Homeಕರ್ನಾಟಕತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ -...

ತಳಮಟ್ಟದ ವರದಿ ಎಂದರೆ ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ – ಪತ್ರಕರ್ತೆ ಪ್ರಿಯಾ ತವಸ್ಸೆರಿ

- Advertisement -
- Advertisement -

ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ, ಚುನಾವಣಾ ವರದಿಗಳಂತಲ್ಲ ಎಂದು ಚಂಬಲ್ ಮೀಡಿಯಾದ ನಿರ್ದೇಶಕಿ ಪ್ರಿಯಾ ತವಸ್ಸೆರಿ ಶನಿವಾರ ಹೇಳಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ ಎಂದು ಹೇಳಿದರು.

ಪ್ರಿಯಾ ತವಸ್ಸೆರಿ ಅವರ ಚಂಬಲ್ ಮೀಡಿಯಾವು, ದಲಿತ, ಮುಸ್ಲಿಮ್ ಮತ್ತು ಅಂಚಿಗೊತ್ತಲ್ಪಟ್ಟ ಸಮುದಾಯಗಳ ಮಹಿಳೆಯರು ಸೇರಿ ಕಳೆದ 23 ವರ್ಷಗಳಿಂದ ನಡೆಸುತ್ತಿರುವ ಪತ್ರಿಕೆಯಾಗಿದೆ. ಈದಿನ.ಕಾಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಂಸ್ಥೆ ಬಹುತ್ವದಿಂದ ಕೂಡಿದ ಮಾಧ್ಯಮ ಸಂಸ್ಥೆಯ ಭಾಗ. ಗ್ರಾಮೀಣ ಅಂಚಿಗೊತ್ತಲ್ಪಟ್ಟ ಮಹಿಳೆಯರು ತಳಮಟ್ಟದಲ್ಲಿ ಕೆಲಸ ಮಾಡುತ್ತಾ ನಡೆಸಯತ್ತಿರುವ ಏಕೈಕ ಮಾಧ್ಯಮ ಸಂಸ್ಥೆಯ ಭಾಗವಾಗಿರುವುದು ನಮಗೆ ಹೆಮ್ಮೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಂಬಲ್ ಮೀಡಿಯಾದ, ಖಬರ್ ಲೆಹರಿಯಾಗಿಂತ ಮುಂಚೆ ನಾನು ರಾಷ್ಟ್ರೀಯ ಮಾಧ್ಯಮವೊಂದರ ಭಾಗವಾಗಿದ್ದೆ. ಯಾವ ಚಾನಲ್ ಎಂಬುದನ್ನು ನೀವೇ ಊಹಿಸಿ. ಅದು ಜನಪರವಾಗಿ ಆರಂಭವಾಗಿ ಕಾರ್ಪೊರೇಟ್‌ಗಳ ಪಾಲಾದ ಮಾಧ್ಯಮ ಸಂಸ್ಥೆಯಾಗಿದೆ. ಈ ಚಾನಲ್‌ ಅನ್ನು ಕಾರ್ಪೊರೇಟ್‌ಗಳು ಆವರಿಸಿದಾಗ ಮೊಟ್ಟಮೊದಲು ಮುಚ್ಚಿದ್ದು ತಳಮಟ್ಟದ ವರದಿ ಮಾಡುತ್ತಿದ್ದ ನಮ್ಮ ಕಾರ್ಯಕ್ರಮವಾಗಿದೆ.” ಎಂದು ಬೇಸರ ವ್ಯಕ್ತಪಡಿಸಿದರು.

ಮಾಧ್ಯಮ ಸಂಸ್ಥೆಗಳಾದ ಖಬರ್ ಲೆಹರಿಯಾ, ಈದಿನ, ವೈರ್ ರೀತಿಯ ಹಲವು ಮಾಧ್ಯಮಗಳು ಉಳಿದುಕೊಂಡು ಕೆಲಸ ಮಾಡಬೇಕಾದ ಸವಾಲನ್ನು ಎದುರಿಸಿ ತಮ್ಮ ಕರ್ತವ್ಯ ನಿಭಾಯಿಸುತ್ತಿವೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

“ತಳಮಟ್ಟದ ವರದಿ ಎಂಬುದು ಕೊನೆ ನಿಮಿಷದಲ್ಲಿ ವಿಮಾನಗಳಲ್ಲಿ ಓಡಾಡಿ ಕಾರ್‌ಗಳಲ್ಲಿ ತಿರುಗಾಡಿ ಮಾಡುವ ಕಂಫರ್ಟ್ ಝೋನ್‌ನ ಕೆಲಸವಲ್ಲ. ಚುನಾವಣಾ ವರದಿಗಳಲ್ಲ. ನಮ್ಮದು ಮುಖ್ಯವಾಹಿನಿ ಮಾಧ್ಯಮಗಳಂತಹ ಸಂಸ್ಥೆಳಗಲ್ಲ, ಬದಲಾಗಿ ನಮ್ಮಂತಹ ಸಂಸ್ಥೆಗಳು ಇದನ್ನು ಸಾಮಾಜಿಕ ಮೌಲ್ಯಗಳ, ಜಾತಿ, ಜೆಂಡರ್‌ನಂತಹ ಪ್ರಶ್ನೆಗಳನ್ನೆತ್ತಲು ಇದನ್ನು ಮಾಡುತ್ತಿವೆ. ಈ ವಿಷಯಗಳು ಸಂಕೀರ್ಣವಾಗಿದ್ದು, ಇದು ಮೇಲ್ಮಟ್ಟದ ವಿಷಯಗಳಲ್ಲ. ಇವೆಲ್ಲ ಎಷ್ಟು ಆಳವಾಗಿ ಬೇರುಬಿಟ್ಟಿವೆ ಎಂದರೆ ಇದನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕಾಗುತ್ತದೆ. ಚಂಬಲ್ ಅಕಾಡೆಮಿಯಂತಹ ಸಂಸ್ಥೆಗಳು ಇದರಲ್ಲಿ ಭಾಗವಾದಾಗ, ವಿದ್ಯಾರ್ಥಿಗಳು ಎಷ್ಟೋ ಬಾರಿ ಹೊಸ ಕಣ್ಣೋಟ ಪಡೆಯುತ್ತಾರೆ” ಎಂದು ಹೇಳಿದರು.

“ಒಬ್ಬ ವಿದ್ಯಾರ್ಥಿನಿ ರಾಜ್ಯ ಮಟ್ಟದ ಕಬ್ಬಡಿ ಆಡುವಾಗ ಜೆಂಡರ್ ಜಾತಿ ತಾರತಮ್ಯ ಅನುಭವಿಸಿದ ಕಥೆಯನ್ನು ಬೇರೆ ದೃಷ್ಟಿಯಿಂದ ನೋಡುವುದನ್ನು ಚಂಬಲ್ ಅಕಾಡೆಮಿ ಕಲಿಸುತ್ತದೆ. ನಮ್ಮ ಹಿರಿಯ ಪತ್ರಕರ್ತರಾದ ಶಿವದೇವಿ ಅವರು ದಲಿತ ಸಮುದಾಯದಿಂದ ಬಂದವರು. ಅವರು ನಮ್ಮ ಕಣ್ಣೋಟವನ್ನು ಬದಲಿಸುತ್ತಾರೆ. ಕೆಲವೇ ಬದ್ಧತೆಯುಳ್ಳ ಪತ್ರಕರ್ತರು ಮಾತ್ರ ಗ್ರಾಮೀಣ ವಿಷಯಗಳನ್ನು ಹೇಳುತ್ತಿದ್ದಾರೆ” ಎಂದು ಹೇಳಿದರು.

“ಮಾಧ್ಯಮಗಳೊಳಗೆ ಗ್ರಾಮೀಣ ವಿಷಯಗಳ ಪ್ರಾತಿನಿಧ್ಯದಲ್ಲಿ ಬಹಳ ಅಸಮಾನತೆಯಿದೆ. ಅಂಚಿಗೊತ್ತಲ್ಪಟ್ಟ ಸಮುದಾಯಗಳ ಈ ಕಥೆಗಳು ಹೊರಬರುವವರೆಗೆ ಈ ಅಸಮಾನತೆಗಳು ಬೆಳೆಯುತ್ತಲೇ ಹೋಗುತ್ತವೆ. ಕಳೆದ 23 ವರ್ಷಗಳಲ್ಲಿ ದಲಿತ, ಮುಸ್ಲಿಮ್, ಆದಿವಾಸಿ ಮಹಿಳೆಯರನ್ನು ಪತ್ರಕರ್ತರಾಗಿ ಸಬಲರನ್ನಾಗಿಸುವ ಕೆಲಸ, ಅವರು ಸರ್ಕಾರಗಳನ್ನು ಉತ್ತರದಾಯಿಗಳನ್ನಾಗಿ ಹಿಡಿಯುವ ಸಾಮರ್ಥ್ಯಗಳಿಸಿಕೊಳ್ಳುವ ಕೆಲಸ ಮಾಡಿದ್ದೇವೆ.

ಇಂತಹ ಸ್ತ್ರೀವಾದಿ ತಳಮಟ್ಟದ ಮಾಧ್ಯಮವನ್ನು ಉಳಿಸಿಕೊಳ್ಳವುದು ಸುಲಭವಲ್ಲ. 23 ವರ್ಷ ಉಳಿದಿದ್ದೇವೆ ಎಂದರೆ ನಾವು ಸಮಯಕ್ಕೆ ತಕ್ಕಂತೆ ಬದಲಾಗಿದ್ದೇವೆ ಪ್ರಯೋಗಳನ್ನು ಮಾಡಿದ್ದೇವೆ ಎಂದರ್ಥ. ನಾವು ಡಿಜಿಟಲೀಕರಣ ಆದೆವು, ಸಂಶೋಧನಾ ವಿಭಾಗ ಆರಂಭಿಸಿದೆವು. ಸಾಕ್ಷರತಾ ಕಾರ್ಯಕ್ರಮವಾಗಿ ಆರಂಭವಾಗಿ, ಪ್ರಪಂಚ ಮಟ್ಟದಲ್ಲಿ ಗುರುತಿಸಲ್ಪಡುವ ಮಾಧ್ಯಮವಾಗಿ ಬೆಳೆದಿರುವುದು, ವೈವಿಧ್ಯಮಯವಾದ ದನಿಗಳನ್ನು ಮುನ್ನೆಲೆಗೆ ತಂದಿರುವುದು, ನಾಲ್ಕು ರಾಜ್ಯಗಳಲ್ಲಿ ತಳಮಟ್ಟದ ಸುದ್ದಿಗಳನ್ನು ಹೊರತಂದಿರುವುದು, ಸಿನೆಮಾಗಳನ್ನು ಮಾಡಿರುವುದು ನಮ್ಮ ವಿಶೇಷ” ಎಂದು ಪ್ರಿಯಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...