Homeಕರ್ನಾಟಕಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

- Advertisement -
- Advertisement -

ಚಿಕ್ಕಮಗಳೂರು: ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. “ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂಧ್ರ ಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ (ಜ.8) ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಸರ್ಕಾರ ತಿಳಿಸಿದೆ.

ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಎನ್‌ಕೌಂಟರ್ ನಕಲಿ ಎಂಬ ಆರೋಪಗಳು ಕೇಳಿ ಬಂದಿದ್ದವು.

ಮಾವನಹಕ್ಕುಗಳ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಎನ್‌ಕೌಂಟರ್ ಪರಿಹಾರವಲ್ಲ, ನಕ್ಸಲರನ್ನು ಶರಣಾಗತಿ ಮಾಡಿಸಿ ಅವರಿಗೆ ಸೂಕ್ತ ಪರಿಹಾರದ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದ್ದರು.

ಸಿಎಂ ಸಿದ್ದರಾಮಯ್ಯ ಅವರು ನಕ್ಸಲರು ಶರಣಾಗುವಂತೆ ಮನವಿ ಮಾಡಿದ್ದರು. ಹಿಂಸಾತ್ಮಕ ಚಟುವಟಿಕೆಗಳನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದರೆ ಸೂಕ್ತ ಪರಿಹಾರ ಪ್ಯಾಕೇಜ್ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಪತ್ರಿಕಾ ಹೇಳಿದ್ದ ನೀಡಿದ್ದ ಸಿಎಂ, “ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲಿಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾದರೆ, ಆ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ” ಎಂದಿದ್ದರು.

ಶರಣಾಗುವ ನಕ್ಸಲರು ಮುಖ್ಯವಾಹಿನಿಗೆ ಬಂದರೆ ತಮ್ಮ ಆತ್ಮಗೌರವಕ್ಕೆ ಯಾವುದೇ ಧಕ್ಕೆ ಆಗಬಾರದು ಮತ್ತು ಹೋರಾಟದ ಮಾರ್ಗವನ್ನು ಬದಲಾಯಿಸಿ ಪ್ರಜಾತಾಂತ್ರಿಕ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಲು ತಡೆಯಾಗಬಾರದು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜಾಮೀನಿನ ಮೇಲೆ ಹೊರಬರಲು ಸಹಕಾರ : ಶರಣಾಗುವ ನಕ್ಸಲರ ಮೇಲೆ ಹಲವು ಪ್ರಕರಣಗಳಿದ್ದು, ಜೈಲಿನಲ್ಲೇ ಕೊಳೆಯುವ ಪರಿಸ್ಥಿತಿ ಎದುರಾಗಬಾರದು. ಮುಖ್ಯವಾಹಿನಿಗೆ ಬಂದ ಬಳಿಕ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕಾರ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಮುಂದಿನ ಜೀವನದ ದೃಷ್ಟಿಯಿಂದ ಆರ್ಥಿಕ ನೆರವಿನ ಮನವಿಯನ್ನು ಮಾಡಿದ್ದಾರೆ ಎಂಬ ಮಾಹಿತಿ ಇದೆ.

ಸರ್ಕಾರಿ ದಾಖಲೆಗಳಲ್ಲಿ ದಲಿತ ಯುವಕನನ್ನು ಸಾಯಿಸಿ ಮಾಡಿದ್ದೇನು ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...