Homeಕರ್ನಾಟಕಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಮಾಜಿ ಶಾಸಕ ಡಿ. ಎನ್. ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

- Advertisement -
- Advertisement -

ಗುರುವಾರ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಹಸಿರುಬಣ್ಣದ ಬಾವುಟ ಬಿದ್ದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈಗ ಆ ಪ್ರಕರಣ ಹಲವು ತಿರುವುಗಳನ್ನು ಪಡೆದಿದೆ. ಆ ಬಾವುಟ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ) ಪಕ್ಷಕ್ಕೆ ಸೇರಿದ್ದಾಗಿದೆ ಎಂದು ಗುಲ್ಲು ಎಬ್ಬಿಸಿ ಎರಡು ಕೋಮುಗಳ ನಡುವೆ ದ್ವೇಷ  ಮತ್ತು ಗಲಭೆ ಹುಟ್ಟಿಸುವ ಪ್ರಯತ್ನ ಮಾಡಲಾಗಿತ್ತು.

ಶೃಂಗೇರಿಯ ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದವರಲ್ಲಿ ಪ್ರಮುಖರಾಗಿದ್ದರು. ಅವರು ಪೊಲೀಸರೊಂದಿಗೆ ನಡೆಸಿದ ಸಂಭಾಷಣೆಯ ತುಣುಕುಗಳು ವೈರಲ್ ಆಗಿದ್ದವು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿ, ಈ ಪ್ರಕರಣಕ್ಕೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಾರಣ ಎಂದು ಹೇಳಿ ಆ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿದ್ದರು. ಇದರ ಆರ್ಕೈವ್ ಇಲ್ಲಿದೆ.

ಆದರೆ ಈಗ ಶಂಕರಾಚಾರ್ಯರ ಪುತ್ಥಳಿ ಮೇಲೆ ಬಿದ್ದಿರುವ ಬಾವುಟ ಎಸ್‌ಡಿಪಿಐಗೆ ಸೇರಿದ್ದಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ ಒಂದು ಹಸಿರು ಬಣ್ಣದ ಬಾವುಟವನ್ನು ಪುತ್ಥಳಿಯ ಹತ್ತಿರವಿದ್ದ ಮಸೀದಿಯಿಂದ ಮಿಲಿಂದ್ ಎಂಬ ಯುವಕ ಕದ್ದು ಹೋಗುತ್ತಿದ್ದ ದೃಶ್ಯಗಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬಾವುಟ ಗಾಳಿಗೆ ಹಾರಿ ಬಂದು ಬಿದ್ದಿರುವ ಸಾಧ್ಯತೆಯೂ ಇದೆ ಎಂದು ಚಿಕ್ಕಮಗಳೂರು ಸೂಪರಿಂಡೆಂಟ್ ಪೊಲೀಸ್ ಹಕೈ ಅಕ್ಷಯ್ ಮಚೀಂದ್ರ ಅವರು ಹೇಳಿರುವುದಾಗಿ ‘ದ ಪ್ರಿಂಟ್’ ವರದಿ ಮಾಡಿತ್ತು. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಶಂಕರಾಚಾರ್ಯ ಅವರ ಪ್ರತಿಮೆ ಮೇಲೆ ಬಿದ್ದಿದ್ದು ಎಸ್‌ಡಿಪಿಐ ಬಾವುಟ ಅಲ್ಲವೇ ಅಲ್ಲ. ನಮ್ಮ ಪಕ್ಷದ ಘಟಕ ಅಲ್ಲಿ ಇಲ್ಲವೇ ಇಲ್ಲ. ಬಹುಸಂಖ್ಯಾತ ಕೋಮಿನ ಕೆಲವು ಕಿಡಿಗೇಡಿಗಳು ಬೇಕಂತಲೇ ಅನ್ಯ ಧರ್ಮವನ್ನು ಪ್ರತಿನಿಧಿಸುವ ಬಾವುಟವನ್ನು ಅಲ್ಲಿ ಹಾಕಿ, ಕೋಮು ಗಲಭೆಗೆ ಪ್ರಯತ್ನಿಸಿದ್ದಾರೆ”.

“ಇದಕ್ಕೆ ನೇರ ಕಾರಣ ಅಲ್ಲಿನ ಮಾಜಿ ಶಾಸಕ ಜೀವರಾಜ್ ಅವರು. ತಾವು ಚುನಾವಣೆಯಲ್ಲಿ ಸೋತ ನಂತರ ಅಲ್ಲಿ ಮತ್ತೆ ನೆಲೆ ಕಂಡುಕೊಳ್ಳಲು ಈಗ ಕೋಮು ಸೌಹಾರ್ದ ಕೆಡಿಸುವ ಪಿತೂರಿಗೆ ಮುಂದಾಗಿದ್ದಾರೆ. ಅಲ್ಲದೆ ಬೆಂಗಳೂರಿನ ಡಿಜಿ ಹಳ್ಳಿಯಲ್ಲಿ ನಡೆದ ಘರ್ಷಣೆ ಅಲ್ಲಿಗೆ ಸೀಮಿತವಾಗಿ ನಿಂತುಹೋಗಿದ್ದು ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಇದನ್ನು ರಾಜ್ಯಾದ್ಯಂತ ಹರಡಲು ಪ್ರಯತ್ನ ಮಾಡುತ್ತಿದ್ದಾರೆ.”

“ಅಲ್ಲದೆ ಮಸೀದಿಯಿಂದ ಮಿಲಿಂದ್ ಎಂಬುವವರು ಬಾವುಟವನ್ನು ಕದಿಯುತ್ತಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಸಿಕ್ಕಿಬಿದ್ದಿದೆ. ಇವೆಲ್ಲಾ ಘಟನೆಯ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಾವು ಆಗ್ರಹಿಸುತ್ತೇವೆ. ಮತ್ತು ಈ ಪಿತೂರಿಯನ್ನು ಖಂಡಿಸುತ್ತೇವೆ” ಎಂದಿದ್ದಾರೆ.

ಮಾಜಿ ಶಾಸಕ ಜೀವರಾಜ್ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಅಪ್ಸರ್ ಅವರು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಪೊಲೀಸರು ಮಿಲಿಂದ್ ಅವರನ್ನು ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...