Homeಕರ್ನಾಟಕತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ -...

ತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ – ಪತ್ರಕರ್ತೆ ಪ್ರಿಯಾ ತವಸ್ಸೆರಿ

- Advertisement -
- Advertisement -

ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ, ಚುನಾವಣಾ ವರದಿಗಳಂತಲ್ಲ ಎಂದು ಚಂಬಲ್ ಮೀಡಿಯಾದ ನಿರ್ದೇಶಕಿ ಪ್ರಿಯಾ ತವಸ್ಸೆರಿ ಶನಿವಾರ ಹೇಳಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ ಎಂದು ಹೇಳಿದರು.

ಪ್ರಿಯಾ ತವಸ್ಸೆರಿ ಅವರ ಚಂಬಲ್ ಮೀಡಿಯಾವು, ದಲಿತ, ಮುಸ್ಲಿಮ್ ಮತ್ತು ಅಂಚಿಗೊತ್ತಲ್ಪಟ್ಟ ಸಮುದಾಯಗಳ ಮಹಿಳೆಯರು ಸೇರಿ ಕಳೆದ 23 ವರ್ಷಗಳಿಂದ ನಡೆಸುತ್ತಿರುವ ಪತ್ರಿಕೆಯಾಗಿದೆ. ಈದಿನ.ಕಾಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಂಸ್ಥೆ ಬಹುತ್ವದಿಂದ ಕೂಡಿದ ಮಾಧ್ಯಮ ಸಂಸ್ಥೆಯ ಭಾಗ. ಗ್ರಾಮೀಣ ಅಂಚಿಗೊತ್ತಲ್ಪಟ್ಟ ಮಹಿಳೆಯರು ತಳಮಟ್ಟದಲ್ಲಿ ಕೆಲಸ ಮಾಡುತ್ತಾ ನಡೆಸಯತ್ತಿರುವ ಏಕೈಕ ಮಾಧ್ಯಮ ಸಂಸ್ಥೆಯ ಭಾಗವಾಗಿರುವುದು ನಮಗೆ ಹೆಮ್ಮೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಂಬಲ್ ಮೀಡಿಯಾದ, ಖಬರ್ ಲೆಹರಿಯಾಗಿಂತ ಮುಂಚೆ ನಾನು ರಾಷ್ಟ್ರೀಯ ಮಾಧ್ಯಮವೊಂದರ ಭಾಗವಾಗಿದ್ದೆ. ಯಾವ ಚಾನಲ್ ಎಂಬುದನ್ನು ನೀವೇ ಊಹಿಸಿ. ಅದು ಜನಪರವಾಗಿ ಆರಂಭವಾಗಿ ಕಾರ್ಪೊರೇಟ್‌ಗಳ ಪಾಲಾದ ಮಾಧ್ಯಮ ಸಂಸ್ಥೆಯಾಗಿದೆ. ಈ ಚಾನಲ್‌ ಅನ್ನು ಕಾರ್ಪೊರೇಟ್‌ಗಳು ಆವರಿಸಿದಾಗ ಮೊಟ್ಟಮೊದಲು ಮುಚ್ಚಿದ್ದು ತಳಮಟ್ಟದ ವರದಿ ಮಾಡುತ್ತಿದ್ದ ನಮ್ಮ ಕಾರ್ಯಕ್ರಮವಾಗಿದೆ.” ಎಂದು ಬೇಸರ ವ್ಯಕ್ತಪಡಿಸಿದರು.

ಮಾಧ್ಯಮ ಸಂಸ್ಥೆಗಳಾದ ಖಬರ್ ಲೆಹರಿಯಾ, ಈದಿನ, ವೈರ್ ರೀತಿಯ ಹಲವು ಮಾಧ್ಯಮಗಳು ಉಳಿದುಕೊಂಡು ಕೆಲಸ ಮಾಡಬೇಕಾದ ಸವಾಲನ್ನು ಎದುರಿಸಿ ತಮ್ಮ ಕರ್ತವ್ಯ ನಿಭಾಯಿಸುತ್ತಿವೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

“ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ. ಚುನಾವಣಾ ವರದಿಗಳಲ್ಲ. ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ. ಈ ವಿಷಯಗಳು ಸಂಕೀರ್ಣವಾಗಿದ್ದು, ಇದು ಮೇಲ್ಮಟ್ಟದ ವಿಷಯಗಳಲ್ಲ. ಇವೆಲ್ಲ ಎಷ್ಟು ಆಳವಾಗಿ ಬೇರುಬಿಟ್ಟಿವೆ ಎಂದರೆ ಇದನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕಾಗುತ್ತದೆ. ಚಂಬಲ್ ಅಕಾಡೆಮಿಯಂತಹ ಸಂಸ್ಥೆಗಳು ಇದರಲ್ಲಿ ಭಾಗವಾದಾಗ, ವಿದ್ಯಾರ್ಥಿಗಳು ಎಷ್ಟೋ ಬಾರಿ ಹೊಸ ಕಣ್ಣೋಟ ಪಡೆಯುತ್ತಾರೆ” ಎಂದು ಹೇಳಿದರು.

“ಒಬ್ಬ ವಿದ್ಯಾರ್ಥಿನಿ ರಾಜ್ಯ ಮಟ್ಟದ ಕಬ್ಬಡಿ ಆಡುವಾಗ ಜೆಂಡರ್ ಜಾತಿ ತಾರತಮ್ಯ ಅನುಭವಿಸಿದ ಕಥೆಯನ್ನು ಬೇರೆ ದೃಷ್ಟಿಯಿಂದ ನೋಡುವುದನ್ನು ಚಂಬಲ್ ಅಕಾಡೆಮಿ ಕಲಿಸುತ್ತದೆ. ನಮ್ಮ ಹಿರಿಯ ಪತ್ರಕರ್ತರಾದ ಶಿವದೇವಿ ಅವರು ದಲಿತ ಸಮುದಾಯದಿಂದ ಬಂದವರು. ಅವರು ನಮ್ಮ ಕಣ್ಣೋಟವನ್ನು ಬದಲಿಸುತ್ತಾರೆ. ಕೆಲವೇ ಬದ್ಧತೆಯುಳ್ಳ ಪತ್ರಕರ್ತರು ಮಾತ್ರ ಗ್ರಾಮೀಣ ವಿಷಯಗಳನ್ನು ಹೇಳುತ್ತಿದ್ದಾರೆ” ಎಂದು ಹೇಳಿದರು.

“ಮಾಧ್ಯಮಗಳೊಳಗೆ ಗ್ರಾಮೀಣ ವಿಷಯಗಳ ಪ್ರಾತಿನಿಧ್ಯದಲ್ಲಿ ಬಹಳ ಅಸಮಾನತೆಯಿದೆ. ಅಂಚಿಗೊತ್ತಲ್ಪಟ್ಟ ಸಮುದಾಯಗಳ ಈ ಕಥೆಗಳು ಹೊರಬರುವವರೆಗೆ ಈ ಅಸಮಾನತೆಗಳು ಬೆಳೆಯುತ್ತಲೇ ಹೋಗುತ್ತವೆ. ಕಳೆದ 23 ವರ್ಷಗಳಲ್ಲಿ ದಲಿತ, ಮುಸ್ಲಿಮ್, ಆದಿವಾಸಿ ಮಹಿಳೆಯರನ್ನು ಪತ್ರಕರ್ತರಾಗಿ ಸಬಲರನ್ನಾಗಿಸುವ ಕೆಲಸ, ಅವರು ಸರ್ಕಾರಗಳನ್ನು ಉತ್ತರದಾಯಿಗಳನ್ನಾಗಿ ಹಿಡಿಯುವ ಸಾಮರ್ಥ್ಯಗಳಿಸಿಕೊಳ್ಳುವ ಕೆಲಸ ಮಾಡಿದ್ದೇವೆ.

ಇಂತಹ ಸ್ತ್ರೀವಾದಿ ತಳಮಟ್ಟದ ಮಾಧ್ಯಮವನ್ನು ಉಳಿಸಿಕೊಳ್ಳವುದು ಸುಲಭವಲ್ಲ. 23 ವರ್ಷ ಉಳಿದಿದ್ದೇವೆ ಎಂದರೆ ನಾವು ಸಮಯಕ್ಕೆ ತಕ್ಕಂತೆ ಬದಲಾಗಿದ್ದೇವೆ ಪ್ರಯೋಗಳನ್ನು ಮಾಡಿದ್ದೇವೆ ಎಂದರ್ಥ. ನಾವು ಡಿಜಿಟಲೀಕರಣ ಆದೆವು, ಸಂಶೋಧನಾ ವಿಭಾಗ ಆರಂಭಿಸಿದೆವು. ಸಾಕ್ಷರತಾ ಕಾರ್ಯಕ್ರಮವಾಗಿ ಆರಂಭವಾಗಿ, ಪ್ರಪಂಚ ಮಟ್ಟದಲ್ಲಿ ಗುರುತಿಸಲ್ಪಡುವ ಮಾಧ್ಯಮವಾಗಿ ಬೆಳೆದಿರುವುದು, ವೈವಿಧ್ಯಮಯವಾದ ದನಿಗಳನ್ನು ಮುನ್ನೆಲೆಗೆ ತಂದಿರುವುದು, ನಾಲ್ಕು ರಾಜ್ಯಗಳಲ್ಲಿ ತಳಮಟ್ಟದ ಸುದ್ದಿಗಳನ್ನು ಹೊರತಂದಿರುವುದು, ಸಿನೆಮಾಗಳನ್ನು ಮಾಡಿರುವುದು ನಮ್ಮ ವಿಶೇಷ” ಎಂದು ಪ್ರಿಯಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...