಥಾಪಿಸಬೇಕು, ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲಾ ಕಾರ್ಮಿಕರಿಗೆ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಿಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಂಜಾಬ್ ಮತ್ತು ಹರಿಯಾಣದ ರೈತರು ಈಗಾಗಲೇ ಬೀದಿಗಿಳಿದಿದ್ದಾರೆ. ಇದೇ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಭಾರತ ಬಂದ್‌ಗೆ ಕರೆ ನೀಡಲಾಗಿದೆ.

ಸ್ವಾಮಿನಾಥನ್ ಸೂತ್ರದ C2 50 (ಬಂಡವಾಳ ವೆಚ್ಚದ ಶೇ. 50ರಷ್ಟು) ಎಂಎಸ್‌ಪಿ ಕಾನೂನು ಖಾತರಿ, ಸಾಲ ಮನ್ನಾ, ಗೃಹ ಬಳಕೆ, ಅಂಗಡಿಗಳಿಗೆ ಮತ್ತು ಕೃಷಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಬೇಕು, ಸಮಗ್ರ ಬೆಳೆ ವಿಮೆ ಮತ್ತು ಪಿಂಚಣಿಯನ್ನು ತಿಂಗಳಿಗೆ ₹10 ಸಾವಿರಕ್ಕೆ ಹೆಚ್ಚಿಸಬೇಕು, ಸ್ಮಾರ್ಟ್ ಮೀಟರ್‌ ಅಳವಡಿಸಬಾರದು ಮತ್ತು ವಿದ್ಯುತ್ ದರ ಹೆಚ್ಚಿಸಬಾರದು ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್‌ಕೆಎಂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಕಾರ್ಮಿಕರು ಮತ್ತು ರೈತರು ಕರೆ ನೀಡಿರುವ ಇಂದಿನ ಗ್ರಾಮೀಣ ಭಾರತ ಬಂದ್‌ ಬೆಂಬಲಿಸಿ ಬುದ್ದಿ ಜೀವಿಗಳು, ಕಲಾವಿದರು ಸೇರಿದಂತೆ ಹಲವರು ಗುರುವಾರ (ಫೆ.15) ಜಂಟಿ ಹೇಳಿಕೆ ನೀಡಿದ್ದಾರೆ. ಪ್ರಭಾತ್ ಪಟ್ನಾಯಕ್, ಅರ್ಥಶಾಸ್ತ್ರಜ್ಞ ಇರ್ಫಾನ್ ಹಬೀಬ್, ಇತಿಹಾಸಕಾರ ನಾಸಿರ್ ತ್ಯಾಬ್ಜಿ, ಆರ್ಥಿಕ ಇತಿಹಾಸಕಾರ ಅನಿಲ್ ಚಂದ್ರ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಪತ್ರಕರ್ತರಾದ ಪಿ ಸಾಯಿನಾಥ್ ಸೇರಿದಂತೆ ಒಟ್ಟು 34 ಜನರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ. ರೈತರು ಮತ್ತು ಕಾರ್ಮಿಕರ ಈ ಮಹತ್ವದ ಬಂದ್‌ ಅನ್ನು ಸಮಾಜದ ಎಲ್ಲಾ ವರ್ಗದ ಜನರು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಸೆಂಟ್ರಲ್ ಟ್ರೇಡ್ ಯೂನಿಯನ್ಸ್ (CTUs)ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (SKM)ಕೈಗಾರಿಕಾ ವಲಯಗಳ ಮುಷ್ಕರ ಮತ್ತು ಗ್ರಾಮೀಣ ಭಾರತ್ ಬಂದ್‌ಗೆ ಒಗ್ಗಟ್ಟಿನ ಕರೆ ನೀಡಿವೆ. ಬಿಜೆಪಿ ನೇತೃತ್ವದ ಸರ್ಕಾರದ ಕಾರ್ಪೊರೇಟ್ ಪರ, ಜನವಿರೋಧಿ ನೀತಿಗಳಿಂದ ತೀವ್ರ ತರವಾದ ದಾಳಿಯನ್ನು ಎದುರಿಸುತ್ತಿರುವ ಕಾರ್ಮಿಕ ವರ್ಗಗಳು ಪರ ಮತ್ತು ರೈತರ ಬೇಡಿಕೆಗಳ ಈಡೇರಿಕೆಗೆ ಈ ಬಂದ್‌ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಿಲ್ಲಿ ಚಲೋ:

ಒಂದೆಡೆ ರೈತ, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ್ದರೆ, ಮತ್ತೊಂದೆಡೆ ದಿಲ್ಲಿ ಚಲೋ ಹಮ್ಮಿಕೊಂಡಿರುವ ಪಂಜಾಬ್‌ನ ರೈತರು ಪಂಜಾಬ್ -ಹರಿಯಾಣದ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಅವರು ದೆಹಲಿಯತ್ತ ಮೆರವಣಿಗೆ ನಡೆಸುತ್ತಿದ್ದಾರೆ.

ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿರುವ ಪೊಲೀಸರು ಈಗಾಗಲೇ ಕೆಲವೆಡೆ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ನಡುವೆ 30,000ಕ್ಕೂ ಹೆಚ್ಚು ಅಶ್ರುವಾಯು ಶೆಲ್‌ಗಳ ಖರೀದಿಗೆ ಆದೇಶ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

2020ರಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ದ ದೊಡ್ಡ ಮಟ್ಟದ ಹೋರಾಟ ರೂಪಿಸಿದ್ದ ರೈತರು ಸುಮಾರು ಹದಿಮೂರು ತಿಂಗಳುಗಳ ಕಾಲ ದೆಹಲಿಯನ್ನು ಸಂಪರ್ಕಿಸುವ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳ ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಧರಣಿ ನಡೆಸಿದ್ದರು. ಆಗಸ್ಟ್ 2020 ರಿಂದ ಡಿಸೆಂಬರ್ 2021 ರವರೆಗೆ ರೈತರು ದೆಹಲಿಯ ಗಡಿಗಳಲ್ಲಿ ಕುಳಿತಿದ್ದರು. ಕೊನೆಗೆ ಕೇಂದ್ರ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ಮೂಲಕ ರೈತರ ಹೋರಾಟಕ್ಕೆ ದೊಡ್ಡ ಮಟ್ಟದ ಜಯ ಸಿಕ್ಕಿತ್ತು.

ಇದನ್ನೂ ಓದಿ : ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...