Homeಕರ್ನಾಟಕತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ -...

ತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ – ಪತ್ರಕರ್ತೆ ಪ್ರಿಯಾ ತವಸ್ಸೆರಿ

- Advertisement -
- Advertisement -

ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ, ಚುನಾವಣಾ ವರದಿಗಳಂತಲ್ಲ ಎಂದು ಚಂಬಲ್ ಮೀಡಿಯಾದ ನಿರ್ದೇಶಕಿ ಪ್ರಿಯಾ ತವಸ್ಸೆರಿ ಶನಿವಾರ ಹೇಳಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ ಎಂದು ಹೇಳಿದರು.

ಪ್ರಿಯಾ ತವಸ್ಸೆರಿ ಅವರ ಚಂಬಲ್ ಮೀಡಿಯಾವು, ದಲಿತ, ಮುಸ್ಲಿಮ್ ಮತ್ತು ಅಂಚಿಗೊತ್ತಲ್ಪಟ್ಟ ಸಮುದಾಯಗಳ ಮಹಿಳೆಯರು ಸೇರಿ ಕಳೆದ 23 ವರ್ಷಗಳಿಂದ ನಡೆಸುತ್ತಿರುವ ಪತ್ರಿಕೆಯಾಗಿದೆ. ಈದಿನ.ಕಾಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಂಸ್ಥೆ ಬಹುತ್ವದಿಂದ ಕೂಡಿದ ಮಾಧ್ಯಮ ಸಂಸ್ಥೆಯ ಭಾಗ. ಗ್ರಾಮೀಣ ಅಂಚಿಗೊತ್ತಲ್ಪಟ್ಟ ಮಹಿಳೆಯರು ತಳಮಟ್ಟದಲ್ಲಿ ಕೆಲಸ ಮಾಡುತ್ತಾ ನಡೆಸಯತ್ತಿರುವ ಏಕೈಕ ಮಾಧ್ಯಮ ಸಂಸ್ಥೆಯ ಭಾಗವಾಗಿರುವುದು ನಮಗೆ ಹೆಮ್ಮೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಂಬಲ್ ಮೀಡಿಯಾದ, ಖಬರ್ ಲೆಹರಿಯಾಗಿಂತ ಮುಂಚೆ ನಾನು ರಾಷ್ಟ್ರೀಯ ಮಾಧ್ಯಮವೊಂದರ ಭಾಗವಾಗಿದ್ದೆ. ಯಾವ ಚಾನಲ್ ಎಂಬುದನ್ನು ನೀವೇ ಊಹಿಸಿ. ಅದು ಜನಪರವಾಗಿ ಆರಂಭವಾಗಿ ಕಾರ್ಪೊರೇಟ್‌ಗಳ ಪಾಲಾದ ಮಾಧ್ಯಮ ಸಂಸ್ಥೆಯಾಗಿದೆ. ಈ ಚಾನಲ್‌ ಅನ್ನು ಕಾರ್ಪೊರೇಟ್‌ಗಳು ಆವರಿಸಿದಾಗ ಮೊಟ್ಟಮೊದಲು ಮುಚ್ಚಿದ್ದು ತಳಮಟ್ಟದ ವರದಿ ಮಾಡುತ್ತಿದ್ದ ನಮ್ಮ ಕಾರ್ಯಕ್ರಮವಾಗಿದೆ.” ಎಂದು ಬೇಸರ ವ್ಯಕ್ತಪಡಿಸಿದರು.

ಮಾಧ್ಯಮ ಸಂಸ್ಥೆಗಳಾದ ಖಬರ್ ಲೆಹರಿಯಾ, ಈದಿನ, ವೈರ್ ರೀತಿಯ ಹಲವು ಮಾಧ್ಯಮಗಳು ಉಳಿದುಕೊಂಡು ಕೆಲಸ ಮಾಡಬೇಕಾದ ಸವಾಲನ್ನು ಎದುರಿಸಿ ತಮ್ಮ ಕರ್ತವ್ಯ ನಿಭಾಯಿಸುತ್ತಿವೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

“ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ. ಚುನಾವಣಾ ವರದಿಗಳಲ್ಲ. ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ. ಈ ವಿಷಯಗಳು ಸಂಕೀರ್ಣವಾಗಿದ್ದು, ಇದು ಮೇಲ್ಮಟ್ಟದ ವಿಷಯಗಳಲ್ಲ. ಇವೆಲ್ಲ ಎಷ್ಟು ಆಳವಾಗಿ ಬೇರುಬಿಟ್ಟಿವೆ ಎಂದರೆ ಇದನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕಾಗುತ್ತದೆ. ಚಂಬಲ್ ಅಕಾಡೆಮಿಯಂತಹ ಸಂಸ್ಥೆಗಳು ಇದರಲ್ಲಿ ಭಾಗವಾದಾಗ, ವಿದ್ಯಾರ್ಥಿಗಳು ಎಷ್ಟೋ ಬಾರಿ ಹೊಸ ಕಣ್ಣೋಟ ಪಡೆಯುತ್ತಾರೆ” ಎಂದು ಹೇಳಿದರು.

“ಒಬ್ಬ ವಿದ್ಯಾರ್ಥಿನಿ ರಾಜ್ಯ ಮಟ್ಟದ ಕಬ್ಬಡಿ ಆಡುವಾಗ ಜೆಂಡರ್ ಜಾತಿ ತಾರತಮ್ಯ ಅನುಭವಿಸಿದ ಕಥೆಯನ್ನು ಬೇರೆ ದೃಷ್ಟಿಯಿಂದ ನೋಡುವುದನ್ನು ಚಂಬಲ್ ಅಕಾಡೆಮಿ ಕಲಿಸುತ್ತದೆ. ನಮ್ಮ ಹಿರಿಯ ಪತ್ರಕರ್ತರಾದ ಶಿವದೇವಿ ಅವರು ದಲಿತ ಸಮುದಾಯದಿಂದ ಬಂದವರು. ಅವರು ನಮ್ಮ ಕಣ್ಣೋಟವನ್ನು ಬದಲಿಸುತ್ತಾರೆ. ಕೆಲವೇ ಬದ್ಧತೆಯುಳ್ಳ ಪತ್ರಕರ್ತರು ಮಾತ್ರ ಗ್ರಾಮೀಣ ವಿಷಯಗಳನ್ನು ಹೇಳುತ್ತಿದ್ದಾರೆ” ಎಂದು ಹೇಳಿದರು.

“ಮಾಧ್ಯಮಗಳೊಳಗೆ ಗ್ರಾಮೀಣ ವಿಷಯಗಳ ಪ್ರಾತಿನಿಧ್ಯದಲ್ಲಿ ಬಹಳ ಅಸಮಾನತೆಯಿದೆ. ಅಂಚಿಗೊತ್ತಲ್ಪಟ್ಟ ಸಮುದಾಯಗಳ ಈ ಕಥೆಗಳು ಹೊರಬರುವವರೆಗೆ ಈ ಅಸಮಾನತೆಗಳು ಬೆಳೆಯುತ್ತಲೇ ಹೋಗುತ್ತವೆ. ಕಳೆದ 23 ವರ್ಷಗಳಲ್ಲಿ ದಲಿತ, ಮುಸ್ಲಿಮ್, ಆದಿವಾಸಿ ಮಹಿಳೆಯರನ್ನು ಪತ್ರಕರ್ತರಾಗಿ ಸಬಲರನ್ನಾಗಿಸುವ ಕೆಲಸ, ಅವರು ಸರ್ಕಾರಗಳನ್ನು ಉತ್ತರದಾಯಿಗಳನ್ನಾಗಿ ಹಿಡಿಯುವ ಸಾಮರ್ಥ್ಯಗಳಿಸಿಕೊಳ್ಳುವ ಕೆಲಸ ಮಾಡಿದ್ದೇವೆ.

ಇಂತಹ ಸ್ತ್ರೀವಾದಿ ತಳಮಟ್ಟದ ಮಾಧ್ಯಮವನ್ನು ಉಳಿಸಿಕೊಳ್ಳವುದು ಸುಲಭವಲ್ಲ. 23 ವರ್ಷ ಉಳಿದಿದ್ದೇವೆ ಎಂದರೆ ನಾವು ಸಮಯಕ್ಕೆ ತಕ್ಕಂತೆ ಬದಲಾಗಿದ್ದೇವೆ ಪ್ರಯೋಗಳನ್ನು ಮಾಡಿದ್ದೇವೆ ಎಂದರ್ಥ. ನಾವು ಡಿಜಿಟಲೀಕರಣ ಆದೆವು, ಸಂಶೋಧನಾ ವಿಭಾಗ ಆರಂಭಿಸಿದೆವು. ಸಾಕ್ಷರತಾ ಕಾರ್ಯಕ್ರಮವಾಗಿ ಆರಂಭವಾಗಿ, ಪ್ರಪಂಚ ಮಟ್ಟದಲ್ಲಿ ಗುರುತಿಸಲ್ಪಡುವ ಮಾಧ್ಯಮವಾಗಿ ಬೆಳೆದಿರುವುದು, ವೈವಿಧ್ಯಮಯವಾದ ದನಿಗಳನ್ನು ಮುನ್ನೆಲೆಗೆ ತಂದಿರುವುದು, ನಾಲ್ಕು ರಾಜ್ಯಗಳಲ್ಲಿ ತಳಮಟ್ಟದ ಸುದ್ದಿಗಳನ್ನು ಹೊರತಂದಿರುವುದು, ಸಿನೆಮಾಗಳನ್ನು ಮಾಡಿರುವುದು ನಮ್ಮ ವಿಶೇಷ” ಎಂದು ಪ್ರಿಯಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...