Homeಕರ್ನಾಟಕಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?

ಶೃಂಗೇರಿಯ ಮಾಜಿ ಶಾಸಕ ಡಿ. ಎನ್. ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

- Advertisement -
- Advertisement -

ಗುರುವಾರ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಹಸಿರುಬಣ್ಣದ ಬಾವುಟ ಬಿದ್ದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈಗ ಆ ಪ್ರಕರಣ ಹಲವು ತಿರುವುಗಳನ್ನು ಪಡೆದಿದೆ. ಆ ಬಾವುಟ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ) ಪಕ್ಷಕ್ಕೆ ಸೇರಿದ್ದಾಗಿದೆ ಎಂದು ಗುಲ್ಲು ಎಬ್ಬಿಸಿ ಎರಡು ಕೋಮುಗಳ ನಡುವೆ ದ್ವೇಷ  ಮತ್ತು ಗಲಭೆ ಹುಟ್ಟಿಸುವ ಪ್ರಯತ್ನ ಮಾಡಲಾಗಿತ್ತು.

ಶೃಂಗೇರಿಯ ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರು ಇದಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿದ್ದವರಲ್ಲಿ ಪ್ರಮುಖರಾಗಿದ್ದರು. ಅವರು ಪೊಲೀಸರೊಂದಿಗೆ ನಡೆಸಿದ ಸಂಭಾಷಣೆಯ ತುಣುಕುಗಳು ವೈರಲ್ ಆಗಿದ್ದವು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿ, ಈ ಪ್ರಕರಣಕ್ಕೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಾರಣ ಎಂದು ಹೇಳಿ ಆ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿದ್ದರು. ಇದರ ಆರ್ಕೈವ್ ಇಲ್ಲಿದೆ.

ಆದರೆ ಈಗ ಶಂಕರಾಚಾರ್ಯರ ಪುತ್ಥಳಿ ಮೇಲೆ ಬಿದ್ದಿರುವ ಬಾವುಟ ಎಸ್‌ಡಿಪಿಐಗೆ ಸೇರಿದ್ದಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ ಒಂದು ಹಸಿರು ಬಣ್ಣದ ಬಾವುಟವನ್ನು ಪುತ್ಥಳಿಯ ಹತ್ತಿರವಿದ್ದ ಮಸೀದಿಯಿಂದ ಮಿಲಿಂದ್ ಎಂಬ ಯುವಕ ಕದ್ದು ಹೋಗುತ್ತಿದ್ದ ದೃಶ್ಯಗಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬಾವುಟ ಗಾಳಿಗೆ ಹಾರಿ ಬಂದು ಬಿದ್ದಿರುವ ಸಾಧ್ಯತೆಯೂ ಇದೆ ಎಂದು ಚಿಕ್ಕಮಗಳೂರು ಸೂಪರಿಂಡೆಂಟ್ ಪೊಲೀಸ್ ಹಕೈ ಅಕ್ಷಯ್ ಮಚೀಂದ್ರ ಅವರು ಹೇಳಿರುವುದಾಗಿ ‘ದ ಪ್ರಿಂಟ್’ ವರದಿ ಮಾಡಿತ್ತು. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಶಂಕರಾಚಾರ್ಯ ಅವರ ಪ್ರತಿಮೆ ಮೇಲೆ ಬಿದ್ದಿದ್ದು ಎಸ್‌ಡಿಪಿಐ ಬಾವುಟ ಅಲ್ಲವೇ ಅಲ್ಲ. ನಮ್ಮ ಪಕ್ಷದ ಘಟಕ ಅಲ್ಲಿ ಇಲ್ಲವೇ ಇಲ್ಲ. ಬಹುಸಂಖ್ಯಾತ ಕೋಮಿನ ಕೆಲವು ಕಿಡಿಗೇಡಿಗಳು ಬೇಕಂತಲೇ ಅನ್ಯ ಧರ್ಮವನ್ನು ಪ್ರತಿನಿಧಿಸುವ ಬಾವುಟವನ್ನು ಅಲ್ಲಿ ಹಾಕಿ, ಕೋಮು ಗಲಭೆಗೆ ಪ್ರಯತ್ನಿಸಿದ್ದಾರೆ”.

“ಇದಕ್ಕೆ ನೇರ ಕಾರಣ ಅಲ್ಲಿನ ಮಾಜಿ ಶಾಸಕ ಜೀವರಾಜ್ ಅವರು. ತಾವು ಚುನಾವಣೆಯಲ್ಲಿ ಸೋತ ನಂತರ ಅಲ್ಲಿ ಮತ್ತೆ ನೆಲೆ ಕಂಡುಕೊಳ್ಳಲು ಈಗ ಕೋಮು ಸೌಹಾರ್ದ ಕೆಡಿಸುವ ಪಿತೂರಿಗೆ ಮುಂದಾಗಿದ್ದಾರೆ. ಅಲ್ಲದೆ ಬೆಂಗಳೂರಿನ ಡಿಜಿ ಹಳ್ಳಿಯಲ್ಲಿ ನಡೆದ ಘರ್ಷಣೆ ಅಲ್ಲಿಗೆ ಸೀಮಿತವಾಗಿ ನಿಂತುಹೋಗಿದ್ದು ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಇದನ್ನು ರಾಜ್ಯಾದ್ಯಂತ ಹರಡಲು ಪ್ರಯತ್ನ ಮಾಡುತ್ತಿದ್ದಾರೆ.”

“ಅಲ್ಲದೆ ಮಸೀದಿಯಿಂದ ಮಿಲಿಂದ್ ಎಂಬುವವರು ಬಾವುಟವನ್ನು ಕದಿಯುತ್ತಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಸಿಕ್ಕಿಬಿದ್ದಿದೆ. ಇವೆಲ್ಲಾ ಘಟನೆಯ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಾವು ಆಗ್ರಹಿಸುತ್ತೇವೆ. ಮತ್ತು ಈ ಪಿತೂರಿಯನ್ನು ಖಂಡಿಸುತ್ತೇವೆ” ಎಂದಿದ್ದಾರೆ.

ಮಾಜಿ ಶಾಸಕ ಜೀವರಾಜ್ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಅಪ್ಸರ್ ಅವರು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಪೊಲೀಸರು ಮಿಲಿಂದ್ ಅವರನ್ನು ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...