Homeಚಳವಳಿದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

ದೀನ ದಲಿತೋದ್ಧಾರಕ ಮಹಾತ್ಮ ಕುದ್ಮುಲ್ ರಂಗರಾವ್

- Advertisement -
- Advertisement -

ಕುದ್ಮುಲ್ ರಂಗರಾವ್ ಭಾರತ ಕಂಡ ಮಹಾನ್ ಮಾನವತಾವಾದಿ, ಶಿಕ್ಷಣ ಪ್ರೇಮಿ, ಸಮಾಜ ಸುಧಾರಕ, ಮಹಿಳಾ ಸಬಲೀಕರಣ ರೂವಾರಿ, ದಲಿತೋದ್ಧಾರಕ, ಸ್ವಾತಂತ್ರ್ಯ ಹೋರಾಟಗಾರ ಮೊದಲಾದ ಬಹುಮುಖ ವ್ಯಕ್ತಿತ್ವವುಳ್ಳವರಾಗಿದ್ದರು. ಆಕಸ್ಮಿಕವಾಗಿ ಇವರು ಬ್ರಾಹ್ಮಣರಾಗಿದ್ದರೂ ತಮ್ಮ ಬಹುಮುಖಿ ಕೊಡುಗೆಗಳಿಂದ ಎಲ್ಲರಿಂದಲೂ ಮಹಾತ್ಮರೆಂಬ ಗೌರವಕ್ಕೆ ಭಾಜನರಾಗಿದ್ದಾರೆ. ಇವರು ಕೇರಳದ ಕಾಸರಗೋಡಿನ ಕುದ್ಮುಲ್ ಎಂಬ ಸಣ್ಣ ಹಳ್ಳಿಯಲ್ಲಿ ಜೂನ್ 29, 1859ರಂದು ದೇವಪ್ಪಯ್ಯ ಮತ್ತು ಗೌರಿ ದಂಪತಿಗಳ ಪುತ್ರರಾಗಿ ಜನಿಸಿದರು. ಇವರು ಬಾಲ್ಯ ಶಿಕ್ಷಣ ಹಾಗೂ ಮೆಟ್ರಿಕ್ಯುಲೇಷನ್ ಶಿಕ್ಷಣವನ್ನು ಕಾಸರಗೋಡಿನಲ್ಲಿ ಮುಗಿಸಿ ಜೀವನ ನಿರ್ವಹಣೆ ಮತ್ತು ಸಮಾಜಮುಖಿ ಕಾರ್ಯಗಳಿಗೆ ಮಂಗಳೂರನ್ನು ತಮ್ಮ ಕರ್ಮಭೂಮಿಯನ್ನಾಗಿ ಆಯ್ಕೆ ಮಾಡಿಕೊಂಡರು. ಶ್ರೀ ಸಾಮಾನ್ಯ ಕುಟುಂಬಕ್ಕೆ ಸೇರಿದ ಇವರು ಆರ್ಥಿಕವಾಗಿ ಸ್ಥಿತಿವಂತರಲ್ಲದಿದ್ದರೂ ಅಪಾರ ಹೃದಯ ಶ್ರೀಮಂತಿಕೆ ಹೊಂದಿದ್ದರು.

ಕುದ್ಮುಲ್ ರಂಗರಾವ್ ಅಂಚೆ ತೆರಪಿನ ಶಿಕ್ಷಣದ ಮೂಲಕ ಪ್ಲೀಡರ್‌ಷಿಪ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮಂಗಳೂರಿನ ನ್ಯಾಯಾಲಯದಲ್ಲಿ ಅರ್ಜಿದಾರರ ಪರವಾಗಿ ವಕಾಲತ್ತು ವಹಿಸುವ ಅರ್ಹತೆ ಗಳಿಸಿದರು. ಇವರು ಬಾಲ್ಯದಿಂದಲೂ ಬಡವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಮನೋಧರ್ಮವನ್ನು ಹೊಂದಿದ್ದರು. ಭೂಮಾಲೀಕರು, ಉದ್ದಿಮೆದಾರರು ಮೊದಲಾದ ಬಲಾಢ್ಯರಿಂದ ಶೋಷಣೆಗೆ ಗುರಿಯಾದ ಅಸಹಾಯಕರಿಗೆ ಇವರು ನ್ಯಾಯಾಲಯದಲ್ಲಿ ಉಚಿತವಾಗಿ ಸಹಾಯ ಮಾಡುವ ಪ್ರವೃತ್ತಿ ಹೊಂದಿದ್ದರು. ಜೀವನ ನಿರ್ವಹಣೆಗಾಗಿ ಇವರು ನ್ಯಾಯಾಲಯದಲ್ಲಿ ವಕೀಲ ವೃತ್ತಿಯನ್ನು ನಿರ್ವಹಿಸಿದ್ದರೂ ಆ ಕಾಲದಲ್ಲಿ ಬ್ರಿಟಿಷರು ಭಾರತೀಯರ ಮೇಲೆ ನಡೆಸುತ್ತಿದ್ದ ದೌರ್ಜನ್ಯಗಳನ್ನು ಉಗ್ರವಾಗಿ ಪ್ರತಿಭಟಿಸಿ ಕರಾವಳಿ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಸಮಾನ ಮನಸ್ಕರೊಡಗೂಡಿ ಭೂಮಿಕೆ ಸಿದ್ದಪಡಿಸಿದರು. ಇವರನ್ನು ಅಂದು ಬಡವರ ಲಾಯರ್ ಎಂದೇ ಜನರು ಪ್ರೀತಿಯಿಂದ ಸಂಬೋಧಿಸುತ್ತಿದ್ದರು.

ಕುದ್ಮುಲ್ ರಂಗರಾವ್ ವಯಸ್ಸಿನಲ್ಲಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯವರಿಗಿಂತ ಹಿರಿಯರಾಗಿದ್ದರು. ದೀನ ದುರ್ಬಲರ ಅಭಿವೃದ್ಧಿ ಹರಿಕಾರರಾದ ಇವರ ಬಗ್ಗೆ ಗಾಂಧಿಯವರಿಗೆ ಅಪಾರ ಪ್ರೀತಿ ಮತ್ತು ಗೌರವ ಇತ್ತು. ಇವರ ಮಾನವೀಯತೆ ಮತ್ತು ರಾಷ್ಟ್ರಪ್ರೇಮದಿಂದ ಪ್ರಭಾವಿತರಾಗಿ ಗಾಂಧಿ ಇವರನ್ನು ಪ್ರೀತಿಪೂರ್ವಕವಾಗಿ ಗುರುವರ್ಯ ಎಂದೇ ಕರೆಯುತ್ತಿದ್ದರು. ಕರ್ನಾಟಕದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಯುವಜನರು ಮತ್ತು ಸಮಾನ ಮನಸ್ಕರನ್ನು ಸಂಘಟಿಸಲು ಗಾಂಧೀಜಿ ಕುದ್ಮುಲ್
ರಂಗರಾವ್‌ರವರ ಸಹಕಾರ ಪಡೆದಿದ್ದರು. ಇವರು ಸಮಾಜ ಸುಧಾರಣೆಗೆ ವಿಶೇಷ ಮಹತ್ವ ನೀಡಿ ಮಂಗಳೂರಿನಲ್ಲಿ ರಾಷ್ಟ್ರದ ಅಪ್ರತಿಮ ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯರು ಆರಂಭಿಸಿದ ಬ್ರಹ್ಮ ಸಮಾಜ ಶಾಖೆಯನ್ನು 1870ರಲ್ಲಿ ಆರಂಭಿಸಿದರು.

ಹಿಂದೂ ವರ್ಣವ್ಯವಸ್ಥೆ, ಅಸಮಾನತೆ ಮತ್ತು ಅಸ್ಪೃಶ್ಯತೆಗಳಿಂದ ಜಿಗುಪ್ಸೆಗೊಂಡ ಕುದ್ಮುಲ್ ರಂಗರಾವ್ ಕರಾವಳಿ ಕರ್ನಾಟಕದಲ್ಲಿ ಸಮಾಜ ಸುಧಾರಣೆಗೆ ಹಲವಾರು ವೈರುಧ್ಯಗಳು ಮತ್ತು ಅಪಾಯಗಳ ನಡುವೆಯೂ ಮುಂದಾದರು. ದಲಿತರು, ಹಿಂದುಳಿದವರು ಮತ್ತು ಶೋಷಿತ ಸಮುದಾಯಗಳು ಶಿಕ್ಷಣದಿಂದ ವಂಚಿತರಾಗಿರುವುದರಿಂದ ಬದುಕಿನ ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನ ಅವಕಾಶಗಳನ್ನು ಪಡೆಯಲು ಸಾಧ್ಯವಾಗಿಲ್ಲವೆಂದು ಕುದ್ಮುಲ್ ರಂಗರಾವ್ ಬಲವಾಗಿ ಪ್ರತಿಪಾದಿಸಿದರು.

ಪ್ರಗತಿಗೆ ವಿದ್ಯೆಯೇ ಮೂಲ ಎಂದು ನಂಬಿದ್ದ ಇವರು ಶೋಷಿತ ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಸಲುವಾಗಿ ಕಂಕನಾಡಿ, ಬೋಳೂರು, ಉಡುಪಿ, ಬನ್ನಂಜೆ, ನೇಜಾರು, ಅತ್ತಾವರ, ಬಾಬುಗುಡ್ಡೆ, ದಡ್ಡಲ್ ಮೊದಲಾದೆಡೆ ಉಚಿತ ಶಾಲೆಗಳನ್ನು ತೆರೆದರು. ಮಕ್ಕಳು ಶಾಲೆಗೆ ಬರುವುದನ್ನು ಪ್ರೋತ್ಸಾಹಿಸಲು ಅವರಿಗೆ ಉಚಿತ ಊಟದ ವ್ಯವಸ್ಥೆಯನ್ನೂ ಮಾಡಿದರು. ಮಕ್ಕಳ ಪೋಷಕರಿಗೆ ಅಂದಿನ ಕಷ್ಟಕಾಲದಲ್ಲಿ ದಿನಕ್ಕೆ ಎರಡು ಪೈಸೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಇವರ ಜ್ಞಾನದಾಸೋಹ ಕಾಯಕ ಮೇಲ್ವರ್ಗದವರ ಕೆಂಗಣ್ಣಿಗೆ ಗುರಿಯಾಯಿತು. ಪ್ರಾಣಭಯವನ್ನೂ ಲೆಕ್ಕಿಸದೇ ಇವರು ದೀನ ದುರ್ಬಲರ ಶಿಕ್ಷಣಕ್ಕೆ ಭದ್ರಬುನಾದಿ ಹಾಕಿದರು. ಅಂದು ವೈದಿಕಶಾಹಿ ಮತ್ತು ಬಂಡವಾಳಶಾಹಿಗಳ ದಬ್ಬಾಳಿಕೆಗೆ ಶೂದ್ರ ಸಮುದಾಯಗಳು ಕರಾವಳಿ ಕರ್ನಾಟಕ ಭಾಗದಲ್ಲಿ ಗುರಿಯಾಗಿದ್ದವು.

ದುರ್ಬಲ ವರ್ಗಗಳ ಅಸಹಾಯಕ ಮಕ್ಕಳು ಮತ್ತು ಯುವಕರನ್ನು ಭೂಮಾಲೀಕರು ಮತ್ತು ಶ್ರೀಮಂತರು ಜೀತದಾಳುಗಳನ್ನಾಗಿ ಇಟ್ಟುಕೊಂಡು ಶೋಷಣೆಗೆ ಗುರಿಪಡಿಸುತ್ತಿದ್ದರು. ಕುದ್ಮುಲ್ ರಂಗರಾವ್ ಇಂತಹ ಅಮಾನವೀಯ ಜೀತಪದ್ಧತಿಯ ವಿರುದ್ಧ ಸಾಮಾಜಿಕ ಹೋರಾಟವನ್ನು ರೂಪಿಸಿ ಬಹಳಷ್ಟು ಜೀತದಾಳುಗಳನ್ನು ಸ್ವತಂತ್ರರನ್ನಾಗಿಸಿದರು. ಯಾರು ಎಷ್ಟೇ ಹೆದರಿಸಿದರೂ ಇವರು ತಮ್ಮ ಸಾಮಾಜಿಕ ನ್ಯಾಯಪರ ಹೋರಾಟಗಳನ್ನು ಧೀಮಂತಿಕೆಯಿಂದ ಮುಂದುವರೆಸಿದರು. ಆ ಕಾಲದಲ್ಲಿ ವಿಧವೆಯರ ಪುನರ್ ವಿವಾಹ ಮತ್ತು ಅಂತರ್ಜಾತಿಯ ವಿವಾಹಗಳಿಗೆ ರಾಜಾರಾಮ್ ಮೋಹನರಾಯರು ಉತ್ತರ ಭಾರತದಲ್ಲಿ ದಿಟ್ಟ ಹೋರಾಟ ನಡೆಸಿದಂತೆ ದಕ್ಷಿಣದಲ್ಲಿ ಕುದ್ಮುಲ್ ರಂಗರಾವ್‌ರು ಪ್ರಬಲ ಹೋರಾಟ ನಡೆಸಿದರು. ತಮ್ಮ ಮಗಳು ರಾಧಾಭಾಯಿ ಚಿಕ್ಕ ವಯಸ್ಸಿನಲ್ಲಿ ವಿಧವೆಯಾದಾಗ ಆಕೆಯನ್ನು ಮರುಮದುವೆಯಾಗಲು ಮುಂದೆ ಬಂದ ಪ್ರಗತಿಶೀಲ ಯುವಕ ಪಿ.ಸುಬ್ಬರಾಯನ್ ಎಂಬುವರೊಂದಿಗೆ ವಿವಾಹ ಮಾಡಿ ಸಮಾಜಕ್ಕೆ ಮಾದರಿಯೆನಿಸಿದರು.

ಕುದ್ಮುಲ್ ರಂಗರಾಯರ ಹೋರಾಟಗಳು ಮತ್ತು ಕೊಡುಗೆಗಳಿಂದ ಮಹಾತ್ಮ ಗಾಂಧಿ ಪ್ರಭಾವಿತರಾಗಿ ದೀನ ದುರ್ಬಲರನ್ನು ಮೇಲೆತ್ತುವ ನಿಟ್ಟಿನಲ್ಲಿ ಅವರು ತಮಗೆ ಗುರು ಎಂದು ಶ್ಲಾಘಿಸಿದರು. ತಮ್ಮ ಪತ್ರಿಕೆಗಳಲ್ಲಿ ಇವರ ಮೇರು ವ್ಯಕ್ತಿತ್ವವನ್ನು ಗಾಂಧೀಜಿ ಮುಕ್ತ ಕಂಠದಿಂದ ಹೊಗಳಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಕುದ್ಮುಲ್ ರಂಗರಾಯರ ಅಸ್ಪೃಶ್ಯತೆಯ ನಿವಾರಣೆ ಮತ್ತು ಸಾಮಾಜಿಕ ನ್ಯಾಯಪರ ಹೋರಾಟಗಳಿಂದ ಪ್ರಭಾವಿತರಾಗಿದ್ದರು. ಇವರನ್ನು ಕರ್ನಾಟಕದ ಜ್ಯೋತಿ ಬಾಫುಲೆ ಎಂದು ಬಣ್ಣಿಸಲು ಹೆಮ್ಮೆಯೆನಿಸುತ್ತದೆ.

ಕುದ್ಮುಲ್ ರಂಗರಾಯರಿಗೆ ಶಿಕ್ಷಣ, ಸಮಾಜ ಸುಧಾರಣೆ, ಸ್ವಾತಂತ್ರ್ಯ ಹೋರಾಟ ಮೊದಲಾದವುಗಳ ಜೊತೆಗೆ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ಯುವಜನರ ಉದ್ಯಮಶೀಲತೆ ಅಭಿವೃದ್ಧಿಗಳ ಬಗ್ಗೆ ವಿಶೇಷ ಕಾಳಜಿ ಇತ್ತು. ಹಿಂದುಳಿದವರಿಗೆ ವೃತ್ತಿಪರ ಶಿಕ್ಷಣ ನೀಡುವ ಸಲುವಾಗಿ ಮಂಗಳೂರಿನ ಶೇಡಿಗುಡ್ಡೆ ಎಂಬಲ್ಲಿ ಕೈಗಾರಿಕಾ ತರಬೇತಿ ಶಾಲೆಯನ್ನು ಪ್ರಾರಂಭಿಸಿದರು. ನಿರುದ್ಯೋಗಿ ಯುವಕರಿಗೆ ಬಡಗಿ ಕೆಲಸ, ನೇಯ್ಗೆ, ತೋಟಗಾರಿಕೆ, ಕಸೂತಿ, ಜೇನು ಸಾಗಾಣಿಕೆ, ರೇಷ್ಮೆ ಹುಳು ಸಾಕಾಣಿಕೆ ಮೊದಲಾದ ವೃತ್ತಿಗಳಲ್ಲಿ ತರಬೇತಿ ಕೊಡಿಸಿ ಅವರಿಗೆ ಸ್ವಯಂ ಉದ್ಯೋಗಾವಕಾಶಗಳನ್ನು ಕಲ್ಪಿಸಿದರು. ಯುವಜನರ ಸಬಲೀಕರಣಕ್ಕೆ ಕುದ್ಮುಲ್ ರಂಗರಾವ್ ನೀಡಿದ ಕೊಡುಗೆ ಅಮೂಲ್ಯವಾದುದು.

ಕುದ್ಮುಲ್ ರಂಗರಾವ್ ಕರಾವಳಿ ಕರ್ನಾಟಕದಲ್ಲಿ ಸ್ವಾತಂತ್ರ್ಯಪೂರ್ವದಲ್ಲಿ ಸಹಕಾರ ಚಳುವಳಿಯನ್ನು ಮುನ್ನಡೆಸಿದರು. ಹಿಂದುಳಿದವರ ಆರ್ಥಿಕ ಅಭಿವೃದ್ಧಿಗಾಗಿ ಮಂಗಳೂರಿನ ಕೋರ್ಟ್ ಹಿಲ್ಸ್ ಪ್ರದೇಶದಲ್ಲಿ ಆದಿ ದ್ರಾವಿಡ ಸಹಕಾರ ಸಂಘ ಸ್ಥಾಪಿಸಿದರು. ಅಂದು ಬ್ಯಾಂಕುಗಳು ಮತ್ತು ಖಾಸಗಿ ಹಣಕಾಸು ಸಂಸ್ಥೆಗಳು ದಲಿತರಿಗೆ ನಿಲುಕುತ್ತಿಲ್ಲವಾದ್ದರಿಂದ ಆರ್ಥಿಕ ಸ್ವಾವಲಂಬನೆಗೆ ಪೂರಕವಾಗಿ ಸಹಕಾರ ಸಂಘವನ್ನು ಕುದ್ಮುಲ್ ರಂಗರಾವ್ ಸ್ಥಾಪಿಸಿ ನಾಡು ಕಂಡ ಶ್ರೇಷ್ಟ ಸಹಕಾರ ರತ್ನವಾಗಿ ಇತಿಹಾಸದಲ್ಲಿ ಉಳಿದಿದ್ದಾರೆ. ದುರ್ಬಲ ವರ್ಗಗಳ ಜನರು ನಗರ ಪ್ರದೇಶಗಳಿಗೆ ವಲಸೆ ಹೋಗಿ ಕೊಳೆಗೇರಿಗಳಲ್ಲಿ ಪ್ರಾಣಿಗಿಂತಲೂ ಕೀಳಾಗಿ ಬದುಕುವ ಹೀನಾಯ ಪ್ರವೃತ್ತಿಯನ್ನು ತಪ್ಪಿಸುವ ಸಲುವಾಗಿ ಇವರು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಪ್ರಕ್ರಿಯೆಗಳನ್ನು ಬಲಪಡಿಸಿ ದುರ್ಬಲರಿಗೆ ಜೀವನೋಪಾಯ ಮಾರ್ಗಗಳನ್ನು ಕಲ್ಪಿಸಬೇಕೆಂದು ಬಹಳ ಹಿಂದೆಯೇ ಕರೆ ನೀಡಿದ್ದರು. ಅಸ್ಪೃಶ್ಯ ಜನಾಂಗಗಳ ಉದ್ಧಾರಕ್ಕೆ ಕುದ್ಮುಲ್ ರಂಗರಾವ್ ಬದ್ಧರಾಗಿದ್ದರು. ದಲಿತರಲ್ಲೇ ಅತ್ಯಂತ ಹಿಂದುಳಿದ ಕೊರಗ ಸಮುದಾಯದ ಜನರಿಗೆ ಮಂಗಳೂರಿನ ಕೋರ್ಟುಗುಡ್ಡೆ ಬಳಿ ಸಾಲು ಮನೆಗಳನ್ನು ಕಟ್ಟಿಸಿದರು. ಬಡವರಿಗೆ ಜನತಾ ಮನೆಗಳನ್ನು ಕಟ್ಟಬೇಕೆಂಬ ಪರಿಕಲ್ಪನೆಯನ್ನು ಸ್ವಾತಂತ್ರ್ಯಪೂರ್ವದಲ್ಲಿ ಇವರು ಸರ್ಕಾರಕ್ಕೆ ನೀಡಿದರು.

ಇಂದಿಗೂ ಕೂಡ ಕರಾವಳಿ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಅಜಲು ಪದ್ಧತಿ ವಿರುದ್ಧ ಇವರು ಬಹಳ ಹಿಂದೆಯೇ ಪ್ರಬಲ ವಿರೋಧ ವ್ಯಕ್ತಪಡಿಸಿದರು. ಶ್ರೀಮಂತ ರೋಗಿಗಳ ಉಗುರು ಮತ್ತು ಕೂದಲನ್ನು ಅನ್ನಕ್ಕೆ ಕಲಸಿ ಕೊರಗ ಸಮುದಾಯದ ಜನರಿಗೆ ತಿನ್ನಿಸಿದರೆ ಕಾಯಿಲೆ ವಾಸಿಯಾಗುವುದೆಂಬ ಅತ್ಯಂತ ಕೆಳದರ್ಜೆಯ ಮೌಢ್ಯವೇ ಅಜಲು ಪದ್ಧತಿ. ಇಂತಹ ಮಾನವ ಹಕ್ಕುಗಳ ಉಲ್ಲಂಘನೆ ಪ್ರವೃತ್ತಿ ವಿರುದ್ಧ ಇವರು ದಿಟ್ಟ ಹೋರಾಟ ನಡೆಸಿದರು.

ಇವರು ಮಂಗಳೂರು ನಗರದಲ್ಲಿ ಸ್ಥಾಪಿಸಿರುವ ದಲಿತ ಹೆಣ್ಣುಮಕ್ಕಳ ವಿದ್ಯಾರ್ಥಿ ನಿಲಯವನ್ನು ಇಂದು ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸುತ್ತಿದೆ. ದಲಿತ ಅಧಿಕಾರಿಯೊಬ್ಬರು ಕಾರಿನಲ್ಲಿ ಬರುವಾಗಿ ಮೇಲೆದ್ದ ಧೂಳು ನನ್ನ ತಲೆಯ ಮೇಲೆ ಬಿದ್ದಾಗ ನನಗೆ ಅತೀವ ಆನಂದವುಂಟಾಗುತ್ತದೆ ಎಂದು ಹೇಳಿದ ಕುದ್ಮುಲ್ ರಂಗರಾವ್ ಅಂತಹ ಮಹಾತ್ಮರು ಇಂದು ಸಿಗುವುದುಂಟೆ? ಗಾಂಧಿ ಮತ್ತು ಕುದ್ಮುಲ್ ರಂಗರಾಯರ ಸಾಮಾಜಿಕ ಮತ್ತು ಆರ್ಥಿಕ ವಿಚಾರಧಾರೆಗಳು ಒಂದೇ ಆಗಿದ್ದು ಮಾನವೀಯ ನೆಲೆಗಟ್ಟನ್ನು ಹೊಂದಿವೆ. ಇಂದು ಹಿಂದುತ್ವದ ಪ್ರಯೋಗಶಾಲೆಯಾಗಿ ಪರಿವರ್ತನೆಗೊಳ್ಳುತ್ತಿರುವ ಭಾರತವನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಇಂತಹ ಮಹಾತ್ಮರು ಮತ್ತೊಮ್ಮೆ ಹುಟ್ಟಿ ಬರಬೇಕು. ಭಾರತಕ್ಕೆ ತಾಲಿಬಾನಿಗಳು ಬೇಡ, ಕುದ್ಮುಲ್ ರಂಗರಾವ್, ಗಾಂಧಿ, ಅಂಬೇಡ್ಕರ್ ಮೊದಲಾದ ಮಹಾತ್ಮರು ಇಂದು ಬೇಕೇ ಬೇಕು.

***

ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

(ಲೇಖಕರಾದ ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು ಅವರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ಅಪ್ರತಿಮ ವಿಚಾರವಾದಿ. ನೇರ, ದಿಟ್ಟ ನುಡಿಗೆ ಹೆಸರಾದವರು.)

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುದ್ಮುಲ್ ರಂಗರಾವ್ ಕುರಿತ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಅವರ ಲೇಖನ ಪ್ರಸ್ತುತ ಸಮಾಜಕ್ಕೆ ದಿಕ್ಸೂಚಿಯಂತಿದೆ.ಲೇಖಕರಿಗೆ ಅಭಿನಂದನೆಗಳು.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...