Homeಕರ್ನಾಟಕಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಮಾಜಿ ಶಾಸಕ ಡಿ. ಎನ್. ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

- Advertisement -
- Advertisement -

ಗುರುವಾರ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಹಸಿರುಬಣ್ಣದ ಬಾವುಟ ಬಿದ್ದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈಗ ಆ ಪ್ರಕರಣ ಹಲವು ತಿರುವುಗಳನ್ನು ಪಡೆದಿದೆ. ಆ ಬಾವುಟ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ) ಪಕ್ಷಕ್ಕೆ ಸೇರಿದ್ದಾಗಿದೆ ಎಂದು ಗುಲ್ಲು ಎಬ್ಬಿಸಿ ಎರಡು ಕೋಮುಗಳ ನಡುವೆ ದ್ವೇಷ  ಮತ್ತು ಗಲಭೆ ಹುಟ್ಟಿಸುವ ಪ್ರಯತ್ನ ಮಾಡಲಾಗಿತ್ತು.

ಶೃಂಗೇರಿಯ ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದವರಲ್ಲಿ ಪ್ರಮುಖರಾಗಿದ್ದರು. ಅವರು ಪೊಲೀಸರೊಂದಿಗೆ ನಡೆಸಿದ ಸಂಭಾಷಣೆಯ ತುಣುಕುಗಳು ವೈರಲ್ ಆಗಿದ್ದವು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿ, ಈ ಪ್ರಕರಣಕ್ಕೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಾರಣ ಎಂದು ಹೇಳಿ ಆ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿದ್ದರು. ಇದರ ಆರ್ಕೈವ್ ಇಲ್ಲಿದೆ.

ಆದರೆ ಈಗ ಶಂಕರಾಚಾರ್ಯರ ಪುತ್ಥಳಿ ಮೇಲೆ ಬಿದ್ದಿರುವ ಬಾವುಟ ಎಸ್‌ಡಿಪಿಐಗೆ ಸೇರಿದ್ದಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ ಒಂದು ಹಸಿರು ಬಣ್ಣದ ಬಾವುಟವನ್ನು ಪುತ್ಥಳಿಯ ಹತ್ತಿರವಿದ್ದ ಮಸೀದಿಯಿಂದ ಮಿಲಿಂದ್ ಎಂಬ ಯುವಕ ಕದ್ದು ಹೋಗುತ್ತಿದ್ದ ದೃಶ್ಯಗಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬಾವುಟ ಗಾಳಿಗೆ ಹಾರಿ ಬಂದು ಬಿದ್ದಿರುವ ಸಾಧ್ಯತೆಯೂ ಇದೆ ಎಂದು ಚಿಕ್ಕಮಗಳೂರು ಸೂಪರಿಂಡೆಂಟ್ ಪೊಲೀಸ್ ಹಕೈ ಅಕ್ಷಯ್ ಮಚೀಂದ್ರ ಅವರು ಹೇಳಿರುವುದಾಗಿ ‘ದ ಪ್ರಿಂಟ್’ ವರದಿ ಮಾಡಿತ್ತು. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಶಂಕರಾಚಾರ್ಯ ಅವರ ಪ್ರತಿಮೆ ಮೇಲೆ ಬಿದ್ದಿದ್ದು ಎಸ್‌ಡಿಪಿಐ ಬಾವುಟ ಅಲ್ಲವೇ ಅಲ್ಲ. ನಮ್ಮ ಪಕ್ಷದ ಘಟಕ ಅಲ್ಲಿ ಇಲ್ಲವೇ ಇಲ್ಲ. ಬಹುಸಂಖ್ಯಾತ ಕೋಮಿನ ಕೆಲವು ಕಿಡಿಗೇಡಿಗಳು ಬೇಕಂತಲೇ ಅನ್ಯ ಧರ್ಮವನ್ನು ಪ್ರತಿನಿಧಿಸುವ ಬಾವುಟವನ್ನು ಅಲ್ಲಿ ಹಾಕಿ, ಕೋಮು ಗಲಭೆಗೆ ಪ್ರಯತ್ನಿಸಿದ್ದಾರೆ”.

“ಇದಕ್ಕೆ ನೇರ ಕಾರಣ ಅಲ್ಲಿನ ಮಾಜಿ ಶಾಸಕ ಜೀವರಾಜ್ ಅವರು. ತಾವು ಚುನಾವಣೆಯಲ್ಲಿ ಸೋತ ನಂತರ ಅಲ್ಲಿ ಮತ್ತೆ ನೆಲೆ ಕಂಡುಕೊಳ್ಳಲು ಈಗ ಕೋಮು ಸೌಹಾರ್ದ ಕೆಡಿಸುವ ಪಿತೂರಿಗೆ ಮುಂದಾಗಿದ್ದಾರೆ. ಅಲ್ಲದೆ ಬೆಂಗಳೂರಿನ ಡಿಜಿ ಹಳ್ಳಿಯಲ್ಲಿ ನಡೆದ ಘರ್ಷಣೆ ಅಲ್ಲಿಗೆ ಸೀಮಿತವಾಗಿ ನಿಂತುಹೋಗಿದ್ದು ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಇದನ್ನು ರಾಜ್ಯಾದ್ಯಂತ ಹರಡಲು ಪ್ರಯತ್ನ ಮಾಡುತ್ತಿದ್ದಾರೆ.”

“ಅಲ್ಲದೆ ಮಸೀದಿಯಿಂದ ಮಿಲಿಂದ್ ಎಂಬುವವರು ಬಾವುಟವನ್ನು ಕದಿಯುತ್ತಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಸಿಕ್ಕಿಬಿದ್ದಿದೆ. ಇವೆಲ್ಲಾ ಘಟನೆಯ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಾವು ಆಗ್ರಹಿಸುತ್ತೇವೆ. ಮತ್ತು ಈ ಪಿತೂರಿಯನ್ನು ಖಂಡಿಸುತ್ತೇವೆ” ಎಂದಿದ್ದಾರೆ.

ಮಾಜಿ ಶಾಸಕ ಜೀವರಾಜ್ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಅಪ್ಸರ್ ಅವರು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಪೊಲೀಸರು ಮಿಲಿಂದ್ ಅವರನ್ನು ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...