Homeಕರ್ನಾಟಕಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

- Advertisement -
- Advertisement -

ಚಿಕ್ಕಮಗಳೂರು: ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. “ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂಧ್ರ ಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ (ಜ.8) ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಸರ್ಕಾರ ತಿಳಿಸಿದೆ.

ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಎನ್‌ಕೌಂಟರ್ ನಕಲಿ ಎಂಬ ಆರೋಪಗಳು ಕೇಳಿ ಬಂದಿದ್ದವು.

ಮಾವನಹಕ್ಕುಗಳ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಎನ್‌ಕೌಂಟರ್ ಪರಿಹಾರವಲ್ಲ, ನಕ್ಸಲರನ್ನು ಶರಣಾಗತಿ ಮಾಡಿಸಿ ಅವರಿಗೆ ಸೂಕ್ತ ಪರಿಹಾರದ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದ್ದರು.

ಸಿಎಂ ಸಿದ್ದರಾಮಯ್ಯ ಅವರು ನಕ್ಸಲರು ಶರಣಾಗುವಂತೆ ಮನವಿ ಮಾಡಿದ್ದರು. ಹಿಂಸಾತ್ಮಕ ಚಟುವಟಿಕೆಗಳನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದರೆ ಸೂಕ್ತ ಪರಿಹಾರ ಪ್ಯಾಕೇಜ್ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಪತ್ರಿಕಾ ಹೇಳಿದ್ದ ನೀಡಿದ್ದ ಸಿಎಂ, “ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲಿಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾದರೆ, ಆ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ” ಎಂದಿದ್ದರು.

ಶರಣಾಗುವ ನಕ್ಸಲರು ಮುಖ್ಯವಾಹಿನಿಗೆ ಬಂದರೆ ತಮ್ಮ ಆತ್ಮಗೌರವಕ್ಕೆ ಯಾವುದೇ ಧಕ್ಕೆ ಆಗಬಾರದು ಮತ್ತು ಹೋರಾಟದ ಮಾರ್ಗವನ್ನು ಬದಲಾಯಿಸಿ ಪ್ರಜಾತಾಂತ್ರಿಕ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಲು ತಡೆಯಾಗಬಾರದು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜಾಮೀನಿನ ಮೇಲೆ ಹೊರಬರಲು ಸಹಕಾರ : ಶರಣಾಗುವ ನಕ್ಸಲರ ಮೇಲೆ ಹಲವು ಪ್ರಕರಣಗಳಿದ್ದು, ಜೈಲಿನಲ್ಲೇ ಕೊಳೆಯುವ ಪರಿಸ್ಥಿತಿ ಎದುರಾಗಬಾರದು. ಮುಖ್ಯವಾಹಿನಿಗೆ ಬಂದ ಬಳಿಕ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕಾರ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಮುಂದಿನ ಜೀವನದ ದೃಷ್ಟಿಯಿಂದ ಆರ್ಥಿಕ ನೆರವಿನ ಮನವಿಯನ್ನು ಮಾಡಿದ್ದಾರೆ ಎಂಬ ಮಾಹಿತಿ ಇದೆ.

ಸರ್ಕಾರಿ ದಾಖಲೆಗಳಲ್ಲಿ ದಲಿತ ಯುವಕನನ್ನು ಸಾಯಿಸಿ ಮಾಡಿದ್ದೇನು ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...