Homeಮುಖಪುಟನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

- Advertisement -
- Advertisement -

ಯಾವುದೋ ಕಾಲದಲ್ಲಿ ಸೃಷ್ಟಿಸಿ ವ್ಯಾಪಕವಾಗಿದ್ದ ದುರ್ನೀತಿಯ ವರ್ಣವ್ಯವಸ್ಥೆ, ಜಾತಿಯ ಉಗಮಕ್ಕೆ ಕಾರಣವಾಗಿ ಮನುಷ್ಯ-ಮನುಷ್ಯ ನಡುವೆ ನಿರ್ಬಂಧಗಳನ್ನು ಸೃಷ್ಟಿಸಿತ್ತು. ಜಾತಿ ಅಂದಿನಿಂದಲೂ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸಿಕೊಳ್ಳುತ್ತಾ ಬೆಳೆಯುತ್ತಿದೆ. ಜಾತಿ, ಅಸ್ಪೃಶ್ಯತೆ ನಮಲ್ಲಿ ಎಷ್ಟು ಆಳಕ್ಕೆ ಬೇರೂರಿದೆಯೆಂದರೆ, ಅದನ್ನು ಎಷ್ಟು ಬಾರಿ ಕಡಿದರೂ ಮತ್ತೆ ಮತ್ತೆ ಮರವಾಗಿ ಬೇರೆ-ಬೇರೆ ಸ್ವರೂಪಗಳಲ್ಲಿ ಬೆಳೆಯುತ್ತಲೇ ಇದೆ. ಈ ಜಾತಿಯ ಭೂತ ನೀರಿಗೂ ಅಂಟಿಕೊಂಡಿತ್ತು.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಜೊತೆಗೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದ. ಅಲ್ಲದೇ ಹಿಂದು ಏಕ್ತಾ ಸಂಘ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ. ಜೊತೆಗೆ ನೀರು ಕುಡಿದಿದ್ದಕ್ಕಾಗಿ ಬಾಲಕನ ಪುರುಷತ್ವ ಹರಣ ಮಾಡಬೇಕು ಎಂದೂ ಬರೆದುಕೊಂಡಿದೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಹುಡುಗನಿಗೆ ತನ್ನ ಹೆಸರನ್ನು ಕೇಳಿದ್ದಾನೆ. ಅದಕ್ಕೆ ಆ ಹುಡುಗ ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದ್ದಾನೆ. ಅದಕ್ಕೆ ಕೋಪಗೊಂಡ ಆರೋಪಿ ಅಮಾನುಷವಾಗಿ ಥಳಿಸಿದ್ದಲ್ಲದೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿದ್ದಾನೆ. ಇದು ವಿಡಿಯೋದಲ್ಲಿ ದಾಖಲಾಗಿದೆ.

ಶತಮಾನಗಳಷ್ಟು ಹಿಂದೆಯೇ ಊರಿನಲ್ಲಿರುವ ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಜಾತಿವ್ಯವಸ್ಥೆಯ ಪಿರಮಿಡ್‌ನಲ್ಲಿ ಕೆಳಗಿದ್ದ ಶೂದ್ರರು ಮತ್ತು ಅವರಿಗೂ ಹಿಂದುಳಿದವರು ಮುಟ್ಟುವಂತಿರಲಿಲ್ಲ. ಕುಡಿಯುವ ನೀರು ಒಂದುಕಡೆಯಾದರೆ, ಕೆಳಜಾತಿಯವರ ಮನೆಯಿಂದ ಬರುವ ಚರಂಡಿ ನೀರೂ ಕೂಡ ಮೇಲ್ಜಾತಿಯವರ ಚರಂಡಿ ನೀರಿನೊಂದಿಗೆ ಬೆರೆಯಬಾರದು ಎಂಬ ಕಾರಣಕ್ಕೆ ಎತ್ತರದ ಪ್ರದೇಶದಲ್ಲಿ ಮೇಲ್ಜಾತಿಯವರು ಮನೆ ನಿರ್ಮಿಸಿಕೊಳ್ಳುತ್ತಿದ್ದರು. ಕೆಳಜಾತಿಯವರಿಗೆ ತಗ್ಗು ಪ್ರದೇಶಗಳಲ್ಲಿಯೇ ಉಳಿಯುವಂತೆ ನೋಡಿಕೊಳ್ಳುತ್ತಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೆಳಜಾತಿಯವರ ನೆರಳೂ ಕೂಡ ಮೇಲ್ಜಾತಿಯವರ ಮೇಲೆ ಬೀಳಬಾರದು ಎಂಬ ಕಾರಣಕ್ಕೆ ಬೆಳಿಗ್ಗೆ ಸೂರ್ಯ ನೆತ್ತಿಗೇರುವ ಮುನ್ನ ಕೆಳಜಾತಿಯವರು ಬೀದಿಯಲ್ಲಿ ಓಡಾಡುವಂತಿರಲಿಲ್ಲ. ಇಳಿಸಂಜೆಯ ಹೊತ್ತಿಗೆ ಕೆಳಜಾತಿಯವರು ಹಟ್ಟಿ ಸೇರಿಕೊಳ್ಳಬೇಕಾಗಿತ್ತು. (ಯಾಕೆಂದರೆ ಈ ಸಮಯದಲ್ಲಿ ಯಾವುದೇ ವ್ಯಕ್ತಿಯ ನೆರಳು ಉದ್ದವಾಗಿರುತ್ತದೆ)

ಹೀಗೆ ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆಯ ಸಂತತಿ ಹೆಚ್ಚುತ್ತಿದೆ. ಒಬ್ಬ ಮುಸ್ಲಿಂ ಹುಡುಗನಿಗೆ ಬಾಯಾರಿಕೆಯಾಗಿ ದೇವಸ್ಥಾನದೊಳಗೆ ಹೋಗಿ ನೀರು ಕುಡಿದ ಎನ್ನುವ ಕಾರಣಕ್ಕೆ ಇದನ್ನು ಸಹಿಸದೆ ಆ ಹುಡುಗನ ಮೇಲೆ ಹಲ್ಲೆ ಮಾಡಿರುವ ಮೇಲ್ಜಾತಿಯವನೇ ಈ ಸಂತತಿಯ ವಾರಸುದಾರ. ಇನ್ನೂ ಉಳಿದುಕೊಂಡಿರುವ ಈ ದೊಡ್ಡ ಸಂತತಿಯ ಪ್ರತಿನಿಧಿ.

ಇಂತಹ ದೌರ್ಜನ್ಯಗಳ ವಿರುದ್ಧ ಬಹುಶಃ ಇಡೀ ಭಾರತದಲ್ಲಿ ಮೊದಲು ನೇರಾ-ನೇರ ದನಿಯೆತ್ತಿದವರು ನಮ್ಮ ವಚನಕಾರರು. ಇದಕ್ಕೆ ಒಂದು ಸ್ಪಷ್ಟ ಮತ್ತು ಸಣ್ಣ ಉದಾಹರಣೆಗೆ ಅಲ್ಲಮನ ಈ ವಚನವನ್ನು ನೆನಪಿಸಿಕೊಳ್ಳಬಹುದು.

ನಾ ದೇವನಲ್ಲದೆ ನೀ ದೇವನೆ
ನೀ ದೇವನಾದರೆ ಎನ್ನನೇಕೆ ಸಲಹೆ
ಆರೈದು ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ
ನಾ ದೇವ ಕಾಣಾ ಗುಹೇಶ್ವರ

“ನಾನು ದೇವರು. ನೀನು ದೇವರಾಗಲು ಹೇಗೆ ಸಾಧ್ಯ? ನೀನು ದೇವರಾದರೆ ನನ್ನನ್ನು ಯಾಕೆ ಸಲಹುವುದಿಲ್ಲ? ಯಾರಾದರೂ ಬಂದು ಕುಳಿತರೆ ನೀರು ಕೊಡುವೆ. ಹಸಿದಾಗ ಒಂದು ತುತ್ತು ಅನ್ನ ಕೊಡುವೆ. ನಾನೇ ದೇವರು” ಎಂದು ಅಲ್ಲಮಪ್ರಭು ಹೇಳುತ್ತಾರೆ.

ಈ ವಚನ ದೇವರನ್ನು ಉದ್ದೇಶಿಸಿರುವುದಲ್ಲ, ಬದಲಿಗೆ ಆ ದೇವರನ್ನೂ ರಾಜಕೀಯಗೊಳಿಸಿ, ಅದಕ್ಕೂ ಅಸ್ಪೃಶ್ಯತೆ ಅಂಟಿಸಿದ ಕರ್ಮಟ ವೈದಿಕರಿಗೆ ಹೇಳುತ್ತಿರುವ ಮಾತಿದು.

ಯಾರೂ ಯಾರನ್ನೂ ಭೇದದಿಂದ ನಡೆಸಿಕೊಳ್ಳಬಾರದು ಮತ್ತು ಸಮಾನತೆ, ಭ್ರಾತೃತ್ವದಿಂದ ಕಾಣಬೇಕು ಎಂದು ಇದೇ ರೀತಿಯ ತತ್ವ ಸಿದ್ಧಾಂತವನ್ನು ಬುದ್ಧನೂ ಕೂಡ ಕ್ರಿಸ್ತಪೂರ್ವದಲ್ಲೆ ಹೇಳಿದ್ದ. ಆದರೆ ಬಸವಣ್ಣನ ನೇತೃತ್ವದಲ್ಲಿ ನಡೆದ ಈ ಕಲ್ಯಾಣದ ಕ್ರಾಂತಿಯನ್ನು ಆದಷ್ಟು ಬೇಗನೆ ಮುಗಿಸಿದವರು, ಬುದ್ಧನನ್ನು ವಿಷ್ಣುವಿನ ಅವತಾರ ಮಾಡಿದವರೂ ಈ ಭವ್ಯ ಪರಂಪರೆಯ ವಾರಸುದಾರರೇ.

ಕೆರೆಯಲ್ಲಿ ದಲಿತರು ನೀರು ಮುಟ್ಟಬಾರದು ಎಂಬುದರ ವಿರುದ್ಧ ಚೌಡಾರ್ ಕರೆ ನೀರನ್ನು ಮುಟ್ಟಿ ಅಂಬೇಡ್ಕರ್ ಪ್ರತಿಭಟಿಸಿದ್ದರು. ಇದು ಬಹಶ: ಸ್ವತಂತ್ರಪೂರ್ವದಲ್ಲಿ ಸಮಾನತೆಗೆ ನಡದ ಮೊದಲನೇ ಬಹುದೊಡ್ಡ ಆಂದೋಲನ. ಇದನ್ನು ಸಹಿಸದ ಇದೇ ವಾರಸುದಾರರು ಅಂದು ಅವರ ಮೇಲೆ ಹಲ್ಲೆ ಮಾಡಿದ್ದರು. ಇದನ್ನು ಪ್ರಶ್ನಿಸಿದರೆ, ಕೆಲವು ಸುಪ್ತ ಮನುವಾದಿಗಳು, “ಇದು ಯಾವುದೋ ಕಾಲದಲ್ಲಿ ಆಗಿದ್ದು. ಇದನ್ನೇ ಇಟ್ಟುಕೊಂಡು ಇನ್ನೂ ಎಷ್ಟು ಕಾಲ ಕಳೆಯುತ್ತೀರಾ? ಇಂತಹವುಗಳೆಲ್ಲಾ ಈಗ ನಡೆಯುತ್ತಿಲ್ಲ. ಎಲ್ಲರೂ ಬದಲಾಗಿದ್ದಾರೆ” ಎಂದು ಹೇಳುತ್ತಾರೆ.

ಅದರೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವ ಘಟನೆಗೂ ಅಂಬೇಡ್ಕರ್ ಅವರ ಕಾಲದಲ್ಲಿ ನಡೆದಿರುವ ಈ ಘಟನೆಗೂ ವ್ಯತ್ಯಾಸವೇನಾದರೂ ಇದೆಯೇ? ವಾಸ್ತವದಲ್ಲಿ ಇವೆರಡಕ್ಕೂ ಸಂಬಂಧ ಇದೆ. ಆದರೆ ಇದನ್ನೂ ಸಮರ್ಥಿಸಿಕೊಳ್ಳುವವರು ಇದ್ದಾರೆ ಎಂದರೆ ಈ ದೇಶದ ಪರಿಸ್ಥಿತಿಯನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ, ನೀರು ಕುಡಿದಿದ್ದಕ್ಕೆ, ಪ್ರೀತಿ ಮಾಡಿದ್ದಕ್ಕೆ ಕೈಕಾಲು ಮುರಿಯುವ ಪುರುಷತ್ವ ಹರಣ ಮಾಡುವ ಮನಸ್ಥಿತಿ ಇಷ್ಟು ಅಗಾಧವಾಗಿ ಬೆಳೆಯಲು ಯಾವ ಕುಯುಕ್ತಿ ಕೆಲಸ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೋಚರವಾಗುತ್ತದೆ. ಮುಕ್ತ ಮನಸ್ಸಿನಿಂದ ಕಾಣುವ ಹೃದಯವಂತಿಕೆ ಬೆಳೆಸಿಕೊಳ್ಳಬೇಕಷ್ಟೇ!

ಭಾರತವನ್ನು ವಿಶ್ವಗುರು ಮಾಡಲು ನೀರೆರೆದು ಪೋಷಿಸುತ್ತಿರುವ ಹೊತ್ತಲ್ಲೇ ಇಲ್ಲೊಬ್ಬ ನೀರು ಕುಡಿದಿದ್ದಕ್ಕೆ ಹಲ್ಲೆಗೊಳಗಾಗಿದ್ದಾನೆ. ಹೀಗಿರುವಾಗ ನನ್ನ ದೇಶವನ್ನು ವಿಶ್ವಗುರು ಎಂದು ಹೇಗೆ ಒಪ್ಪಿಕೊಳ್ಳುವುದು? ನಮ್ಮ ಪರಂಪರೆ ವಿಶ್ವಕ್ಕೆ ಮಾದರಿ ಎಂದು ಹೇಳುತ್ತಿರುವವರು ಇಂತಹ ಅನಿಷ್ಟ ಪರಂಪರೆಯನ್ನು ಮರೆತರೇಕೆ?
ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ #SorryAsif ಹ್ಯಾಷ್‌ಟ್ಯಾಗ್ ಮೂಲಕ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆದರೆ ಎಷ್ಟು ದಿನ, ಹೀಗೆ ಖಂಡನೆಗಳಲ್ಲೆ ತಾತ್ಕಾಲಿಕವಾಗಿ ಮರೆಯಾಗಿ ಮತ್ತೊಂದು ದಿನ ಇನ್ನೆಲ್ಲೋ ಚಿಗುರಿ ಎದ್ದು, ನೀರು ಕುಡಿದಿದ್ದಕ್ಕೆ ಮತ್ತೊಬ್ಬ ಥಳಿತಗೊಂಡು ಅವಮಾನಕ್ಕೆ ಗುರಿಯಾಗಬೇಕು? ಸಂವಿಧಾನದಲ್ಲಿ ಹೇಳಿಕೊಟ್ಟಿರುವ ಸಮಾನತೆ, ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಲು ನನ್ನ ದೇಶವಾಸಿಗಳಿಗೆ ಏಕಿಷ್ಟು ಕಷ್ಟ?

ಪ್ರತಾಪ್ ಹುಣಸೂರು

ಪ್ರತಾಪ್ ಹುಣಸೂರು
ಸಂಶೋಧನಾ ವಿದ್ಯಾರ್ಥಿ. ಸದ್ಯ ನಾನುಗೌರಿ.ಕಾಂನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....