Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

- Advertisement -
- Advertisement -

ನಿಮ್ಮನ್ನು ಸತತವಾಗಿ ಗಮನಿಸುವೆ; ಇದುವೆ ನನ್ನ ಸಂದೇಶ : ಗ್ರೇಟಾ ತನ್ಬೆರ್ಗ್‌

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ?

ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು ಹಾಗೂ ನನ್ನ ಬಾಲ್ಯವನ್ನು ನನ್ನಿಂದ ಕದ್ದಿದ್ದೀರ. ಆದರೂ ನಾನು ಅದೃಷ್ಟವಂತೆ. ಆದರೆ ಜನರು ನರಳುತ್ತಿದ್ದಾರೆ. ಜನರು ಸಾಯುತ್ತಿದ್ದಾರೆ. ಪರಿಸರ ವ್ಯವಸ್ಥೆಯು ಸಂಪೂರ್ಣವಾಗಿ ನಾಶವಾಗುತ್ತಿದೆ. ಒಂದು ಸಾಮೂಹಿಕ ಅಳಿವಿನ ಪ್ರಾರಂಭದ ಘಟ್ಟದಲ್ಲಿದ್ದೇವೆ. ಹಾಗೂ ಇಂಥ ಸಮಯದಲ್ಲಿ ನೀವು ದುಡ್ಡು ಮತ್ತು ಆರ್ಥಿಕ ಬೆಳವಣಿಗೆಯ ಚೆಂದದ ಕಥೆಗಳ ಬಗ್ಗೆಯೇ ಮಾತನಾಡುತ್ತೀರಿ. ನಿಮಗೆಷ್ಟು ಧೈರ್ಯ?

ಮೂವತ್ತು ವರ್ಷಗಳಗಿಂದ ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತಲಿದೆ. ಆದರೂ ನಿಮ್ಮ ಮುಖವನ್ನು ಬೇರೆಡೆ ತಿರುಗಿಸಲು ನಿಮಗೆಷ್ಟು ಧೈರ್ಯ? ಹಾಗೂ ಈ ಸಮಸ್ಯೆಯ ಪರಿಹಾರ ಮತ್ತು ಇದಕ್ಕೆ ಬೇಕಿರುವ ರಾಜಕೀಯ ಕಾಣಿಸಿಕೊಳ್ಳದೇ ಇದ್ದರೂ ಇಲ್ಲಿ ಬಂದು, ನಾವು ಮಾಡಬೇಕಾದದ್ದನ್ನು ಮಾಡುತ್ತಿದ್ದೇವೆ ಎಂದು ಹೇಳಲು ನಿಮಗೆಷ್ಟು ಧೈರ್ಯ?

ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ ಮತ್ತು ಇದರ ತುರ್ತನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನೀವು ಹೇಳುತ್ತೀರಿ. ಆದರೆ, ನಾನೆಷ್ಟೇ ಸಿಟ್ಟಿನಲ್ಲಿರಲಿ ಮತ್ತು ದುಃಖದಲ್ಲಿರಲಿ, ನಿಮ್ಮ ಈ ಮಾತುಗಳನ್ನು ನಂಬಲು ಸಾಧ್ಯವಿಲ್ಲ. ಏಕೆಂದರೆ, ಒಂದು ವೇಳೆ ನೀವು ಪರಿಸ್ಥಿತಿಯನ್ನು ನಿಜವಾಗಿಯೂ ಅರ್ಥಮಾಡಿಕೊಂಡು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ವಿಫಲವಾಗುತ್ತಿದ್ದರೆ, ನೀವು ದುಷ್ಟರು ಎಂತಾಗುವುದು. ಹಾಗೂ ನಾನು ಇದನ್ನು ನಂಬಲು ತಯಾರಿಲ್ಲ.

ಹತ್ತು ವರ್ಷಗಳಲ್ಲಿ ಹೊರಸೂಸುವಿಕೆಯನ್ನು (ಎಮಿಷನ್ಸ್) ಅರ್ಧದಷ್ಟು ಕಡಿತಗೊಳಿಸುವ ಈ ಜನಪ್ರಿಯ ಪರಿಕಲ್ಪನೆ ಏನು ಮಾಡಬಲ್ಲದು ಗೊತ್ತೆ? ಇದು 1.5 ಡಿಗ್ರಿಗಿಂತ ಕಡಿಮೆ ಇರಲು ಕೇವಲ 50% ಅವಕಾಶವನ್ನು ನೀಡುತ್ತದೆ ಹಾಗೂ ಮನುಷ್ಯನ ನಿಯಂತ್ರಣವನ್ನು ಮೀರಿದ ಮತ್ತೇ ಬದಲಾಯಿಸಲಾಗದಂತಹ ಸರಣಿ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವ ಅಪಾಯ ಹೊಂದಿದೆ.

50% ನಿಮಗೆ ಒಪ್ಪಿಗೆ ಇರಬಹುದು. ಆದರೆ, ಈ ಸಂಖ್ಯೆಗಳು ನಿರ್ಣಾಯಕ ಹಂತಗಳನ್ನು (ಟಿಪಿಂಗ್ ಪಾಯಿಂಟ್ಸ್), ಹೆಚ್ಚಿನ ಫೀಡ್‍ಬ್ಯಾಕ್ ಲೂಪ್ಸ್, ವಾಯು ಮಾಲಿನ್ಯದಿಂದ ಕಾಣಿಸಿಕೊಳ್ಳದ ತಾಪಮಾನದ ಹೆಚ್ಚುವರಿ ಏರಿಕೆ ಅಥವಾ ಹವಾಮಾನದ ನ್ಯಾಯದ ಅಂಶಗಳನ್ನು ಹೊಂದಿಲ್ಲ. ಇದರೊಂದಿಗೆ, ಗಾಳಿಯಲ್ಲಿರುವ ಶತಕೋಟಿ ಟನ್‍ಗಳಷ್ಟಿರುವ ನಿಮ್ಮ ಕಾರ್ಬನ್ ಡೈಆಕ್ಸೈಡ್ ಅನ್ನು ನಮ್ಮ ಪೀಳಿಗೆಯ ಜನರು ಹೀರವವರು ಎನ್ನುವುದರ ಮೇಲೆ ಅವಲಂಬಿಸಿಲಾಗಿದೆ. ಈ ಗಾಳಿಯನ್ನು ಸೇವಿಸಲು ಬೇಕಾದ ತಂತ್ರಜ್ಞಾನದ ಅಭಿವೃದ್ಧಿಯೂ ಕಾಣಿಸಿಕೊಳ್ಳುತ್ತಿಲ್ಲ.

ಹಾಗಾಗಿ, ಈ 50% ನಮಗೆ ಒಪ್ಪಿಗೆಯಿಲ್ಲ – ಇದರ ಪರಿಣಾಮಗಳನ್ನು ಎದುರಿಸಬೇಕಾದ ನಮಗೆ ಒಪ್ಪಿಗೆಯಿಲ್ಲ.

ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಹೆಚ್ಚಳಕ್ಕಿಂತ ಕೆಳಗಿರಬೇಕಾದ 67% ಅವಕಾಶವನ್ನು ಹೊಂದಬೇಕಾದರೆ, ಕ್ಲೈಮೇಟ್ ಚೇಂಜ್‍ನ ಅಂತತರಾಷ್ಟ್ರೀಯ ಪ್ಯಾನೆಲ್ ನೀಡಿದ ಅತಿ ಹೆಚ್ಚಿನ ಸಂಭವನೀಯತೆ – ಇಡೀ ವಿಶ್ವವು ಹೊರಸೂಸಲು 1ನೇ ಜನವರಿ 2018ರಂದು ಕಾರ್ಬನ್ ಡೈಆಕ್ಸೈಡ್ ನ 420 ಗಿಗಾಟನ್ ಹೊಂದಿತ್ತು. ಇಂದು ಆ ಸಂಖ್ಯಯೂ ಈಗಾಗಲೇ 350 ಗಿಗಾಟನ್‍ಗಳಗಿಂತ ಕಡಿಮೆಯಾಗಿದೆ.

ಕೆಲವು ತಾಂತ್ರಿಕ ಪರಿಹಾರಗಳಿಂದ ಮತ್ತು ‘ಎಂದಿನಂತೆ ನಡೆಯುವ ವ್ಯವಹಾರ’ದಿಂದ ಇದನ್ನು ಬಗೆಹರಿಸಬಹುದು ಎಂದು ನಟಿಸಲು ನಿಮಗೆಷ್ಟು ಧೈರ್ಯ? ಇಂದಿನ ಹೊರಸೂಸುವಿಕೆಯ ಲೆವೆಲ್ ನೋಡಿದರೆ, ಈಗ ಬಾಕಿ ಉಳಿದಿರುವ ಕಾರ್ಬನ್ ಡೈಆಕ್ಸೈಡ್ ಬಜೆಟ್ ಕೇವಲ ಎಂಟೂವರೆ ವರ್ಷಗಳಲ್ಲಿ ಮುಗಿದುಹೋಗುವುದು.

ಈ ಅಂಕಿ ಅಂಶಗಳಿಗೆ ಪೂರಕವಾಗಿ ಯಾವುದೇ ಪರಿಹಾರಗಳು ಅಥವಾ ಯೋಜನೆಗಳು ಇಂದು ಕಾಣಿಸಿಕೊಳ್ಳುವುದಿಲ್ಲ, ಏಕೆಂದರೆ, ಈ ಅಂಕಿಅಂಶಗಳು ತುಂಬಾ ಅನಾನುಕೂಲಕರವಾಗಿವೆ. ಹಾಗೂ ನೀವುಗಳು ಇದನ್ನು ಹೀಗೆಯೇ ಇದೆ ಎಂದು ಹೇಳಿಕೊಳ್ಳುವಷ್ಟು ಪ್ರಬುದ್ಧರಾಗಿಲ್ಲ.

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

ಇದರಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಬಿಡುವುದಿಲ್ಲ. ಇಲ್ಲಿಯೇ, ಇದೇ ಸಮಯದಲ್ಲಿ ನಾವು ಗೆರೆಯನ್ನು ಎಳೆಯುತ್ತಿದ್ದೇವೆ. ಜಗತ್ತು ಎಚ್ಚೆತ್ತುಕೊಳ್ಳುತ್ತಿದೆ. ಬದಲಾವಣೆ ಬರುತ್ತಿದೆ, ನಿಮಗಿಷ್ಟವಾಗಲಿ ಆಗದೇ ಇರಲಿ ಬದಲಾವಣೆ ಬರುತ್ತಿದೆ…

ಧನ್ಯವಾದಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....