Homeಕರ್ನಾಟಕತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ -...

ತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ – ಪತ್ರಕರ್ತೆ ಪ್ರಿಯಾ ತವಸ್ಸೆರಿ

- Advertisement -
- Advertisement -

ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ, ಚುನಾವಣಾ ವರದಿಗಳಂತಲ್ಲ ಎಂದು ಚಂಬಲ್ ಮೀಡಿಯಾದ ನಿರ್ದೇಶಕಿ ಪ್ರಿಯಾ ತವಸ್ಸೆರಿ ಶನಿವಾರ ಹೇಳಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ ಎಂದು ಹೇಳಿದರು.

ಪ್ರಿಯಾ ತವಸ್ಸೆರಿ ಅವರ ಚಂಬಲ್ ಮೀಡಿಯಾವು, ದಲಿತ, ಮುಸ್ಲಿಮ್ ಮತ್ತು ಅಂಚಿಗೊತ್ತಲ್ಪಟ್ಟ ಸಮುದಾಯಗಳ ಮಹಿಳೆಯರು ಸೇರಿ ಕಳೆದ 23 ವರ್ಷಗಳಿಂದ ನಡೆಸುತ್ತಿರುವ ಪತ್ರಿಕೆಯಾಗಿದೆ. ಈದಿನ.ಕಾಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಂಸ್ಥೆ ಬಹುತ್ವದಿಂದ ಕೂಡಿದ ಮಾಧ್ಯಮ ಸಂಸ್ಥೆಯ ಭಾಗ. ಗ್ರಾಮೀಣ ಅಂಚಿಗೊತ್ತಲ್ಪಟ್ಟ ಮಹಿಳೆಯರು ತಳಮಟ್ಟದಲ್ಲಿ ಕೆಲಸ ಮಾಡುತ್ತಾ ನಡೆಸಯತ್ತಿರುವ ಏಕೈಕ ಮಾಧ್ಯಮ ಸಂಸ್ಥೆಯ ಭಾಗವಾಗಿರುವುದು ನಮಗೆ ಹೆಮ್ಮೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಂಬಲ್ ಮೀಡಿಯಾದ, ಖಬರ್ ಲೆಹರಿಯಾಗಿಂತ ಮುಂಚೆ ನಾನು ರಾಷ್ಟ್ರೀಯ ಮಾಧ್ಯಮವೊಂದರ ಭಾಗವಾಗಿದ್ದೆ. ಯಾವ ಚಾನಲ್ ಎಂಬುದನ್ನು ನೀವೇ ಊಹಿಸಿ. ಅದು ಜನಪರವಾಗಿ ಆರಂಭವಾಗಿ ಕಾರ್ಪೊರೇಟ್‌ಗಳ ಪಾಲಾದ ಮಾಧ್ಯಮ ಸಂಸ್ಥೆಯಾಗಿದೆ. ಈ ಚಾನಲ್‌ ಅನ್ನು ಕಾರ್ಪೊರೇಟ್‌ಗಳು ಆವರಿಸಿದಾಗ ಮೊಟ್ಟಮೊದಲು ಮುಚ್ಚಿದ್ದು ತಳಮಟ್ಟದ ವರದಿ ಮಾಡುತ್ತಿದ್ದ ನಮ್ಮ ಕಾರ್ಯಕ್ರಮವಾಗಿದೆ.” ಎಂದು ಬೇಸರ ವ್ಯಕ್ತಪಡಿಸಿದರು.

ಮಾಧ್ಯಮ ಸಂಸ್ಥೆಗಳಾದ ಖಬರ್ ಲೆಹರಿಯಾ, ಈದಿನ, ವೈರ್ ರೀತಿಯ ಹಲವು ಮಾಧ್ಯಮಗಳು ಉಳಿದುಕೊಂಡು ಕೆಲಸ ಮಾಡಬೇಕಾದ ಸವಾಲನ್ನು ಎದುರಿಸಿ ತಮ್ಮ ಕರ್ತವ್ಯ ನಿಭಾಯಿಸುತ್ತಿವೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

“ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ. ಚುನಾವಣಾ ವರದಿಗಳಲ್ಲ. ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ. ಈ ವಿಷಯಗಳು ಸಂಕೀರ್ಣವಾಗಿದ್ದು, ಇದು ಮೇಲ್ಮಟ್ಟದ ವಿಷಯಗಳಲ್ಲ. ಇವೆಲ್ಲ ಎಷ್ಟು ಆಳವಾಗಿ ಬೇರುಬಿಟ್ಟಿವೆ ಎಂದರೆ ಇದನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕಾಗುತ್ತದೆ. ಚಂಬಲ್ ಅಕಾಡೆಮಿಯಂತಹ ಸಂಸ್ಥೆಗಳು ಇದರಲ್ಲಿ ಭಾಗವಾದಾಗ, ವಿದ್ಯಾರ್ಥಿಗಳು ಎಷ್ಟೋ ಬಾರಿ ಹೊಸ ಕಣ್ಣೋಟ ಪಡೆಯುತ್ತಾರೆ” ಎಂದು ಹೇಳಿದರು.

“ಒಬ್ಬ ವಿದ್ಯಾರ್ಥಿನಿ ರಾಜ್ಯ ಮಟ್ಟದ ಕಬ್ಬಡಿ ಆಡುವಾಗ ಜೆಂಡರ್ ಜಾತಿ ತಾರತಮ್ಯ ಅನುಭವಿಸಿದ ಕಥೆಯನ್ನು ಬೇರೆ ದೃಷ್ಟಿಯಿಂದ ನೋಡುವುದನ್ನು ಚಂಬಲ್ ಅಕಾಡೆಮಿ ಕಲಿಸುತ್ತದೆ. ನಮ್ಮ ಹಿರಿಯ ಪತ್ರಕರ್ತರಾದ ಶಿವದೇವಿ ಅವರು ದಲಿತ ಸಮುದಾಯದಿಂದ ಬಂದವರು. ಅವರು ನಮ್ಮ ಕಣ್ಣೋಟವನ್ನು ಬದಲಿಸುತ್ತಾರೆ. ಕೆಲವೇ ಬದ್ಧತೆಯುಳ್ಳ ಪತ್ರಕರ್ತರು ಮಾತ್ರ ಗ್ರಾಮೀಣ ವಿಷಯಗಳನ್ನು ಹೇಳುತ್ತಿದ್ದಾರೆ” ಎಂದು ಹೇಳಿದರು.

“ಮಾಧ್ಯಮಗಳೊಳಗೆ ಗ್ರಾಮೀಣ ವಿಷಯಗಳ ಪ್ರಾತಿನಿಧ್ಯದಲ್ಲಿ ಬಹಳ ಅಸಮಾನತೆಯಿದೆ. ಅಂಚಿಗೊತ್ತಲ್ಪಟ್ಟ ಸಮುದಾಯಗಳ ಈ ಕಥೆಗಳು ಹೊರಬರುವವರೆಗೆ ಈ ಅಸಮಾನತೆಗಳು ಬೆಳೆಯುತ್ತಲೇ ಹೋಗುತ್ತವೆ. ಕಳೆದ 23 ವರ್ಷಗಳಲ್ಲಿ ದಲಿತ, ಮುಸ್ಲಿಮ್, ಆದಿವಾಸಿ ಮಹಿಳೆಯರನ್ನು ಪತ್ರಕರ್ತರಾಗಿ ಸಬಲರನ್ನಾಗಿಸುವ ಕೆಲಸ, ಅವರು ಸರ್ಕಾರಗಳನ್ನು ಉತ್ತರದಾಯಿಗಳನ್ನಾಗಿ ಹಿಡಿಯುವ ಸಾಮರ್ಥ್ಯಗಳಿಸಿಕೊಳ್ಳುವ ಕೆಲಸ ಮಾಡಿದ್ದೇವೆ.

ಇಂತಹ ಸ್ತ್ರೀವಾದಿ ತಳಮಟ್ಟದ ಮಾಧ್ಯಮವನ್ನು ಉಳಿಸಿಕೊಳ್ಳವುದು ಸುಲಭವಲ್ಲ. 23 ವರ್ಷ ಉಳಿದಿದ್ದೇವೆ ಎಂದರೆ ನಾವು ಸಮಯಕ್ಕೆ ತಕ್ಕಂತೆ ಬದಲಾಗಿದ್ದೇವೆ ಪ್ರಯೋಗಳನ್ನು ಮಾಡಿದ್ದೇವೆ ಎಂದರ್ಥ. ನಾವು ಡಿಜಿಟಲೀಕರಣ ಆದೆವು, ಸಂಶೋಧನಾ ವಿಭಾಗ ಆರಂಭಿಸಿದೆವು. ಸಾಕ್ಷರತಾ ಕಾರ್ಯಕ್ರಮವಾಗಿ ಆರಂಭವಾಗಿ, ಪ್ರಪಂಚ ಮಟ್ಟದಲ್ಲಿ ಗುರುತಿಸಲ್ಪಡುವ ಮಾಧ್ಯಮವಾಗಿ ಬೆಳೆದಿರುವುದು, ವೈವಿಧ್ಯಮಯವಾದ ದನಿಗಳನ್ನು ಮುನ್ನೆಲೆಗೆ ತಂದಿರುವುದು, ನಾಲ್ಕು ರಾಜ್ಯಗಳಲ್ಲಿ ತಳಮಟ್ಟದ ಸುದ್ದಿಗಳನ್ನು ಹೊರತಂದಿರುವುದು, ಸಿನೆಮಾಗಳನ್ನು ಮಾಡಿರುವುದು ನಮ್ಮ ವಿಶೇಷ” ಎಂದು ಪ್ರಿಯಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...