Homeಕರ್ನಾಟಕಇಂದಿನಿಂದ 'ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ' ಜಾರಿ

ಇಂದಿನಿಂದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜಾರಿ

- Advertisement -
- Advertisement -

‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ಯನ್ನು ಮೇ 15ರಂದು (ಇಂದು) ಜಾರಿಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ವಹಿಸಿಕೊಳ್ಳುವವರೆಗೆ ಬಿಬಿಎಂಪಿ ಮುಂದುವರಿಯಲಿದೆ.

ನಗರದ ಆಡಳಿತವನ್ನು ಸುಗಮಗೊಳಿಸುವುದು, ಮೂಲಸೌಕರ್ಯ, ಸಂಚಾರ ಮತ್ತು ನಗರ ವಿಸ್ತರಣೆ ಸೇರಿದಂತೆ ನಗರದ ಬೆಳೆಯುತ್ತಿರುವ ಸವಾಲುಗಳನ್ನು ಪರಿಹರಿಸುವ ಉದ್ದೇಶ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಹೊಂದಿದೆ ಎಂದು ಸರ್ಕಾರ ಹೇಳಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಜಾರಿಯಾದ ಮೇಲೆ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ (ಜಿಬಿಎ) 120 ದಿನಗಳಲ್ಲಿ ರಚನೆಯಾಗಲಿದೆ. ಅದಕ್ಕೆ ಆಡಳಿತಾಧಿಕಾರಿ ನೇಮಕಗೊಳ್ಳಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರದೇಶ (ಜಿಬಿಎ) ಗಡಿಗುರುತು ನಡೆಯಲಿದೆ. ಆನಂತರ ನಿಧಾನವಾಗಿ ಬಿಬಿಎಂಪಿ ಅಸ್ತಿತ್ವ ಕಳೆದುಕೊಳ್ಳಲಿದೆ.

“ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ ರಚನೆ ಶೀಘ್ರದಲ್ಲೇ ಆಗಲಿದೆ. ಹೊಸ ಪ್ರಾಧಿಕಾರವು ಬಿಬಿಎಂಪಿಯನ್ನು ಬಹು ಪಾಲಿಕೆಗಳಾಗಿ ವಿಭಜಿಸುವ ಮೂಲಕ ಬೆಂಗಳೂರಿನ ನಾಗರಿಕ ಆಡಳಿತವನ್ನು ಪುನರ್‌ರಚಿಸಲಿದೆ. ಇದು ದಕ್ಷತೆಯನ್ನು ಹೆಚ್ಚಿಸಲು ಮತ್ತು ಆಡಳಿತವನ್ನು ಸ್ಥಳೀಕರಿಸಲು ವಿನ್ಯಾಸಗೊಳಿಸಲಾದ ಕ್ರಮವಾಗಿದೆ” ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಳೆದ ವಾರ ಹೇಳಿದ್ದಾರೆ.

ಫೆಬ್ರವರಿ 2024ರಲ್ಲಿ ವಿಧಾನಮಂಡಲದ ಉಭಯ ಸದನಗಳು ಅನುಮೋದಿಸಿದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜನಸಂಖ್ಯೆಯ ಮಿತಿ ಮೀರಿದ ಬೆಳವಣಿಗೆ, ಮೂಲಸೌಕರ್ಯಗಳ ಕೊರತೆ, ಪರಿಸರ ಸಂರಕ್ಷಣೆಯ ಸವಾಲು ಸೇರಿದಂತೆ ಬೆಂಗಳೂರು ಮಹಾನಗರದ ಸಂಪೂರ್ಣ ಆಡಳಿತದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದೆ ಎಂಬುವುದು ಸರ್ಕಾರದ ವಾದ.

ಪ್ರಸ್ತುತ ಇರುವ 709 ಚದರ ಕಿ.ಮೀ ಬಿಬಿಎಂಪಿ ವ್ಯಾಪ್ತಿ ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರಾ ರಚನೆಯಾದ ಬಳಿಕ 1000 ಚದರ ಕಿ.ಮೀಗೆ ವಿಸ್ತರಣೆಯಾಗಲಿದೆ. ನಗರೀಕರಣಗೊಂಡಿರುವ ಕೆಲವು ಹಳ್ಳಿಗಳು ಪ್ರಾಧಿಕಾರದ ವ್ಯಾಪ್ತಿಗೆ ಬರಲಿವೆ. ಆದರೆ, ಇದು ನಿಧಾನವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಸದ್ಯಕ್ಕೆ ಬಿಬಿಎಂಪಿ ಪ್ರದೇಶವೇ ಪ್ರಾಧಿಕಾರದ ವ್ಯಾಪ್ತಿಯಾಗಿರಲಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು ನಗರದ ಕೈಗಾರಿಕಾ ಪ್ರದೇಶಗಳಲ್ಲದೆ ಎಲೆಕ್ಟ್ರಾನಿಕ್‌ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ, ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ಕ್ಕೆ ಸೇರಿಸಿಕೊಂಡು ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆ ಇದೆ ಎಂದು ವರದಿಗಳು ವಿವರಿಸಿವೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯ ಪ್ರಕಾರ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ನೇಮಿಸುತ್ತದೆ. ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಅವರು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಶಾಸಕರು–ಸಚಿವರು, ನಗರಾಭಿವೃದ್ಧಿ ಸಚಿವರು, ಪಾಲಿಕೆಗಳ ಮೇಯರ್‌ಗಳು, ಬಿಡಿಎ ಆಯುಕ್ತ, ಬೆಂಗಳೂರು ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಕಂದಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ನಿರ್ದೇಶಕ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯುಕ್ತ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಹಾನಗರ ಆಯುಕ್ತ ಪ್ರಾಧಿಕಾರದ ಸದಸ್ಯರಾಗಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಪ್ರಾಧಿಕಾರದ ಮುಖ್ಯ ಆಯುಕ್ತರ ಅಧಿಕಾರಾವಧಿ ಮೂರು ವರ್ಷಗಳು. ಮಸೂದೆಯ ಆರಂಭದಲ್ಲಿ ಇದ್ದ ದುಷ್ಕೃತ್ಯ, ನಿರ್ಲಕ್ಷ್ಯ ಅಥವಾ ಅಸಮರ್ಥತೆಯ ಆಧಾರದ ಮೇಲೆ ಮೂರನೇ ಎರಡರಷ್ಟು ಬಹುಮತದಿಂದ ಆಯುಕ್ತರನ್ನು ತೆಗೆದು ಹಾಕಬಹುದು ಎಂಬ ನಿಬಂಧನೆಯನ್ನು ಅಂತಿಮ ಮಸೂದೆ ತೆಗೆದು ಹಾಕಿದೆ. ಇದು ಆಯುಕ್ತರ ಅಧಿಕಾರವಧಿಯನ್ನು ಬಲಪಡಿಸಿದೆ.

ವರದಿಗಳ ಪ್ರಕಾರ, ಮುಖ್ಯ ಆಯುಕ್ತರನ್ನು ಸರ್ಕಾರ ನೇರವಾಗಿ ನೇಮ ಮಾಡುವುದಕ್ಕೆ ನಾಗರಿಕ ಗುಂಪುಗಳು ಮತ್ತು ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಸ್ಥಳೀಯ ಸ್ವ-ಆಡಳಿತಕ್ಕೆ ಒತ್ತು ನೀಡುವ 74ನೇ ಸಾಂವಿಧಾನಿಕ ತಿದ್ದುಪಡಿಯನ್ನು ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದರೂ ತೆರಿಗೆ ಪಾವತಿ, ವ್ಯಾಪ್ತಿ, ಅಧಿಕಾರಿಗಳ ಕರ್ತವ್ಯಗಳಲ್ಲಿ ಚಲಾವಣೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...