Homeಕರ್ನಾಟಕಇಂದಿನಿಂದ 'ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ' ಜಾರಿ

ಇಂದಿನಿಂದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜಾರಿ

- Advertisement -
- Advertisement -

‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ಯನ್ನು ಮೇ 15ರಂದು (ಇಂದು) ಜಾರಿಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ವಹಿಸಿಕೊಳ್ಳುವವರೆಗೆ ಬಿಬಿಎಂಪಿ ಮುಂದುವರಿಯಲಿದೆ.

ನಗರದ ಆಡಳಿತವನ್ನು ಸುಗಮಗೊಳಿಸುವುದು, ಮೂಲಸೌಕರ್ಯ, ಸಂಚಾರ ಮತ್ತು ನಗರ ವಿಸ್ತರಣೆ ಸೇರಿದಂತೆ ನಗರದ ಬೆಳೆಯುತ್ತಿರುವ ಸವಾಲುಗಳನ್ನು ಪರಿಹರಿಸುವ ಉದ್ದೇಶ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಹೊಂದಿದೆ ಎಂದು ಸರ್ಕಾರ ಹೇಳಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಜಾರಿಯಾದ ಮೇಲೆ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ (ಜಿಬಿಎ) 120 ದಿನಗಳಲ್ಲಿ ರಚನೆಯಾಗಲಿದೆ. ಅದಕ್ಕೆ ಆಡಳಿತಾಧಿಕಾರಿ ನೇಮಕಗೊಳ್ಳಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರದೇಶ (ಜಿಬಿಎ) ಗಡಿಗುರುತು ನಡೆಯಲಿದೆ. ಆನಂತರ ನಿಧಾನವಾಗಿ ಬಿಬಿಎಂಪಿ ಅಸ್ತಿತ್ವ ಕಳೆದುಕೊಳ್ಳಲಿದೆ.

“ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ ರಚನೆ ಶೀಘ್ರದಲ್ಲೇ ಆಗಲಿದೆ. ಹೊಸ ಪ್ರಾಧಿಕಾರವು ಬಿಬಿಎಂಪಿಯನ್ನು ಬಹು ಪಾಲಿಕೆಗಳಾಗಿ ವಿಭಜಿಸುವ ಮೂಲಕ ಬೆಂಗಳೂರಿನ ನಾಗರಿಕ ಆಡಳಿತವನ್ನು ಪುನರ್‌ರಚಿಸಲಿದೆ. ಇದು ದಕ್ಷತೆಯನ್ನು ಹೆಚ್ಚಿಸಲು ಮತ್ತು ಆಡಳಿತವನ್ನು ಸ್ಥಳೀಕರಿಸಲು ವಿನ್ಯಾಸಗೊಳಿಸಲಾದ ಕ್ರಮವಾಗಿದೆ” ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಳೆದ ವಾರ ಹೇಳಿದ್ದಾರೆ.

ಫೆಬ್ರವರಿ 2024ರಲ್ಲಿ ವಿಧಾನಮಂಡಲದ ಉಭಯ ಸದನಗಳು ಅನುಮೋದಿಸಿದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜನಸಂಖ್ಯೆಯ ಮಿತಿ ಮೀರಿದ ಬೆಳವಣಿಗೆ, ಮೂಲಸೌಕರ್ಯಗಳ ಕೊರತೆ, ಪರಿಸರ ಸಂರಕ್ಷಣೆಯ ಸವಾಲು ಸೇರಿದಂತೆ ಬೆಂಗಳೂರು ಮಹಾನಗರದ ಸಂಪೂರ್ಣ ಆಡಳಿತದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದೆ ಎಂಬುವುದು ಸರ್ಕಾರದ ವಾದ.

ಪ್ರಸ್ತುತ ಇರುವ 709 ಚದರ ಕಿ.ಮೀ ಬಿಬಿಎಂಪಿ ವ್ಯಾಪ್ತಿ ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರಾ ರಚನೆಯಾದ ಬಳಿಕ 1000 ಚದರ ಕಿ.ಮೀಗೆ ವಿಸ್ತರಣೆಯಾಗಲಿದೆ. ನಗರೀಕರಣಗೊಂಡಿರುವ ಕೆಲವು ಹಳ್ಳಿಗಳು ಪ್ರಾಧಿಕಾರದ ವ್ಯಾಪ್ತಿಗೆ ಬರಲಿವೆ. ಆದರೆ, ಇದು ನಿಧಾನವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಸದ್ಯಕ್ಕೆ ಬಿಬಿಎಂಪಿ ಪ್ರದೇಶವೇ ಪ್ರಾಧಿಕಾರದ ವ್ಯಾಪ್ತಿಯಾಗಿರಲಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು ನಗರದ ಕೈಗಾರಿಕಾ ಪ್ರದೇಶಗಳಲ್ಲದೆ ಎಲೆಕ್ಟ್ರಾನಿಕ್‌ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ, ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ಕ್ಕೆ ಸೇರಿಸಿಕೊಂಡು ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆ ಇದೆ ಎಂದು ವರದಿಗಳು ವಿವರಿಸಿವೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯ ಪ್ರಕಾರ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ನೇಮಿಸುತ್ತದೆ. ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಅವರು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಶಾಸಕರು–ಸಚಿವರು, ನಗರಾಭಿವೃದ್ಧಿ ಸಚಿವರು, ಪಾಲಿಕೆಗಳ ಮೇಯರ್‌ಗಳು, ಬಿಡಿಎ ಆಯುಕ್ತ, ಬೆಂಗಳೂರು ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಕಂದಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ನಿರ್ದೇಶಕ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯುಕ್ತ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಹಾನಗರ ಆಯುಕ್ತ ಪ್ರಾಧಿಕಾರದ ಸದಸ್ಯರಾಗಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಪ್ರಾಧಿಕಾರದ ಮುಖ್ಯ ಆಯುಕ್ತರ ಅಧಿಕಾರಾವಧಿ ಮೂರು ವರ್ಷಗಳು. ಮಸೂದೆಯ ಆರಂಭದಲ್ಲಿ ಇದ್ದ ದುಷ್ಕೃತ್ಯ, ನಿರ್ಲಕ್ಷ್ಯ ಅಥವಾ ಅಸಮರ್ಥತೆಯ ಆಧಾರದ ಮೇಲೆ ಮೂರನೇ ಎರಡರಷ್ಟು ಬಹುಮತದಿಂದ ಆಯುಕ್ತರನ್ನು ತೆಗೆದು ಹಾಕಬಹುದು ಎಂಬ ನಿಬಂಧನೆಯನ್ನು ಅಂತಿಮ ಮಸೂದೆ ತೆಗೆದು ಹಾಕಿದೆ. ಇದು ಆಯುಕ್ತರ ಅಧಿಕಾರವಧಿಯನ್ನು ಬಲಪಡಿಸಿದೆ.

ವರದಿಗಳ ಪ್ರಕಾರ, ಮುಖ್ಯ ಆಯುಕ್ತರನ್ನು ಸರ್ಕಾರ ನೇರವಾಗಿ ನೇಮ ಮಾಡುವುದಕ್ಕೆ ನಾಗರಿಕ ಗುಂಪುಗಳು ಮತ್ತು ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಸ್ಥಳೀಯ ಸ್ವ-ಆಡಳಿತಕ್ಕೆ ಒತ್ತು ನೀಡುವ 74ನೇ ಸಾಂವಿಧಾನಿಕ ತಿದ್ದುಪಡಿಯನ್ನು ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದರೂ ತೆರಿಗೆ ಪಾವತಿ, ವ್ಯಾಪ್ತಿ, ಅಧಿಕಾರಿಗಳ ಕರ್ತವ್ಯಗಳಲ್ಲಿ ಚಲಾವಣೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...