Homeಕರ್ನಾಟಕಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಮಾಜಿ ಶಾಸಕ ಡಿ. ಎನ್. ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

- Advertisement -
- Advertisement -

ಗುರುವಾರ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಹಸಿರುಬಣ್ಣದ ಬಾವುಟ ಬಿದ್ದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈಗ ಆ ಪ್ರಕರಣ ಹಲವು ತಿರುವುಗಳನ್ನು ಪಡೆದಿದೆ. ಆ ಬಾವುಟ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ) ಪಕ್ಷಕ್ಕೆ ಸೇರಿದ್ದಾಗಿದೆ ಎಂದು ಗುಲ್ಲು ಎಬ್ಬಿಸಿ ಎರಡು ಕೋಮುಗಳ ನಡುವೆ ದ್ವೇಷ  ಮತ್ತು ಗಲಭೆ ಹುಟ್ಟಿಸುವ ಪ್ರಯತ್ನ ಮಾಡಲಾಗಿತ್ತು.

ಶೃಂಗೇರಿಯ ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದವರಲ್ಲಿ ಪ್ರಮುಖರಾಗಿದ್ದರು. ಅವರು ಪೊಲೀಸರೊಂದಿಗೆ ನಡೆಸಿದ ಸಂಭಾಷಣೆಯ ತುಣುಕುಗಳು ವೈರಲ್ ಆಗಿದ್ದವು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿ, ಈ ಪ್ರಕರಣಕ್ಕೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಾರಣ ಎಂದು ಹೇಳಿ ಆ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿದ್ದರು. ಇದರ ಆರ್ಕೈವ್ ಇಲ್ಲಿದೆ.

ಆದರೆ ಈಗ ಶಂಕರಾಚಾರ್ಯರ ಪುತ್ಥಳಿ ಮೇಲೆ ಬಿದ್ದಿರುವ ಬಾವುಟ ಎಸ್‌ಡಿಪಿಐಗೆ ಸೇರಿದ್ದಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ ಒಂದು ಹಸಿರು ಬಣ್ಣದ ಬಾವುಟವನ್ನು ಪುತ್ಥಳಿಯ ಹತ್ತಿರವಿದ್ದ ಮಸೀದಿಯಿಂದ ಮಿಲಿಂದ್ ಎಂಬ ಯುವಕ ಕದ್ದು ಹೋಗುತ್ತಿದ್ದ ದೃಶ್ಯಗಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬಾವುಟ ಗಾಳಿಗೆ ಹಾರಿ ಬಂದು ಬಿದ್ದಿರುವ ಸಾಧ್ಯತೆಯೂ ಇದೆ ಎಂದು ಚಿಕ್ಕಮಗಳೂರು ಸೂಪರಿಂಡೆಂಟ್ ಪೊಲೀಸ್ ಹಕೈ ಅಕ್ಷಯ್ ಮಚೀಂದ್ರ ಅವರು ಹೇಳಿರುವುದಾಗಿ ‘ದ ಪ್ರಿಂಟ್’ ವರದಿ ಮಾಡಿತ್ತು. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಶಂಕರಾಚಾರ್ಯ ಅವರ ಪ್ರತಿಮೆ ಮೇಲೆ ಬಿದ್ದಿದ್ದು ಎಸ್‌ಡಿಪಿಐ ಬಾವುಟ ಅಲ್ಲವೇ ಅಲ್ಲ. ನಮ್ಮ ಪಕ್ಷದ ಘಟಕ ಅಲ್ಲಿ ಇಲ್ಲವೇ ಇಲ್ಲ. ಬಹುಸಂಖ್ಯಾತ ಕೋಮಿನ ಕೆಲವು ಕಿಡಿಗೇಡಿಗಳು ಬೇಕಂತಲೇ ಅನ್ಯ ಧರ್ಮವನ್ನು ಪ್ರತಿನಿಧಿಸುವ ಬಾವುಟವನ್ನು ಅಲ್ಲಿ ಹಾಕಿ, ಕೋಮು ಗಲಭೆಗೆ ಪ್ರಯತ್ನಿಸಿದ್ದಾರೆ”.

“ಇದಕ್ಕೆ ನೇರ ಕಾರಣ ಅಲ್ಲಿನ ಮಾಜಿ ಶಾಸಕ ಜೀವರಾಜ್ ಅವರು. ತಾವು ಚುನಾವಣೆಯಲ್ಲಿ ಸೋತ ನಂತರ ಅಲ್ಲಿ ಮತ್ತೆ ನೆಲೆ ಕಂಡುಕೊಳ್ಳಲು ಈಗ ಕೋಮು ಸೌಹಾರ್ದ ಕೆಡಿಸುವ ಪಿತೂರಿಗೆ ಮುಂದಾಗಿದ್ದಾರೆ. ಅಲ್ಲದೆ ಬೆಂಗಳೂರಿನ ಡಿಜಿ ಹಳ್ಳಿಯಲ್ಲಿ ನಡೆದ ಘರ್ಷಣೆ ಅಲ್ಲಿಗೆ ಸೀಮಿತವಾಗಿ ನಿಂತುಹೋಗಿದ್ದು ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಇದನ್ನು ರಾಜ್ಯಾದ್ಯಂತ ಹರಡಲು ಪ್ರಯತ್ನ ಮಾಡುತ್ತಿದ್ದಾರೆ.”

“ಅಲ್ಲದೆ ಮಸೀದಿಯಿಂದ ಮಿಲಿಂದ್ ಎಂಬುವವರು ಬಾವುಟವನ್ನು ಕದಿಯುತ್ತಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಸಿಕ್ಕಿಬಿದ್ದಿದೆ. ಇವೆಲ್ಲಾ ಘಟನೆಯ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಾವು ಆಗ್ರಹಿಸುತ್ತೇವೆ. ಮತ್ತು ಈ ಪಿತೂರಿಯನ್ನು ಖಂಡಿಸುತ್ತೇವೆ” ಎಂದಿದ್ದಾರೆ.

ಮಾಜಿ ಶಾಸಕ ಜೀವರಾಜ್ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಅಪ್ಸರ್ ಅವರು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಪೊಲೀಸರು ಮಿಲಿಂದ್ ಅವರನ್ನು ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...