Homeಕರ್ನಾಟಕಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಮಾಜಿ ಶಾಸಕ ಡಿ. ಎನ್. ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

- Advertisement -
- Advertisement -

ಗುರುವಾರ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಹಸಿರುಬಣ್ಣದ ಬಾವುಟ ಬಿದ್ದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈಗ ಆ ಪ್ರಕರಣ ಹಲವು ತಿರುವುಗಳನ್ನು ಪಡೆದಿದೆ. ಆ ಬಾವುಟ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ) ಪಕ್ಷಕ್ಕೆ ಸೇರಿದ್ದಾಗಿದೆ ಎಂದು ಗುಲ್ಲು ಎಬ್ಬಿಸಿ ಎರಡು ಕೋಮುಗಳ ನಡುವೆ ದ್ವೇಷ  ಮತ್ತು ಗಲಭೆ ಹುಟ್ಟಿಸುವ ಪ್ರಯತ್ನ ಮಾಡಲಾಗಿತ್ತು.

ಶೃಂಗೇರಿಯ ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದವರಲ್ಲಿ ಪ್ರಮುಖರಾಗಿದ್ದರು. ಅವರು ಪೊಲೀಸರೊಂದಿಗೆ ನಡೆಸಿದ ಸಂಭಾಷಣೆಯ ತುಣುಕುಗಳು ವೈರಲ್ ಆಗಿದ್ದವು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿ, ಈ ಪ್ರಕರಣಕ್ಕೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಾರಣ ಎಂದು ಹೇಳಿ ಆ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿದ್ದರು. ಇದರ ಆರ್ಕೈವ್ ಇಲ್ಲಿದೆ.

ಆದರೆ ಈಗ ಶಂಕರಾಚಾರ್ಯರ ಪುತ್ಥಳಿ ಮೇಲೆ ಬಿದ್ದಿರುವ ಬಾವುಟ ಎಸ್‌ಡಿಪಿಐಗೆ ಸೇರಿದ್ದಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ ಒಂದು ಹಸಿರು ಬಣ್ಣದ ಬಾವುಟವನ್ನು ಪುತ್ಥಳಿಯ ಹತ್ತಿರವಿದ್ದ ಮಸೀದಿಯಿಂದ ಮಿಲಿಂದ್ ಎಂಬ ಯುವಕ ಕದ್ದು ಹೋಗುತ್ತಿದ್ದ ದೃಶ್ಯಗಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬಾವುಟ ಗಾಳಿಗೆ ಹಾರಿ ಬಂದು ಬಿದ್ದಿರುವ ಸಾಧ್ಯತೆಯೂ ಇದೆ ಎಂದು ಚಿಕ್ಕಮಗಳೂರು ಸೂಪರಿಂಡೆಂಟ್ ಪೊಲೀಸ್ ಹಕೈ ಅಕ್ಷಯ್ ಮಚೀಂದ್ರ ಅವರು ಹೇಳಿರುವುದಾಗಿ ‘ದ ಪ್ರಿಂಟ್’ ವರದಿ ಮಾಡಿತ್ತು. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಶಂಕರಾಚಾರ್ಯ ಅವರ ಪ್ರತಿಮೆ ಮೇಲೆ ಬಿದ್ದಿದ್ದು ಎಸ್‌ಡಿಪಿಐ ಬಾವುಟ ಅಲ್ಲವೇ ಅಲ್ಲ. ನಮ್ಮ ಪಕ್ಷದ ಘಟಕ ಅಲ್ಲಿ ಇಲ್ಲವೇ ಇಲ್ಲ. ಬಹುಸಂಖ್ಯಾತ ಕೋಮಿನ ಕೆಲವು ಕಿಡಿಗೇಡಿಗಳು ಬೇಕಂತಲೇ ಅನ್ಯ ಧರ್ಮವನ್ನು ಪ್ರತಿನಿಧಿಸುವ ಬಾವುಟವನ್ನು ಅಲ್ಲಿ ಹಾಕಿ, ಕೋಮು ಗಲಭೆಗೆ ಪ್ರಯತ್ನಿಸಿದ್ದಾರೆ”.

“ಇದಕ್ಕೆ ನೇರ ಕಾರಣ ಅಲ್ಲಿನ ಮಾಜಿ ಶಾಸಕ ಜೀವರಾಜ್ ಅವರು. ತಾವು ಚುನಾವಣೆಯಲ್ಲಿ ಸೋತ ನಂತರ ಅಲ್ಲಿ ಮತ್ತೆ ನೆಲೆ ಕಂಡುಕೊಳ್ಳಲು ಈಗ ಕೋಮು ಸೌಹಾರ್ದ ಕೆಡಿಸುವ ಪಿತೂರಿಗೆ ಮುಂದಾಗಿದ್ದಾರೆ. ಅಲ್ಲದೆ ಬೆಂಗಳೂರಿನ ಡಿಜಿ ಹಳ್ಳಿಯಲ್ಲಿ ನಡೆದ ಘರ್ಷಣೆ ಅಲ್ಲಿಗೆ ಸೀಮಿತವಾಗಿ ನಿಂತುಹೋಗಿದ್ದು ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಇದನ್ನು ರಾಜ್ಯಾದ್ಯಂತ ಹರಡಲು ಪ್ರಯತ್ನ ಮಾಡುತ್ತಿದ್ದಾರೆ.”

“ಅಲ್ಲದೆ ಮಸೀದಿಯಿಂದ ಮಿಲಿಂದ್ ಎಂಬುವವರು ಬಾವುಟವನ್ನು ಕದಿಯುತ್ತಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಸಿಕ್ಕಿಬಿದ್ದಿದೆ. ಇವೆಲ್ಲಾ ಘಟನೆಯ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಾವು ಆಗ್ರಹಿಸುತ್ತೇವೆ. ಮತ್ತು ಈ ಪಿತೂರಿಯನ್ನು ಖಂಡಿಸುತ್ತೇವೆ” ಎಂದಿದ್ದಾರೆ.

ಮಾಜಿ ಶಾಸಕ ಜೀವರಾಜ್ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಅಪ್ಸರ್ ಅವರು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಪೊಲೀಸರು ಮಿಲಿಂದ್ ಅವರನ್ನು ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...