Homeಅಂತರಾಷ್ಟ್ರೀಯಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

- Advertisement -
- Advertisement -

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು “ನಾವು ಯಾರ ಅಡಿಯಾಳಾಗಿರಲು ಬಯಸುವುದಿಲ್ಲ” ಎಂದಿವೆ.

“ಅವರಿಗೆ ಇಷ್ಟ ಇರಲಿ, ಇಲ್ಲದಿರಲಿ, ಗ್ರೀನ್‌ಲ್ಯಾಂಡ್‌ನಲ್ಲಿ ಅಮೆರಿಕ ಏನನ್ನಾದರು ಮಾಡಲಿದೆ” ಎಂದು ಟ್ರಂಪ್ ಹೇಳಿದ ಬಳಿಕ, ಶುಕ್ರವಾರ (ಜ.9) ತಡರಾತ್ರಿ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು ಹೇಳಿಕೆ ನೀಡಿವೆ.

ಗ್ರೀನ್‌ಲ್ಯಾಂಡ್‌ ಅನ್ನು ಅಮೆರಿಕ ಖರೀದಿಸಲಿದೆ, ಅಗತ್ಯ ಬಿದ್ದರೆ ಮಿಲಿಟರಿ ಕಾರ್ಯಾಚರಣೆ ಮೂಲಕ ವಶಪಡಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ. ಇದರ ವಿರುದ್ದ ಜಂಟಿಯಾಗಿ ಪ್ರತಿಕ್ರಿಯೆ ಕೊಡಲು ಯುರೋಪ್‌ ದೇಶಗಳ ಸರ್ಕಾರಗಳು, ಪಕ್ಷಗಳು ಮತ್ತು ನಾಯಕರು ಪರದಾಡುತ್ತಿದ್ದಾರೆ. ಈ ನಡುವೆ ಗ್ರೀನ್‌ಲ್ಯಾಂಡ್‌ನ ರಾಜಕೀಯ ನಾಯಕರಿಂದ ಗಟ್ಟಿ ಪ್ರತಿಕ್ರಿಯೆ ಬಂದಿದೆ.

“ನಾವು ಅಮೆರಿಕನ್ನರಾಗಲು ಬಯಸುವುದಿಲ್ಲ, ನಾವು ಡ್ಯಾನಿಶ್ ಆಗಲೂ ಬಯಸುವುದಿಲ್ಲ, ನಾವು ಗ್ರೀನ್‌ಲ್ಯಾಂಡ್‌ನವರಾಗಲು ಬಯಸುತ್ತೇವೆ. ಗ್ರೀನ್‌ಲ್ಯಾಂಡ್‌ನ ಭವಿಷ್ಯವನ್ನು ಗ್ರೀನ್‌ಲ್ಯಾಂಡ್‌ನವರೇ ನಿರ್ಧರಿಸಬೇಕು” ಎಂದು ಗ್ರೀನ್‌ಲ್ಯಾಂಡ್‌ನ ಸಂಸತ್ತಿನ ಐದು ಪಕ್ಷಗಳ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇದರಲ್ಲಿ ಬೇರೆ ಯಾವುದೇ ದೇಶ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಆತುರದ ನಿರ್ಧಾರ ತೆಗೆದುಕೊಳ್ಳುವ ಒತ್ತಡವಿಲ್ಲದೆ, ವಿಳಂಬ ಮಾಡದೆ ಮತ್ತು ಇತರ ದೇಶಗಳ ಹಸ್ತಕ್ಷೇಪವಿಲ್ಲದೆ ನಮ್ಮ ದೇಶದ ಭವಿಷ್ಯವನ್ನು ನಾವೇ ನಿರ್ಧರಿಸಬೇಕು” ಅವರು ಒತ್ತಿ ಹೇಳಿದ್ದಾರೆ.

“ಅಮೆರಿಕ? ಇಲ್ಲ ಇಲ್ಲ..ನಾವು ಹಲವು ವರ್ಷಗಳ ಕಾಲ ವಸಾಹತುಶಾಹಿಯಾಗಿದ್ದೆವು. ನಾವು ಮತ್ತೆ ವಸಾಹತುಶಾಹಿಯಾಗಲು ಸಿದ್ಧರಿಲ್ಲ” ಎಂದು ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿರುವ 48 ವರ್ಷದ ಮೀನುಗಾರ ಜೂಲಿಯಸ್ ನೀಲ್ಸನ್ ಹೆಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

1953ರವರೆಗೆ ಡ್ಯಾನಿಶ್ ವಸಾಹತು ಪ್ರದೇಶವಾಗಿದ್ದ ಗ್ರೀನ್‌ಲ್ಯಾಂಡ್, 26 ವರ್ಷಗಳ ನಂತರ ಸ್ವರಾಜ್ಯವನ್ನು ಪಡೆದುಕೊಂಡಿತು ಮತ್ತು ಅಂತಿಮವಾಗಿ ಡೆನ್ಮಾರ್ಕ್‌ನೊಂದಿಗಿನ ತನ್ನ ಸಂಬಂಧವನ್ನು ಸಡಿಲಗೊಳಿಸುವ ಬಗ್ಗೆ ಯೋಚಿಸುತ್ತಿದೆ. ಇದನ್ನು ವಾಸ್ತವಿಕಗೊಳಿಸುವ ಕುರಿತು ಅನೇಕ ಗ್ರೀನ್‌ಲ್ಯಾಂಡ್‌ನವರು ಪ್ರಯತ್ನಿಸುತ್ತಿದ್ದಾರೆ.

ಪ್ರಸ್ತುತ ಅಧಿಕಾರದಲ್ಲಿರುವ ಒಕ್ಕೂಟವು ಆತುರದ ಸ್ವಾತಂತ್ರ್ಯದ ಪರವಾಗಿಲ್ಲ. 2025ರ ಶಾಸಕಾಂಗ ಚುನಾವಣೆಯಲ್ಲಿ ಶೇಕಡಾ 24.5ರಷ್ಟು ಮತಗಳನ್ನು ಗಳಿಸಿದ ಏಕೈಕ ವಿರೋಧ ಪಕ್ಷವಾದ ನಲೆರಾಕ್, ಸಾಧ್ಯವಾದಷ್ಟು ಬೇಗ ಸಂಬಂಧಗಳನ್ನು ಕಡಿತಗೊಳಿಸಲು ಬಯಸುತ್ತದೆ. ಆದರೆ, ಅದು ಜಂಟಿ ಘೋಷಣೆಗೆ ಸಹಿ ಹಾಕಿದೆ.

“ನಾವು ಹಲವು ವರ್ಷಗಳಿಂದ ಹೋರಾಡುತ್ತಿರುವ ಸ್ವಾತಂತ್ರ್ಯಕ್ಕಾಗಿ ತಯಾರಿ ಆರಂಭಿಸುವ ಸಮಯ ಬಂದಿದೆ” ಎಂದು ಸಂಸದ ಜುನೋ ಬರ್ತೆಲ್ಸನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...