Homeಮುಖಪುಟನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

- Advertisement -
- Advertisement -

ಯಾವುದೋ ಕಾಲದಲ್ಲಿ ಸೃಷ್ಟಿಸಿ ವ್ಯಾಪಕವಾಗಿದ್ದ ದುರ್ನೀತಿಯ ವರ್ಣವ್ಯವಸ್ಥೆ, ಜಾತಿಯ ಉಗಮಕ್ಕೆ ಕಾರಣವಾಗಿ ಮನುಷ್ಯ-ಮನುಷ್ಯ ನಡುವೆ ನಿರ್ಬಂಧಗಳನ್ನು ಸೃಷ್ಟಿಸಿತ್ತು. ಜಾತಿ ಅಂದಿನಿಂದಲೂ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸಿಕೊಳ್ಳುತ್ತಾ ಬೆಳೆಯುತ್ತಿದೆ. ಜಾತಿ, ಅಸ್ಪೃಶ್ಯತೆ ನಮಲ್ಲಿ ಎಷ್ಟು ಆಳಕ್ಕೆ ಬೇರೂರಿದೆಯೆಂದರೆ, ಅದನ್ನು ಎಷ್ಟು ಬಾರಿ ಕಡಿದರೂ ಮತ್ತೆ ಮತ್ತೆ ಮರವಾಗಿ ಬೇರೆ-ಬೇರೆ ಸ್ವರೂಪಗಳಲ್ಲಿ ಬೆಳೆಯುತ್ತಲೇ ಇದೆ. ಈ ಜಾತಿಯ ಭೂತ ನೀರಿಗೂ ಅಂಟಿಕೊಂಡಿತ್ತು.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಜೊತೆಗೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದ. ಅಲ್ಲದೇ ಹಿಂದು ಏಕ್ತಾ ಸಂಘ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ. ಜೊತೆಗೆ ನೀರು ಕುಡಿದಿದ್ದಕ್ಕಾಗಿ ಬಾಲಕನ ಪುರುಷತ್ವ ಹರಣ ಮಾಡಬೇಕು ಎಂದೂ ಬರೆದುಕೊಂಡಿದೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಹುಡುಗನಿಗೆ ತನ್ನ ಹೆಸರನ್ನು ಕೇಳಿದ್ದಾನೆ. ಅದಕ್ಕೆ ಆ ಹುಡುಗ ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದ್ದಾನೆ. ಅದಕ್ಕೆ ಕೋಪಗೊಂಡ ಆರೋಪಿ ಅಮಾನುಷವಾಗಿ ಥಳಿಸಿದ್ದಲ್ಲದೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿದ್ದಾನೆ. ಇದು ವಿಡಿಯೋದಲ್ಲಿ ದಾಖಲಾಗಿದೆ.

ಶತಮಾನಗಳಷ್ಟು ಹಿಂದೆಯೇ ಊರಿನಲ್ಲಿರುವ ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಜಾತಿವ್ಯವಸ್ಥೆಯ ಪಿರಮಿಡ್‌ನಲ್ಲಿ ಕೆಳಗಿದ್ದ ಶೂದ್ರರು ಮತ್ತು ಅವರಿಗೂ ಹಿಂದುಳಿದವರು ಮುಟ್ಟುವಂತಿರಲಿಲ್ಲ. ಕುಡಿಯುವ ನೀರು ಒಂದುಕಡೆಯಾದರೆ, ಕೆಳಜಾತಿಯವರ ಮನೆಯಿಂದ ಬರುವ ಚರಂಡಿ ನೀರೂ ಕೂಡ ಮೇಲ್ಜಾತಿಯವರ ಚರಂಡಿ ನೀರಿನೊಂದಿಗೆ ಬೆರೆಯಬಾರದು ಎಂಬ ಕಾರಣಕ್ಕೆ ಎತ್ತರದ ಪ್ರದೇಶದಲ್ಲಿ ಮೇಲ್ಜಾತಿಯವರು ಮನೆ ನಿರ್ಮಿಸಿಕೊಳ್ಳುತ್ತಿದ್ದರು. ಕೆಳಜಾತಿಯವರಿಗೆ ತಗ್ಗು ಪ್ರದೇಶಗಳಲ್ಲಿಯೇ ಉಳಿಯುವಂತೆ ನೋಡಿಕೊಳ್ಳುತ್ತಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೆಳಜಾತಿಯವರ ನೆರಳೂ ಕೂಡ ಮೇಲ್ಜಾತಿಯವರ ಮೇಲೆ ಬೀಳಬಾರದು ಎಂಬ ಕಾರಣಕ್ಕೆ ಬೆಳಿಗ್ಗೆ ಸೂರ್ಯ ನೆತ್ತಿಗೇರುವ ಮುನ್ನ ಕೆಳಜಾತಿಯವರು ಬೀದಿಯಲ್ಲಿ ಓಡಾಡುವಂತಿರಲಿಲ್ಲ. ಇಳಿಸಂಜೆಯ ಹೊತ್ತಿಗೆ ಕೆಳಜಾತಿಯವರು ಹಟ್ಟಿ ಸೇರಿಕೊಳ್ಳಬೇಕಾಗಿತ್ತು. (ಯಾಕೆಂದರೆ ಈ ಸಮಯದಲ್ಲಿ ಯಾವುದೇ ವ್ಯಕ್ತಿಯ ನೆರಳು ಉದ್ದವಾಗಿರುತ್ತದೆ)

ಹೀಗೆ ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆಯ ಸಂತತಿ ಹೆಚ್ಚುತ್ತಿದೆ. ಒಬ್ಬ ಮುಸ್ಲಿಂ ಹುಡುಗನಿಗೆ ಬಾಯಾರಿಕೆಯಾಗಿ ದೇವಸ್ಥಾನದೊಳಗೆ ಹೋಗಿ ನೀರು ಕುಡಿದ ಎನ್ನುವ ಕಾರಣಕ್ಕೆ ಇದನ್ನು ಸಹಿಸದೆ ಆ ಹುಡುಗನ ಮೇಲೆ ಹಲ್ಲೆ ಮಾಡಿರುವ ಮೇಲ್ಜಾತಿಯವನೇ ಈ ಸಂತತಿಯ ವಾರಸುದಾರ. ಇನ್ನೂ ಉಳಿದುಕೊಂಡಿರುವ ಈ ದೊಡ್ಡ ಸಂತತಿಯ ಪ್ರತಿನಿಧಿ.

ಇಂತಹ ದೌರ್ಜನ್ಯಗಳ ವಿರುದ್ಧ ಬಹುಶಃ ಇಡೀ ಭಾರತದಲ್ಲಿ ಮೊದಲು ನೇರಾ-ನೇರ ದನಿಯೆತ್ತಿದವರು ನಮ್ಮ ವಚನಕಾರರು. ಇದಕ್ಕೆ ಒಂದು ಸ್ಪಷ್ಟ ಮತ್ತು ಸಣ್ಣ ಉದಾಹರಣೆಗೆ ಅಲ್ಲಮನ ಈ ವಚನವನ್ನು ನೆನಪಿಸಿಕೊಳ್ಳಬಹುದು.

ನಾ ದೇವನಲ್ಲದೆ ನೀ ದೇವನೆ
ನೀ ದೇವನಾದರೆ ಎನ್ನನೇಕೆ ಸಲಹೆ
ಆರೈದು ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ
ನಾ ದೇವ ಕಾಣಾ ಗುಹೇಶ್ವರ

“ನಾನು ದೇವರು. ನೀನು ದೇವರಾಗಲು ಹೇಗೆ ಸಾಧ್ಯ? ನೀನು ದೇವರಾದರೆ ನನ್ನನ್ನು ಯಾಕೆ ಸಲಹುವುದಿಲ್ಲ? ಯಾರಾದರೂ ಬಂದು ಕುಳಿತರೆ ನೀರು ಕೊಡುವೆ. ಹಸಿದಾಗ ಒಂದು ತುತ್ತು ಅನ್ನ ಕೊಡುವೆ. ನಾನೇ ದೇವರು” ಎಂದು ಅಲ್ಲಮಪ್ರಭು ಹೇಳುತ್ತಾರೆ.

ಈ ವಚನ ದೇವರನ್ನು ಉದ್ದೇಶಿಸಿರುವುದಲ್ಲ, ಬದಲಿಗೆ ಆ ದೇವರನ್ನೂ ರಾಜಕೀಯಗೊಳಿಸಿ, ಅದಕ್ಕೂ ಅಸ್ಪೃಶ್ಯತೆ ಅಂಟಿಸಿದ ಕರ್ಮಟ ವೈದಿಕರಿಗೆ ಹೇಳುತ್ತಿರುವ ಮಾತಿದು.

ಯಾರೂ ಯಾರನ್ನೂ ಭೇದದಿಂದ ನಡೆಸಿಕೊಳ್ಳಬಾರದು ಮತ್ತು ಸಮಾನತೆ, ಭ್ರಾತೃತ್ವದಿಂದ ಕಾಣಬೇಕು ಎಂದು ಇದೇ ರೀತಿಯ ತತ್ವ ಸಿದ್ಧಾಂತವನ್ನು ಬುದ್ಧನೂ ಕೂಡ ಕ್ರಿಸ್ತಪೂರ್ವದಲ್ಲೆ ಹೇಳಿದ್ದ. ಆದರೆ ಬಸವಣ್ಣನ ನೇತೃತ್ವದಲ್ಲಿ ನಡೆದ ಈ ಕಲ್ಯಾಣದ ಕ್ರಾಂತಿಯನ್ನು ಆದಷ್ಟು ಬೇಗನೆ ಮುಗಿಸಿದವರು, ಬುದ್ಧನನ್ನು ವಿಷ್ಣುವಿನ ಅವತಾರ ಮಾಡಿದವರೂ ಈ ಭವ್ಯ ಪರಂಪರೆಯ ವಾರಸುದಾರರೇ.

ಕೆರೆಯಲ್ಲಿ ದಲಿತರು ನೀರು ಮುಟ್ಟಬಾರದು ಎಂಬುದರ ವಿರುದ್ಧ ಚೌಡಾರ್ ಕರೆ ನೀರನ್ನು ಮುಟ್ಟಿ ಅಂಬೇಡ್ಕರ್ ಪ್ರತಿಭಟಿಸಿದ್ದರು. ಇದು ಬಹಶ: ಸ್ವತಂತ್ರಪೂರ್ವದಲ್ಲಿ ಸಮಾನತೆಗೆ ನಡದ ಮೊದಲನೇ ಬಹುದೊಡ್ಡ ಆಂದೋಲನ. ಇದನ್ನು ಸಹಿಸದ ಇದೇ ವಾರಸುದಾರರು ಅಂದು ಅವರ ಮೇಲೆ ಹಲ್ಲೆ ಮಾಡಿದ್ದರು. ಇದನ್ನು ಪ್ರಶ್ನಿಸಿದರೆ, ಕೆಲವು ಸುಪ್ತ ಮನುವಾದಿಗಳು, “ಇದು ಯಾವುದೋ ಕಾಲದಲ್ಲಿ ಆಗಿದ್ದು. ಇದನ್ನೇ ಇಟ್ಟುಕೊಂಡು ಇನ್ನೂ ಎಷ್ಟು ಕಾಲ ಕಳೆಯುತ್ತೀರಾ? ಇಂತಹವುಗಳೆಲ್ಲಾ ಈಗ ನಡೆಯುತ್ತಿಲ್ಲ. ಎಲ್ಲರೂ ಬದಲಾಗಿದ್ದಾರೆ” ಎಂದು ಹೇಳುತ್ತಾರೆ.

ಅದರೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವ ಘಟನೆಗೂ ಅಂಬೇಡ್ಕರ್ ಅವರ ಕಾಲದಲ್ಲಿ ನಡೆದಿರುವ ಈ ಘಟನೆಗೂ ವ್ಯತ್ಯಾಸವೇನಾದರೂ ಇದೆಯೇ? ವಾಸ್ತವದಲ್ಲಿ ಇವೆರಡಕ್ಕೂ ಸಂಬಂಧ ಇದೆ. ಆದರೆ ಇದನ್ನೂ ಸಮರ್ಥಿಸಿಕೊಳ್ಳುವವರು ಇದ್ದಾರೆ ಎಂದರೆ ಈ ದೇಶದ ಪರಿಸ್ಥಿತಿಯನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ, ನೀರು ಕುಡಿದಿದ್ದಕ್ಕೆ, ಪ್ರೀತಿ ಮಾಡಿದ್ದಕ್ಕೆ ಕೈಕಾಲು ಮುರಿಯುವ ಪುರುಷತ್ವ ಹರಣ ಮಾಡುವ ಮನಸ್ಥಿತಿ ಇಷ್ಟು ಅಗಾಧವಾಗಿ ಬೆಳೆಯಲು ಯಾವ ಕುಯುಕ್ತಿ ಕೆಲಸ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೋಚರವಾಗುತ್ತದೆ. ಮುಕ್ತ ಮನಸ್ಸಿನಿಂದ ಕಾಣುವ ಹೃದಯವಂತಿಕೆ ಬೆಳೆಸಿಕೊಳ್ಳಬೇಕಷ್ಟೇ!

ಭಾರತವನ್ನು ವಿಶ್ವಗುರು ಮಾಡಲು ನೀರೆರೆದು ಪೋಷಿಸುತ್ತಿರುವ ಹೊತ್ತಲ್ಲೇ ಇಲ್ಲೊಬ್ಬ ನೀರು ಕುಡಿದಿದ್ದಕ್ಕೆ ಹಲ್ಲೆಗೊಳಗಾಗಿದ್ದಾನೆ. ಹೀಗಿರುವಾಗ ನನ್ನ ದೇಶವನ್ನು ವಿಶ್ವಗುರು ಎಂದು ಹೇಗೆ ಒಪ್ಪಿಕೊಳ್ಳುವುದು? ನಮ್ಮ ಪರಂಪರೆ ವಿಶ್ವಕ್ಕೆ ಮಾದರಿ ಎಂದು ಹೇಳುತ್ತಿರುವವರು ಇಂತಹ ಅನಿಷ್ಟ ಪರಂಪರೆಯನ್ನು ಮರೆತರೇಕೆ?
ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ #SorryAsif ಹ್ಯಾಷ್‌ಟ್ಯಾಗ್ ಮೂಲಕ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆದರೆ ಎಷ್ಟು ದಿನ, ಹೀಗೆ ಖಂಡನೆಗಳಲ್ಲೆ ತಾತ್ಕಾಲಿಕವಾಗಿ ಮರೆಯಾಗಿ ಮತ್ತೊಂದು ದಿನ ಇನ್ನೆಲ್ಲೋ ಚಿಗುರಿ ಎದ್ದು, ನೀರು ಕುಡಿದಿದ್ದಕ್ಕೆ ಮತ್ತೊಬ್ಬ ಥಳಿತಗೊಂಡು ಅವಮಾನಕ್ಕೆ ಗುರಿಯಾಗಬೇಕು? ಸಂವಿಧಾನದಲ್ಲಿ ಹೇಳಿಕೊಟ್ಟಿರುವ ಸಮಾನತೆ, ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಲು ನನ್ನ ದೇಶವಾಸಿಗಳಿಗೆ ಏಕಿಷ್ಟು ಕಷ್ಟ?

ಪ್ರತಾಪ್ ಹುಣಸೂರು

ಪ್ರತಾಪ್ ಹುಣಸೂರು
ಸಂಶೋಧನಾ ವಿದ್ಯಾರ್ಥಿ. ಸದ್ಯ ನಾನುಗೌರಿ.ಕಾಂನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...