Homeಮುಖಪುಟನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

- Advertisement -
- Advertisement -

ಯಾವುದೋ ಕಾಲದಲ್ಲಿ ಸೃಷ್ಟಿಸಿ ವ್ಯಾಪಕವಾಗಿದ್ದ ದುರ್ನೀತಿಯ ವರ್ಣವ್ಯವಸ್ಥೆ, ಜಾತಿಯ ಉಗಮಕ್ಕೆ ಕಾರಣವಾಗಿ ಮನುಷ್ಯ-ಮನುಷ್ಯ ನಡುವೆ ನಿರ್ಬಂಧಗಳನ್ನು ಸೃಷ್ಟಿಸಿತ್ತು. ಜಾತಿ ಅಂದಿನಿಂದಲೂ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸಿಕೊಳ್ಳುತ್ತಾ ಬೆಳೆಯುತ್ತಿದೆ. ಜಾತಿ, ಅಸ್ಪೃಶ್ಯತೆ ನಮಲ್ಲಿ ಎಷ್ಟು ಆಳಕ್ಕೆ ಬೇರೂರಿದೆಯೆಂದರೆ, ಅದನ್ನು ಎಷ್ಟು ಬಾರಿ ಕಡಿದರೂ ಮತ್ತೆ ಮತ್ತೆ ಮರವಾಗಿ ಬೇರೆ-ಬೇರೆ ಸ್ವರೂಪಗಳಲ್ಲಿ ಬೆಳೆಯುತ್ತಲೇ ಇದೆ. ಈ ಜಾತಿಯ ಭೂತ ನೀರಿಗೂ ಅಂಟಿಕೊಂಡಿತ್ತು.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಜೊತೆಗೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದ. ಅಲ್ಲದೇ ಹಿಂದು ಏಕ್ತಾ ಸಂಘ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ. ಜೊತೆಗೆ ನೀರು ಕುಡಿದಿದ್ದಕ್ಕಾಗಿ ಬಾಲಕನ ಪುರುಷತ್ವ ಹರಣ ಮಾಡಬೇಕು ಎಂದೂ ಬರೆದುಕೊಂಡಿದೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಹುಡುಗನಿಗೆ ತನ್ನ ಹೆಸರನ್ನು ಕೇಳಿದ್ದಾನೆ. ಅದಕ್ಕೆ ಆ ಹುಡುಗ ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದ್ದಾನೆ. ಅದಕ್ಕೆ ಕೋಪಗೊಂಡ ಆರೋಪಿ ಅಮಾನುಷವಾಗಿ ಥಳಿಸಿದ್ದಲ್ಲದೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿದ್ದಾನೆ. ಇದು ವಿಡಿಯೋದಲ್ಲಿ ದಾಖಲಾಗಿದೆ.

ಶತಮಾನಗಳಷ್ಟು ಹಿಂದೆಯೇ ಊರಿನಲ್ಲಿರುವ ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಜಾತಿವ್ಯವಸ್ಥೆಯ ಪಿರಮಿಡ್‌ನಲ್ಲಿ ಕೆಳಗಿದ್ದ ಶೂದ್ರರು ಮತ್ತು ಅವರಿಗೂ ಹಿಂದುಳಿದವರು ಮುಟ್ಟುವಂತಿರಲಿಲ್ಲ. ಕುಡಿಯುವ ನೀರು ಒಂದುಕಡೆಯಾದರೆ, ಕೆಳಜಾತಿಯವರ ಮನೆಯಿಂದ ಬರುವ ಚರಂಡಿ ನೀರೂ ಕೂಡ ಮೇಲ್ಜಾತಿಯವರ ಚರಂಡಿ ನೀರಿನೊಂದಿಗೆ ಬೆರೆಯಬಾರದು ಎಂಬ ಕಾರಣಕ್ಕೆ ಎತ್ತರದ ಪ್ರದೇಶದಲ್ಲಿ ಮೇಲ್ಜಾತಿಯವರು ಮನೆ ನಿರ್ಮಿಸಿಕೊಳ್ಳುತ್ತಿದ್ದರು. ಕೆಳಜಾತಿಯವರಿಗೆ ತಗ್ಗು ಪ್ರದೇಶಗಳಲ್ಲಿಯೇ ಉಳಿಯುವಂತೆ ನೋಡಿಕೊಳ್ಳುತ್ತಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೆಳಜಾತಿಯವರ ನೆರಳೂ ಕೂಡ ಮೇಲ್ಜಾತಿಯವರ ಮೇಲೆ ಬೀಳಬಾರದು ಎಂಬ ಕಾರಣಕ್ಕೆ ಬೆಳಿಗ್ಗೆ ಸೂರ್ಯ ನೆತ್ತಿಗೇರುವ ಮುನ್ನ ಕೆಳಜಾತಿಯವರು ಬೀದಿಯಲ್ಲಿ ಓಡಾಡುವಂತಿರಲಿಲ್ಲ. ಇಳಿಸಂಜೆಯ ಹೊತ್ತಿಗೆ ಕೆಳಜಾತಿಯವರು ಹಟ್ಟಿ ಸೇರಿಕೊಳ್ಳಬೇಕಾಗಿತ್ತು. (ಯಾಕೆಂದರೆ ಈ ಸಮಯದಲ್ಲಿ ಯಾವುದೇ ವ್ಯಕ್ತಿಯ ನೆರಳು ಉದ್ದವಾಗಿರುತ್ತದೆ)

ಹೀಗೆ ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆಯ ಸಂತತಿ ಹೆಚ್ಚುತ್ತಿದೆ. ಒಬ್ಬ ಮುಸ್ಲಿಂ ಹುಡುಗನಿಗೆ ಬಾಯಾರಿಕೆಯಾಗಿ ದೇವಸ್ಥಾನದೊಳಗೆ ಹೋಗಿ ನೀರು ಕುಡಿದ ಎನ್ನುವ ಕಾರಣಕ್ಕೆ ಇದನ್ನು ಸಹಿಸದೆ ಆ ಹುಡುಗನ ಮೇಲೆ ಹಲ್ಲೆ ಮಾಡಿರುವ ಮೇಲ್ಜಾತಿಯವನೇ ಈ ಸಂತತಿಯ ವಾರಸುದಾರ. ಇನ್ನೂ ಉಳಿದುಕೊಂಡಿರುವ ಈ ದೊಡ್ಡ ಸಂತತಿಯ ಪ್ರತಿನಿಧಿ.

ಇಂತಹ ದೌರ್ಜನ್ಯಗಳ ವಿರುದ್ಧ ಬಹುಶಃ ಇಡೀ ಭಾರತದಲ್ಲಿ ಮೊದಲು ನೇರಾ-ನೇರ ದನಿಯೆತ್ತಿದವರು ನಮ್ಮ ವಚನಕಾರರು. ಇದಕ್ಕೆ ಒಂದು ಸ್ಪಷ್ಟ ಮತ್ತು ಸಣ್ಣ ಉದಾಹರಣೆಗೆ ಅಲ್ಲಮನ ಈ ವಚನವನ್ನು ನೆನಪಿಸಿಕೊಳ್ಳಬಹುದು.

ನಾ ದೇವನಲ್ಲದೆ ನೀ ದೇವನೆ
ನೀ ದೇವನಾದರೆ ಎನ್ನನೇಕೆ ಸಲಹೆ
ಆರೈದು ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ
ನಾ ದೇವ ಕಾಣಾ ಗುಹೇಶ್ವರ

“ನಾನು ದೇವರು. ನೀನು ದೇವರಾಗಲು ಹೇಗೆ ಸಾಧ್ಯ? ನೀನು ದೇವರಾದರೆ ನನ್ನನ್ನು ಯಾಕೆ ಸಲಹುವುದಿಲ್ಲ? ಯಾರಾದರೂ ಬಂದು ಕುಳಿತರೆ ನೀರು ಕೊಡುವೆ. ಹಸಿದಾಗ ಒಂದು ತುತ್ತು ಅನ್ನ ಕೊಡುವೆ. ನಾನೇ ದೇವರು” ಎಂದು ಅಲ್ಲಮಪ್ರಭು ಹೇಳುತ್ತಾರೆ.

ಈ ವಚನ ದೇವರನ್ನು ಉದ್ದೇಶಿಸಿರುವುದಲ್ಲ, ಬದಲಿಗೆ ಆ ದೇವರನ್ನೂ ರಾಜಕೀಯಗೊಳಿಸಿ, ಅದಕ್ಕೂ ಅಸ್ಪೃಶ್ಯತೆ ಅಂಟಿಸಿದ ಕರ್ಮಟ ವೈದಿಕರಿಗೆ ಹೇಳುತ್ತಿರುವ ಮಾತಿದು.

ಯಾರೂ ಯಾರನ್ನೂ ಭೇದದಿಂದ ನಡೆಸಿಕೊಳ್ಳಬಾರದು ಮತ್ತು ಸಮಾನತೆ, ಭ್ರಾತೃತ್ವದಿಂದ ಕಾಣಬೇಕು ಎಂದು ಇದೇ ರೀತಿಯ ತತ್ವ ಸಿದ್ಧಾಂತವನ್ನು ಬುದ್ಧನೂ ಕೂಡ ಕ್ರಿಸ್ತಪೂರ್ವದಲ್ಲೆ ಹೇಳಿದ್ದ. ಆದರೆ ಬಸವಣ್ಣನ ನೇತೃತ್ವದಲ್ಲಿ ನಡೆದ ಈ ಕಲ್ಯಾಣದ ಕ್ರಾಂತಿಯನ್ನು ಆದಷ್ಟು ಬೇಗನೆ ಮುಗಿಸಿದವರು, ಬುದ್ಧನನ್ನು ವಿಷ್ಣುವಿನ ಅವತಾರ ಮಾಡಿದವರೂ ಈ ಭವ್ಯ ಪರಂಪರೆಯ ವಾರಸುದಾರರೇ.

ಕೆರೆಯಲ್ಲಿ ದಲಿತರು ನೀರು ಮುಟ್ಟಬಾರದು ಎಂಬುದರ ವಿರುದ್ಧ ಚೌಡಾರ್ ಕರೆ ನೀರನ್ನು ಮುಟ್ಟಿ ಅಂಬೇಡ್ಕರ್ ಪ್ರತಿಭಟಿಸಿದ್ದರು. ಇದು ಬಹಶ: ಸ್ವತಂತ್ರಪೂರ್ವದಲ್ಲಿ ಸಮಾನತೆಗೆ ನಡದ ಮೊದಲನೇ ಬಹುದೊಡ್ಡ ಆಂದೋಲನ. ಇದನ್ನು ಸಹಿಸದ ಇದೇ ವಾರಸುದಾರರು ಅಂದು ಅವರ ಮೇಲೆ ಹಲ್ಲೆ ಮಾಡಿದ್ದರು. ಇದನ್ನು ಪ್ರಶ್ನಿಸಿದರೆ, ಕೆಲವು ಸುಪ್ತ ಮನುವಾದಿಗಳು, “ಇದು ಯಾವುದೋ ಕಾಲದಲ್ಲಿ ಆಗಿದ್ದು. ಇದನ್ನೇ ಇಟ್ಟುಕೊಂಡು ಇನ್ನೂ ಎಷ್ಟು ಕಾಲ ಕಳೆಯುತ್ತೀರಾ? ಇಂತಹವುಗಳೆಲ್ಲಾ ಈಗ ನಡೆಯುತ್ತಿಲ್ಲ. ಎಲ್ಲರೂ ಬದಲಾಗಿದ್ದಾರೆ” ಎಂದು ಹೇಳುತ್ತಾರೆ.

ಅದರೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವ ಘಟನೆಗೂ ಅಂಬೇಡ್ಕರ್ ಅವರ ಕಾಲದಲ್ಲಿ ನಡೆದಿರುವ ಈ ಘಟನೆಗೂ ವ್ಯತ್ಯಾಸವೇನಾದರೂ ಇದೆಯೇ? ವಾಸ್ತವದಲ್ಲಿ ಇವೆರಡಕ್ಕೂ ಸಂಬಂಧ ಇದೆ. ಆದರೆ ಇದನ್ನೂ ಸಮರ್ಥಿಸಿಕೊಳ್ಳುವವರು ಇದ್ದಾರೆ ಎಂದರೆ ಈ ದೇಶದ ಪರಿಸ್ಥಿತಿಯನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ, ನೀರು ಕುಡಿದಿದ್ದಕ್ಕೆ, ಪ್ರೀತಿ ಮಾಡಿದ್ದಕ್ಕೆ ಕೈಕಾಲು ಮುರಿಯುವ ಪುರುಷತ್ವ ಹರಣ ಮಾಡುವ ಮನಸ್ಥಿತಿ ಇಷ್ಟು ಅಗಾಧವಾಗಿ ಬೆಳೆಯಲು ಯಾವ ಕುಯುಕ್ತಿ ಕೆಲಸ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೋಚರವಾಗುತ್ತದೆ. ಮುಕ್ತ ಮನಸ್ಸಿನಿಂದ ಕಾಣುವ ಹೃದಯವಂತಿಕೆ ಬೆಳೆಸಿಕೊಳ್ಳಬೇಕಷ್ಟೇ!

ಭಾರತವನ್ನು ವಿಶ್ವಗುರು ಮಾಡಲು ನೀರೆರೆದು ಪೋಷಿಸುತ್ತಿರುವ ಹೊತ್ತಲ್ಲೇ ಇಲ್ಲೊಬ್ಬ ನೀರು ಕುಡಿದಿದ್ದಕ್ಕೆ ಹಲ್ಲೆಗೊಳಗಾಗಿದ್ದಾನೆ. ಹೀಗಿರುವಾಗ ನನ್ನ ದೇಶವನ್ನು ವಿಶ್ವಗುರು ಎಂದು ಹೇಗೆ ಒಪ್ಪಿಕೊಳ್ಳುವುದು? ನಮ್ಮ ಪರಂಪರೆ ವಿಶ್ವಕ್ಕೆ ಮಾದರಿ ಎಂದು ಹೇಳುತ್ತಿರುವವರು ಇಂತಹ ಅನಿಷ್ಟ ಪರಂಪರೆಯನ್ನು ಮರೆತರೇಕೆ?
ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ #SorryAsif ಹ್ಯಾಷ್‌ಟ್ಯಾಗ್ ಮೂಲಕ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆದರೆ ಎಷ್ಟು ದಿನ, ಹೀಗೆ ಖಂಡನೆಗಳಲ್ಲೆ ತಾತ್ಕಾಲಿಕವಾಗಿ ಮರೆಯಾಗಿ ಮತ್ತೊಂದು ದಿನ ಇನ್ನೆಲ್ಲೋ ಚಿಗುರಿ ಎದ್ದು, ನೀರು ಕುಡಿದಿದ್ದಕ್ಕೆ ಮತ್ತೊಬ್ಬ ಥಳಿತಗೊಂಡು ಅವಮಾನಕ್ಕೆ ಗುರಿಯಾಗಬೇಕು? ಸಂವಿಧಾನದಲ್ಲಿ ಹೇಳಿಕೊಟ್ಟಿರುವ ಸಮಾನತೆ, ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಲು ನನ್ನ ದೇಶವಾಸಿಗಳಿಗೆ ಏಕಿಷ್ಟು ಕಷ್ಟ?

ಪ್ರತಾಪ್ ಹುಣಸೂರು

ಪ್ರತಾಪ್ ಹುಣಸೂರು
ಸಂಶೋಧನಾ ವಿದ್ಯಾರ್ಥಿ. ಸದ್ಯ ನಾನುಗೌರಿ.ಕಾಂನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...