Homeಮುಖಪುಟನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

- Advertisement -
- Advertisement -

ಯಾವುದೋ ಕಾಲದಲ್ಲಿ ಸೃಷ್ಟಿಸಿ ವ್ಯಾಪಕವಾಗಿದ್ದ ದುರ್ನೀತಿಯ ವರ್ಣವ್ಯವಸ್ಥೆ, ಜಾತಿಯ ಉಗಮಕ್ಕೆ ಕಾರಣವಾಗಿ ಮನುಷ್ಯ-ಮನುಷ್ಯ ನಡುವೆ ನಿರ್ಬಂಧಗಳನ್ನು ಸೃಷ್ಟಿಸಿತ್ತು. ಜಾತಿ ಅಂದಿನಿಂದಲೂ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸಿಕೊಳ್ಳುತ್ತಾ ಬೆಳೆಯುತ್ತಿದೆ. ಜಾತಿ, ಅಸ್ಪೃಶ್ಯತೆ ನಮಲ್ಲಿ ಎಷ್ಟು ಆಳಕ್ಕೆ ಬೇರೂರಿದೆಯೆಂದರೆ, ಅದನ್ನು ಎಷ್ಟು ಬಾರಿ ಕಡಿದರೂ ಮತ್ತೆ ಮತ್ತೆ ಮರವಾಗಿ ಬೇರೆ-ಬೇರೆ ಸ್ವರೂಪಗಳಲ್ಲಿ ಬೆಳೆಯುತ್ತಲೇ ಇದೆ. ಈ ಜಾತಿಯ ಭೂತ ನೀರಿಗೂ ಅಂಟಿಕೊಂಡಿತ್ತು.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಜೊತೆಗೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದ. ಅಲ್ಲದೇ ಹಿಂದು ಏಕ್ತಾ ಸಂಘ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ. ಜೊತೆಗೆ ನೀರು ಕುಡಿದಿದ್ದಕ್ಕಾಗಿ ಬಾಲಕನ ಪುರುಷತ್ವ ಹರಣ ಮಾಡಬೇಕು ಎಂದೂ ಬರೆದುಕೊಂಡಿದೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಹುಡುಗನಿಗೆ ತನ್ನ ಹೆಸರನ್ನು ಕೇಳಿದ್ದಾನೆ. ಅದಕ್ಕೆ ಆ ಹುಡುಗ ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದ್ದಾನೆ. ಅದಕ್ಕೆ ಕೋಪಗೊಂಡ ಆರೋಪಿ ಅಮಾನುಷವಾಗಿ ಥಳಿಸಿದ್ದಲ್ಲದೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿದ್ದಾನೆ. ಇದು ವಿಡಿಯೋದಲ್ಲಿ ದಾಖಲಾಗಿದೆ.

ಶತಮಾನಗಳಷ್ಟು ಹಿಂದೆಯೇ ಊರಿನಲ್ಲಿರುವ ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಜಾತಿವ್ಯವಸ್ಥೆಯ ಪಿರಮಿಡ್‌ನಲ್ಲಿ ಕೆಳಗಿದ್ದ ಶೂದ್ರರು ಮತ್ತು ಅವರಿಗೂ ಹಿಂದುಳಿದವರು ಮುಟ್ಟುವಂತಿರಲಿಲ್ಲ. ಕುಡಿಯುವ ನೀರು ಒಂದುಕಡೆಯಾದರೆ, ಕೆಳಜಾತಿಯವರ ಮನೆಯಿಂದ ಬರುವ ಚರಂಡಿ ನೀರೂ ಕೂಡ ಮೇಲ್ಜಾತಿಯವರ ಚರಂಡಿ ನೀರಿನೊಂದಿಗೆ ಬೆರೆಯಬಾರದು ಎಂಬ ಕಾರಣಕ್ಕೆ ಎತ್ತರದ ಪ್ರದೇಶದಲ್ಲಿ ಮೇಲ್ಜಾತಿಯವರು ಮನೆ ನಿರ್ಮಿಸಿಕೊಳ್ಳುತ್ತಿದ್ದರು. ಕೆಳಜಾತಿಯವರಿಗೆ ತಗ್ಗು ಪ್ರದೇಶಗಳಲ್ಲಿಯೇ ಉಳಿಯುವಂತೆ ನೋಡಿಕೊಳ್ಳುತ್ತಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೆಳಜಾತಿಯವರ ನೆರಳೂ ಕೂಡ ಮೇಲ್ಜಾತಿಯವರ ಮೇಲೆ ಬೀಳಬಾರದು ಎಂಬ ಕಾರಣಕ್ಕೆ ಬೆಳಿಗ್ಗೆ ಸೂರ್ಯ ನೆತ್ತಿಗೇರುವ ಮುನ್ನ ಕೆಳಜಾತಿಯವರು ಬೀದಿಯಲ್ಲಿ ಓಡಾಡುವಂತಿರಲಿಲ್ಲ. ಇಳಿಸಂಜೆಯ ಹೊತ್ತಿಗೆ ಕೆಳಜಾತಿಯವರು ಹಟ್ಟಿ ಸೇರಿಕೊಳ್ಳಬೇಕಾಗಿತ್ತು. (ಯಾಕೆಂದರೆ ಈ ಸಮಯದಲ್ಲಿ ಯಾವುದೇ ವ್ಯಕ್ತಿಯ ನೆರಳು ಉದ್ದವಾಗಿರುತ್ತದೆ)

ಹೀಗೆ ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆಯ ಸಂತತಿ ಹೆಚ್ಚುತ್ತಿದೆ. ಒಬ್ಬ ಮುಸ್ಲಿಂ ಹುಡುಗನಿಗೆ ಬಾಯಾರಿಕೆಯಾಗಿ ದೇವಸ್ಥಾನದೊಳಗೆ ಹೋಗಿ ನೀರು ಕುಡಿದ ಎನ್ನುವ ಕಾರಣಕ್ಕೆ ಇದನ್ನು ಸಹಿಸದೆ ಆ ಹುಡುಗನ ಮೇಲೆ ಹಲ್ಲೆ ಮಾಡಿರುವ ಮೇಲ್ಜಾತಿಯವನೇ ಈ ಸಂತತಿಯ ವಾರಸುದಾರ. ಇನ್ನೂ ಉಳಿದುಕೊಂಡಿರುವ ಈ ದೊಡ್ಡ ಸಂತತಿಯ ಪ್ರತಿನಿಧಿ.

ಇಂತಹ ದೌರ್ಜನ್ಯಗಳ ವಿರುದ್ಧ ಬಹುಶಃ ಇಡೀ ಭಾರತದಲ್ಲಿ ಮೊದಲು ನೇರಾ-ನೇರ ದನಿಯೆತ್ತಿದವರು ನಮ್ಮ ವಚನಕಾರರು. ಇದಕ್ಕೆ ಒಂದು ಸ್ಪಷ್ಟ ಮತ್ತು ಸಣ್ಣ ಉದಾಹರಣೆಗೆ ಅಲ್ಲಮನ ಈ ವಚನವನ್ನು ನೆನಪಿಸಿಕೊಳ್ಳಬಹುದು.

ನಾ ದೇವನಲ್ಲದೆ ನೀ ದೇವನೆ
ನೀ ದೇವನಾದರೆ ಎನ್ನನೇಕೆ ಸಲಹೆ
ಆರೈದು ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ
ನಾ ದೇವ ಕಾಣಾ ಗುಹೇಶ್ವರ

“ನಾನು ದೇವರು. ನೀನು ದೇವರಾಗಲು ಹೇಗೆ ಸಾಧ್ಯ? ನೀನು ದೇವರಾದರೆ ನನ್ನನ್ನು ಯಾಕೆ ಸಲಹುವುದಿಲ್ಲ? ಯಾರಾದರೂ ಬಂದು ಕುಳಿತರೆ ನೀರು ಕೊಡುವೆ. ಹಸಿದಾಗ ಒಂದು ತುತ್ತು ಅನ್ನ ಕೊಡುವೆ. ನಾನೇ ದೇವರು” ಎಂದು ಅಲ್ಲಮಪ್ರಭು ಹೇಳುತ್ತಾರೆ.

ಈ ವಚನ ದೇವರನ್ನು ಉದ್ದೇಶಿಸಿರುವುದಲ್ಲ, ಬದಲಿಗೆ ಆ ದೇವರನ್ನೂ ರಾಜಕೀಯಗೊಳಿಸಿ, ಅದಕ್ಕೂ ಅಸ್ಪೃಶ್ಯತೆ ಅಂಟಿಸಿದ ಕರ್ಮಟ ವೈದಿಕರಿಗೆ ಹೇಳುತ್ತಿರುವ ಮಾತಿದು.

ಯಾರೂ ಯಾರನ್ನೂ ಭೇದದಿಂದ ನಡೆಸಿಕೊಳ್ಳಬಾರದು ಮತ್ತು ಸಮಾನತೆ, ಭ್ರಾತೃತ್ವದಿಂದ ಕಾಣಬೇಕು ಎಂದು ಇದೇ ರೀತಿಯ ತತ್ವ ಸಿದ್ಧಾಂತವನ್ನು ಬುದ್ಧನೂ ಕೂಡ ಕ್ರಿಸ್ತಪೂರ್ವದಲ್ಲೆ ಹೇಳಿದ್ದ. ಆದರೆ ಬಸವಣ್ಣನ ನೇತೃತ್ವದಲ್ಲಿ ನಡೆದ ಈ ಕಲ್ಯಾಣದ ಕ್ರಾಂತಿಯನ್ನು ಆದಷ್ಟು ಬೇಗನೆ ಮುಗಿಸಿದವರು, ಬುದ್ಧನನ್ನು ವಿಷ್ಣುವಿನ ಅವತಾರ ಮಾಡಿದವರೂ ಈ ಭವ್ಯ ಪರಂಪರೆಯ ವಾರಸುದಾರರೇ.

ಕೆರೆಯಲ್ಲಿ ದಲಿತರು ನೀರು ಮುಟ್ಟಬಾರದು ಎಂಬುದರ ವಿರುದ್ಧ ಚೌಡಾರ್ ಕರೆ ನೀರನ್ನು ಮುಟ್ಟಿ ಅಂಬೇಡ್ಕರ್ ಪ್ರತಿಭಟಿಸಿದ್ದರು. ಇದು ಬಹಶ: ಸ್ವತಂತ್ರಪೂರ್ವದಲ್ಲಿ ಸಮಾನತೆಗೆ ನಡದ ಮೊದಲನೇ ಬಹುದೊಡ್ಡ ಆಂದೋಲನ. ಇದನ್ನು ಸಹಿಸದ ಇದೇ ವಾರಸುದಾರರು ಅಂದು ಅವರ ಮೇಲೆ ಹಲ್ಲೆ ಮಾಡಿದ್ದರು. ಇದನ್ನು ಪ್ರಶ್ನಿಸಿದರೆ, ಕೆಲವು ಸುಪ್ತ ಮನುವಾದಿಗಳು, “ಇದು ಯಾವುದೋ ಕಾಲದಲ್ಲಿ ಆಗಿದ್ದು. ಇದನ್ನೇ ಇಟ್ಟುಕೊಂಡು ಇನ್ನೂ ಎಷ್ಟು ಕಾಲ ಕಳೆಯುತ್ತೀರಾ? ಇಂತಹವುಗಳೆಲ್ಲಾ ಈಗ ನಡೆಯುತ್ತಿಲ್ಲ. ಎಲ್ಲರೂ ಬದಲಾಗಿದ್ದಾರೆ” ಎಂದು ಹೇಳುತ್ತಾರೆ.

ಅದರೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವ ಘಟನೆಗೂ ಅಂಬೇಡ್ಕರ್ ಅವರ ಕಾಲದಲ್ಲಿ ನಡೆದಿರುವ ಈ ಘಟನೆಗೂ ವ್ಯತ್ಯಾಸವೇನಾದರೂ ಇದೆಯೇ? ವಾಸ್ತವದಲ್ಲಿ ಇವೆರಡಕ್ಕೂ ಸಂಬಂಧ ಇದೆ. ಆದರೆ ಇದನ್ನೂ ಸಮರ್ಥಿಸಿಕೊಳ್ಳುವವರು ಇದ್ದಾರೆ ಎಂದರೆ ಈ ದೇಶದ ಪರಿಸ್ಥಿತಿಯನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ, ನೀರು ಕುಡಿದಿದ್ದಕ್ಕೆ, ಪ್ರೀತಿ ಮಾಡಿದ್ದಕ್ಕೆ ಕೈಕಾಲು ಮುರಿಯುವ ಪುರುಷತ್ವ ಹರಣ ಮಾಡುವ ಮನಸ್ಥಿತಿ ಇಷ್ಟು ಅಗಾಧವಾಗಿ ಬೆಳೆಯಲು ಯಾವ ಕುಯುಕ್ತಿ ಕೆಲಸ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೋಚರವಾಗುತ್ತದೆ. ಮುಕ್ತ ಮನಸ್ಸಿನಿಂದ ಕಾಣುವ ಹೃದಯವಂತಿಕೆ ಬೆಳೆಸಿಕೊಳ್ಳಬೇಕಷ್ಟೇ!

ಭಾರತವನ್ನು ವಿಶ್ವಗುರು ಮಾಡಲು ನೀರೆರೆದು ಪೋಷಿಸುತ್ತಿರುವ ಹೊತ್ತಲ್ಲೇ ಇಲ್ಲೊಬ್ಬ ನೀರು ಕುಡಿದಿದ್ದಕ್ಕೆ ಹಲ್ಲೆಗೊಳಗಾಗಿದ್ದಾನೆ. ಹೀಗಿರುವಾಗ ನನ್ನ ದೇಶವನ್ನು ವಿಶ್ವಗುರು ಎಂದು ಹೇಗೆ ಒಪ್ಪಿಕೊಳ್ಳುವುದು? ನಮ್ಮ ಪರಂಪರೆ ವಿಶ್ವಕ್ಕೆ ಮಾದರಿ ಎಂದು ಹೇಳುತ್ತಿರುವವರು ಇಂತಹ ಅನಿಷ್ಟ ಪರಂಪರೆಯನ್ನು ಮರೆತರೇಕೆ?
ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ #SorryAsif ಹ್ಯಾಷ್‌ಟ್ಯಾಗ್ ಮೂಲಕ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆದರೆ ಎಷ್ಟು ದಿನ, ಹೀಗೆ ಖಂಡನೆಗಳಲ್ಲೆ ತಾತ್ಕಾಲಿಕವಾಗಿ ಮರೆಯಾಗಿ ಮತ್ತೊಂದು ದಿನ ಇನ್ನೆಲ್ಲೋ ಚಿಗುರಿ ಎದ್ದು, ನೀರು ಕುಡಿದಿದ್ದಕ್ಕೆ ಮತ್ತೊಬ್ಬ ಥಳಿತಗೊಂಡು ಅವಮಾನಕ್ಕೆ ಗುರಿಯಾಗಬೇಕು? ಸಂವಿಧಾನದಲ್ಲಿ ಹೇಳಿಕೊಟ್ಟಿರುವ ಸಮಾನತೆ, ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಲು ನನ್ನ ದೇಶವಾಸಿಗಳಿಗೆ ಏಕಿಷ್ಟು ಕಷ್ಟ?

ಪ್ರತಾಪ್ ಹುಣಸೂರು

ಪ್ರತಾಪ್ ಹುಣಸೂರು
ಸಂಶೋಧನಾ ವಿದ್ಯಾರ್ಥಿ. ಸದ್ಯ ನಾನುಗೌರಿ.ಕಾಂನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...