Homeಅಂತರಾಷ್ಟ್ರೀಯಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

- Advertisement -
- Advertisement -

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು “ನಾವು ಯಾರ ಅಡಿಯಾಳಾಗಿರಲು ಬಯಸುವುದಿಲ್ಲ” ಎಂದಿವೆ.

“ಅವರಿಗೆ ಇಷ್ಟ ಇರಲಿ, ಇಲ್ಲದಿರಲಿ, ಗ್ರೀನ್‌ಲ್ಯಾಂಡ್‌ನಲ್ಲಿ ಅಮೆರಿಕ ಏನನ್ನಾದರು ಮಾಡಲಿದೆ” ಎಂದು ಟ್ರಂಪ್ ಹೇಳಿದ ಬಳಿಕ, ಶುಕ್ರವಾರ (ಜ.9) ತಡರಾತ್ರಿ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು ಹೇಳಿಕೆ ನೀಡಿವೆ.

ಗ್ರೀನ್‌ಲ್ಯಾಂಡ್‌ ಅನ್ನು ಅಮೆರಿಕ ಖರೀದಿಸಲಿದೆ, ಅಗತ್ಯ ಬಿದ್ದರೆ ಮಿಲಿಟರಿ ಕಾರ್ಯಾಚರಣೆ ಮೂಲಕ ವಶಪಡಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ. ಇದರ ವಿರುದ್ದ ಜಂಟಿಯಾಗಿ ಪ್ರತಿಕ್ರಿಯೆ ಕೊಡಲು ಯುರೋಪ್‌ ದೇಶಗಳ ಸರ್ಕಾರಗಳು, ಪಕ್ಷಗಳು ಮತ್ತು ನಾಯಕರು ಪರದಾಡುತ್ತಿದ್ದಾರೆ. ಈ ನಡುವೆ ಗ್ರೀನ್‌ಲ್ಯಾಂಡ್‌ನ ರಾಜಕೀಯ ನಾಯಕರಿಂದ ಗಟ್ಟಿ ಪ್ರತಿಕ್ರಿಯೆ ಬಂದಿದೆ.

“ನಾವು ಅಮೆರಿಕನ್ನರಾಗಲು ಬಯಸುವುದಿಲ್ಲ, ನಾವು ಡ್ಯಾನಿಶ್ ಆಗಲೂ ಬಯಸುವುದಿಲ್ಲ, ನಾವು ಗ್ರೀನ್‌ಲ್ಯಾಂಡ್‌ನವರಾಗಲು ಬಯಸುತ್ತೇವೆ. ಗ್ರೀನ್‌ಲ್ಯಾಂಡ್‌ನ ಭವಿಷ್ಯವನ್ನು ಗ್ರೀನ್‌ಲ್ಯಾಂಡ್‌ನವರೇ ನಿರ್ಧರಿಸಬೇಕು” ಎಂದು ಗ್ರೀನ್‌ಲ್ಯಾಂಡ್‌ನ ಸಂಸತ್ತಿನ ಐದು ಪಕ್ಷಗಳ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇದರಲ್ಲಿ ಬೇರೆ ಯಾವುದೇ ದೇಶ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಆತುರದ ನಿರ್ಧಾರ ತೆಗೆದುಕೊಳ್ಳುವ ಒತ್ತಡವಿಲ್ಲದೆ, ವಿಳಂಬ ಮಾಡದೆ ಮತ್ತು ಇತರ ದೇಶಗಳ ಹಸ್ತಕ್ಷೇಪವಿಲ್ಲದೆ ನಮ್ಮ ದೇಶದ ಭವಿಷ್ಯವನ್ನು ನಾವೇ ನಿರ್ಧರಿಸಬೇಕು” ಅವರು ಒತ್ತಿ ಹೇಳಿದ್ದಾರೆ.

“ಅಮೆರಿಕ? ಇಲ್ಲ ಇಲ್ಲ..ನಾವು ಹಲವು ವರ್ಷಗಳ ಕಾಲ ವಸಾಹತುಶಾಹಿಯಾಗಿದ್ದೆವು. ನಾವು ಮತ್ತೆ ವಸಾಹತುಶಾಹಿಯಾಗಲು ಸಿದ್ಧರಿಲ್ಲ” ಎಂದು ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿರುವ 48 ವರ್ಷದ ಮೀನುಗಾರ ಜೂಲಿಯಸ್ ನೀಲ್ಸನ್ ಹೆಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

1953ರವರೆಗೆ ಡ್ಯಾನಿಶ್ ವಸಾಹತು ಪ್ರದೇಶವಾಗಿದ್ದ ಗ್ರೀನ್‌ಲ್ಯಾಂಡ್, 26 ವರ್ಷಗಳ ನಂತರ ಸ್ವರಾಜ್ಯವನ್ನು ಪಡೆದುಕೊಂಡಿತು ಮತ್ತು ಅಂತಿಮವಾಗಿ ಡೆನ್ಮಾರ್ಕ್‌ನೊಂದಿಗಿನ ತನ್ನ ಸಂಬಂಧವನ್ನು ಸಡಿಲಗೊಳಿಸುವ ಬಗ್ಗೆ ಯೋಚಿಸುತ್ತಿದೆ. ಇದನ್ನು ವಾಸ್ತವಿಕಗೊಳಿಸುವ ಕುರಿತು ಅನೇಕ ಗ್ರೀನ್‌ಲ್ಯಾಂಡ್‌ನವರು ಪ್ರಯತ್ನಿಸುತ್ತಿದ್ದಾರೆ.

ಪ್ರಸ್ತುತ ಅಧಿಕಾರದಲ್ಲಿರುವ ಒಕ್ಕೂಟವು ಆತುರದ ಸ್ವಾತಂತ್ರ್ಯದ ಪರವಾಗಿಲ್ಲ. 2025ರ ಶಾಸಕಾಂಗ ಚುನಾವಣೆಯಲ್ಲಿ ಶೇಕಡಾ 24.5ರಷ್ಟು ಮತಗಳನ್ನು ಗಳಿಸಿದ ಏಕೈಕ ವಿರೋಧ ಪಕ್ಷವಾದ ನಲೆರಾಕ್, ಸಾಧ್ಯವಾದಷ್ಟು ಬೇಗ ಸಂಬಂಧಗಳನ್ನು ಕಡಿತಗೊಳಿಸಲು ಬಯಸುತ್ತದೆ. ಆದರೆ, ಅದು ಜಂಟಿ ಘೋಷಣೆಗೆ ಸಹಿ ಹಾಕಿದೆ.

“ನಾವು ಹಲವು ವರ್ಷಗಳಿಂದ ಹೋರಾಡುತ್ತಿರುವ ಸ್ವಾತಂತ್ರ್ಯಕ್ಕಾಗಿ ತಯಾರಿ ಆರಂಭಿಸುವ ಸಮಯ ಬಂದಿದೆ” ಎಂದು ಸಂಸದ ಜುನೋ ಬರ್ತೆಲ್ಸನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...